Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ತುಮಕೂರು
  4. ರೈತರು, ಯುವ ಉದ್ದಿಮೆದಾರರಿಗೆ ಮಾಹಿತಿ...

ರೈತರು, ಯುವ ಉದ್ದಿಮೆದಾರರಿಗೆ ಮಾಹಿತಿ ಕೇಂದ್ರವಾದ ‘ಸಿದ್ದಗಂಗಾ’

ವಾರ್ತಾಭಾರತಿವಾರ್ತಾಭಾರತಿ17 March 2025 10:19 AM IST
share
ರೈತರು, ಯುವ ಉದ್ದಿಮೆದಾರರಿಗೆ ಮಾಹಿತಿ ಕೇಂದ್ರವಾದ ‘ಸಿದ್ದಗಂಗಾ’

ತುಮಕೂರು : ಅನ್ನ, ಅಕ್ಷರ, ಆಶ್ರಯ ಸೇರಿದಂತೆ ತ್ರಿವಿಧ ದಾಸೋಹಕ್ಕೆ ಹೆಸರುವಾಸಿಯಾದ ಸಿದ್ದಗಂಗಾ ಸಂಸ್ಥೆ, ಯುವಜನರಿಗಲ್ಲದೆ, ರೈತರು, ಯುವ ಉದ್ದಿಮೆದಾರರಿಗೂ ಮಾಹಿತಿ ಕೇಂದ್ರವಾಗಿ 61 ವರ್ಷಗಳಿಂದಲೂ ಕೆಲಸ ಮಾಡುತ್ತಿದೆ. ಸಿದ್ದಗಂಗಾ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನದ ಮೂಲಕ ಕೃಷಿಕರು ಮತ್ತು ಕೈಗಾರಿಕೋದ್ಯಮಿಗಳಿಗೆ ನೆರವಾಗುತ್ತಾ ಬಂದಿದೆ.

ಪ್ರತೀ ವರ್ಷ ಶಿವರಾತ್ರಿಯ ವೇಳೆ ಶ್ರೀಮಠದ ಶ್ರೀಚನ್ನಬಸವೇಶ್ವರ ಶಿಕ್ಷಕರ ತರಬೇತಿ ಕೇಂದ್ರದ ಆವರಣದಲ್ಲಿ ಶ್ರೀಸಿದ್ದಗಂಗಾ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ನಡೆಯುತ್ತವೆ. ಕೃಷಿ ಮತ್ತು ಕೃಷಿಗೆ ಪೂರಕವಾದ ಎಲ್ಲ ಇಲಾಖೆಗಳ ಸಹಕಾರದೊಂದಿಗೆ ಸುಮಾರು 15 ದಿನಗಳ ಕಾಲ ತಮ್ಮ ಮಳಿಗೆ ತೆರೆದು ಜಾತ್ರೆಗೆ ಬರುವ ಭಕ್ತರು, ರೈತರು, ಯುವಜನರಿಗೆ ಕೃಷಿ, ತೋಟಗಾರಿಕೆ, ಅರಣ್ಯ, ರೇಷ್ಮೆ, ಮೀನುಗಾರಿಕೆ, ಜವಳಿ ಮತ್ತು ಕೈಮಗ್ಗ, ಲೋಕೋಪಯೋಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ಕೇಂದ್ರ ಮತ್ತು ರಾಜ್ಯ ಸರಕಾರಗಳ ವಿವಿಧ ಇಲಾಖೆಗಳಿಂದ ಮಾಹಿತಿ ಒದಗಿಸುವ ಕೆಲಸವನ್ನು 61 ವರ್ಷಗಳಿಂದ ನಿರಂತರವಾಗಿ ಮಾಡುತ್ತಾ ಬಂದಿದೆ.

1964ರಲ್ಲಿ ಶ್ರೀಸಿದ್ದಗಂಗಾ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನವನ್ನು ಸಣ್ಣದಾಗಿ ಆರಂಭಿಸಿದ್ದು, ಇಂದು ಹತ್ತಾರು ಇಲಾಖೆಗಳು ತಮ್ಮ ಮಳಿಗೆ ತೆರೆದು ಜನರಿಗೆ ವಿವರಣೆ ನೀಡುವ ಮಟ್ಟಕ್ಕೆ ಬೆಳೆದಿದೆ.

ತುಮಕೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಗ್ರಾಮಾಂತರ, ಚಿತ್ರದುರ್ಗ ಸೇರಿದಂತೆ ಗ್ರಾಮೀಣ ಭಾಗದ ಹೆಚ್ಚು ಜನರು ಜಾತ್ರೆಗೆ ಆಗಮಿಸುವ ಹಿನ್ನೆಲೆಯಲ್ಲಿ ಕೃಷಿ ಮತ್ತು ಕೈಗಾರಿಕಾ ಕ್ಷೇತ್ರದಲ್ಲಿನ ಹೊಸ ಆವಿಷ್ಕಾರಗಳು, ಹೊಸ ಕೃಷಿ ಪದ್ಧತಿ, ಹೊಸ ತಳಿಗಳ, ಬೀಜೋತ್ಪಾದನೆ, ಬೀಜೋಪಚಾರ ಸೇರಿದಂತೆ ವೈಜ್ಞಾನಿಕ ಮಾಹಿತಿಗಳನ್ನು ಜನರಿಗೆ ತಿಳಿಸುವ ಗುರುತರ ಕೆಲಸವನ್ನು ಕಳೆದ 61 ವರ್ಷಗಳಿಂದಲೂ ಮಾಡಿಕೊಂಡು ಬರಲಾಗುತ್ತಿದೆ.

ಕೃಷಿ, ತೋಟಗಾರಿಕೆ, ರೇಷ್ಮೆ, ಅರಣ್ಯ, ಮೀನುಗಾರಿಕೆ ಇಲಾಖೆಗಳು ವಸ್ತು ಪ್ರದರ್ಶನ ಆರಂಭವಾಗುವ ಸುಮಾರು 3 ತಿಂಗಳ ಮುಂಚೆಯೇ ತಮಗೆ ನೀಡಿರುವ ಜಾಗದಲ್ಲಿ ವಸ್ತುಪ್ರದರ್ಶನಕ್ಕೆ ಬರುವ ಜನರಿಗೆ ತೋರಿಸಲು ವಿವಿಧ ಬೆಳೆಗಳ ಪ್ರಾತ್ಯಕ್ಷಿಕೆಗಳನ್ನು ತಯಾರಿಸುತ್ತವೆ. ಅಲ್ಲದೆ ಇಲಾಖೆಯಿಂದ ಸಾರ್ವಜನಿಕರಿಗೆ ವಿವಿಧ ಯೋಜನೆಗಳ ಅಡಿಯಲ್ಲಿ ದೊರೆಯುವ ಸೌಲಭ್ಯಗಳ ಪರಿಚಯವನ್ನೂ ಮಾಡಲಾಗುತ್ತದೆ.

ವಸ್ತುಪ್ರದರ್ಶನಕ್ಕೆ ಬರುವ ಜನರ ಮನರಂಜನೆಗೆ ಪ್ರತೀ ದಿನ ಸ್ಥಳೀಯ ಮತ್ತು ಹೆಸರಾಂತ ಕಲಾವಿದರಿಂದ ನಾಟಕಗಳು, ಸಂಗೀತ ಸಂಜೆ, ನೃತ್ಯ, ಶಾಲಾ, ಕಾಲೇಜುಗಳ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ನೀಡಲಾಗುತ್ತದೆ. 15 ದಿನಗಳ ಕಾಲ ಸಿದ್ದಗಂಗಾ ಮಠ ವಿದ್ಯಾರ್ಥಿಗಳಿಗಲ್ಲದೆ, ಸಾರ್ವಜನಿಕರಿಗೂ ಅನ್ನ, ಅಕ್ಷರ, ಆಶ್ರಯ ನೀಡುವ ಮೂಲಕ ಜ್ಞಾನ ಕೇಂದ್ರವಾಗಿ ಮಾರ್ಪಾಡಾಗುತ್ತಿರುವುದು ವಿಶೇಷ.

ರಾಜ್ಯದಲ್ಲಿ ಮೈಸೂರು ದಸರಾ ವಸ್ತು ಪ್ರದರ್ಶನ ಮತ್ತು ಹಾಸನದ ಈಗಿನ ನಗರಸಭೆ ಆವರಣದಲ್ಲಿ ನಡೆಯುವ ವಸ್ತು ಪ್ರದರ್ಶನಗಳನ್ನು ಹೊರತುಪಡಿಸಿದರೆ, ತುಮಕೂರಿನ ಸಿದ್ದಗಂಗಾ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಇಷ್ಟು ದೊಡ್ಡ ಮಟ್ಟದಲ್ಲಿ ನಡೆಯುತ್ತದೆ. ಒಂದು ದಿನಕ್ಕೆ ಕನಿಷ್ಠ ವೆಂದರೂ 50 ಸಾವಿರ ಜನರು ಭೇಟಿ ನೀಡುತ್ತಾರೆ. ಅದರಲ್ಲಿಯೂ ಜಾತ್ರೆಯ ಪ್ರಯುಕ್ತ ನಡೆಯುವ ಬೆಳ್ಳಿ ಪಲ್ಲಕ್ಕಿ ಉತ್ಸವದ ದಿನ ಶ್ರೀಮಠಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ದುಪ್ಪಟ್ಟಾಗುತ್ತದೆ. ಮಠಕ್ಕೆ ಬರುವ ಭಕ್ತರಲ್ಲಿ ಬಹುಪಾಲ ಜನರು ವಸ್ತು ಪ್ರದರ್ಶನಕ್ಕೆ ಭೇಟಿ ನೀಡುವುದು ವಾಡಿಕೆ.

ನಾನು 1976ರಿಂದಲೂ ಸಿದ್ದಗಂಗಾ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನದ ಉಸ್ತುವಾರಿ ನೋಡಿಕೊಳ್ಳುತಿದ್ದೇನೆ. ವರ್ಷದಿಂದ ವರ್ಷಕ್ಕೆ ವಸ್ತು ಪ್ರದರ್ಶನಕ್ಕೆ ಬರುವವರ ಸಂಖ್ಯೆ ಹೆಚ್ಚಿದೆ. ಕೃಷಿಕರಿಗೆ, ಜಾನುವಾರುಗಳನ್ನು ಕೊಳ್ಳುವವರು, ಮಾರಾಟ ಮಾಡುವವರಿಗೆ ಒಂದು ಒಳ್ಳೆಯ ವೇದಿಕೆಯಾಗಿ ಸಿದ್ದಗಂಗಾ ಜಾತ್ರೆ ಬಳಕೆಯಲ್ಲಿದೆ. ಅಲ್ಲದೆ ಕೃಷಿಯ ಆವಿಷ್ಕಾರಗಳು, ಕೈಗಾರಿಕೆಗಳ ಬೆಳವಣಿಗೆ ಕುರಿತು ಜನರಿಗೆ ವಸ್ತು ಪ್ರದರ್ಶನದಲ್ಲಿ ಮಾಹಿತಿ ಒದಗಿಸಲಾಗತ್ತಿದೆ. ಕೃಷಿ ಪರಿಕರಗಳ ಜೊತೆಗೆ ಇಲಾಖೆಗಳ ಸವಲತ್ತುಗಳ ಬಗ್ಗೆಯೂ ಮಾಹಿತಿ ದೊರೆಯಲಿದೆ

-ಗಂಗಾಧರಯ್ಯ, ಕಾರ್ಯದರ್ಶಿ, ಸಿದ್ದಗಂಗಾ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ


share
ವಾರ್ತಾಭಾರತಿ
ವಾರ್ತಾಭಾರತಿ
Next Story
X