Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ತುಮಕೂರು
  4. ‌ತುಮಕೂರು | ಅನೈತಿಕ ಪೊಲೀಸ್‌ ಗಿರಿ: 6...

‌ತುಮಕೂರು | ಅನೈತಿಕ ಪೊಲೀಸ್‌ ಗಿರಿ: 6 ಮಂದಿ ವಿರು‍ದ್ಧ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ29 Jan 2024 3:03 PM IST
share
‌ತುಮಕೂರು | ಅನೈತಿಕ ಪೊಲೀಸ್‌ ಗಿರಿ: 6 ಮಂದಿ ವಿರು‍ದ್ಧ ಪ್ರಕರಣ ದಾಖಲು

ತುಮಕೂರು: ಯುವಕನೊಬ್ಬ ಬೇರೆ ಧರ್ಮದ ಯವತಿಯನ್ನು ಗಾಡಿಯಲ್ಲಿ ಕೂರಿಸಿಕೊಂಡು ಓಡಾಡುತ್ತಿದ್ದಾನೆ ಎಂಬ ಕಾರಣಕ್ಕೆ ರಾತ್ರಿವೇಳೆ ವಾಹನ ಅಡ್ಡಗಟ್ಟಿ ಹುಡುಗನಿಗೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಜ.26ರ ಗಣರಾಜೋತ್ಸವ ದಿನದಂದು ನಡೆದಿತ್ತು. ಈ ಸಂಬಂಧ ಆರು ಜನರ ಮೇಲೆ ಪ್ರಕರಣ ದಾಖಲಾಗಿದೆ.

ನಗರದ ಎಂ.ಜಿ.ರಸ್ತೆಯ ಬಿ.ಎಸ್.ಮೊಬೈಲ್ ರಿಪೇರಿ ಅಂಗಡಿಯಲ್ಲಿ ಕೆಲಸ ಮಾಡುವ ಸಲ್ಮಾನ್ ಪಾಷ ಎಂಬ 26 ವರ್ಷದ ಯುವಕ ತನಗೆ ಪರಿಚಯವಿದ್ದ ಯುವತಿಯನ್ನು ಆಕೆ ಕೆಲಸ ಮಾಡುವ ಸ್ಥಳಕ್ಕೆ ಡ್ರಾಪ್‌ ಮಾಡುತ್ತಿದ್ದನು.

ಜನವರಿ 26ರ ರಾತ್ರಿ 9.30ರ ಸುಮಾರಿಗೆ ಯವತಿಯನ್ನು ಬೈಕ್‍ನಲ್ಲಿ ಅವರ ಮನೆಗೆ ಡ್ರಾಫ್ ಮಾಡಲು ಬನಶಂಕರಿ ಎರಡನೇ ಕ್ರಾಸ್‍ನಲ್ಲಿ ಹೋಗುತ್ತಿರುವ ಸಂದರ್ಭದಲ್ಲಿ ಏಳೆಂಟು ಜನರ ತಂಡವೊಂದು ಬೈಕ್ ಅಡ್ಡ ಮಾರಕಾಸ್ತ್ರಗಳಿಂದ ಏಕಾಏಕಿ ಸಲ್ಮಾನ್ ಪಾಷ ಅವರ ಹಿಂದಲೆಗೆ ಬಲವಾಗಿ ಹೊಡೆದು, ಕೆಳಗೆ ಬಿದ್ದ ವೇಳೆ ಯುವತಿಯನ್ನು ಎಳೆದುಕೊಂಡು ಹೋಗಿದ್ದಲ್ಲದೆ, ಉಳಿದ ನಾಲ್ಕೈದು ಜನರು ನನ್ನ ಮೇಲೆ ನಿರಂತರ ಹಲ್ಲೆ ನಡೆಸಿದರು. ಈ ವೇಳೆ ಸಲ್ಮಾನ್ ಪಾಷ ತನ್ನ ಸ್ನೇಹಿತ ಅರ್ಬಾಝ್ ಗೆ ಪೋನ್ ಮಾಡಿ ಹಲ್ಲೆ ಮಾಡುತ್ತಿರುವ ವಿಷಯ ತಿಳಿಸಿದ್ದರು.

ಸ್ಥಳಕ್ಕೆ ಅರ್ಬಾಝ್ ಬಂದ ವೇಳೆ ಈತನನ್ನು ಬಿಡಿಸಿಕೊಳ್ಳಲು ಬರಬೇಡ. ಬಂದರೆ ನಿನ್ನ ಮೇಲೂ ಹಲ್ಲೆ ನಡೆಸುವುದಾಗಿ ಬೇದರಿಕೆ ಹಾಕಿದ ತಂಡ, ಹಲ್ಲೆ ಮುಂದುವರೆಸಿದ್ದರು. ಗಲಾಟೆ ಕೇಳಿ ಜನರು ಜಮಾಯಿಸಿದ್ದನ್ನು ಕಂಡು ಬಿಟ್ಟು ದುಷ್ಕರ್ಮಿಗಳು ಓಡಿ ಹೋಗಿದ್ದಾರೆ. ಸ್ನೇಹಿತರ ಸಹಕಾರದಿಂದ ಆಸ್ಪತ್ರೆ ಸೇರಿದ ಹಲ್ಲೆಗೆ ಒಳಗಾದ ಸಲ್ಮಾನ್ ಪಾಷ, ಪೊಲೀಸರಿಗೆ ಹೇಳಿಕೆ ನೀಡಿದ್ದು, ಮಂಜು ಭಾರ್ಗವ ಎಂಬ ವ್ಯಕ್ತಿಯ ಕುಮ್ಮಕ್ಕಿನಿಂದ ಜೀವನ್, ಷರತ್, ಹನುಮಂತರಾಜು, ರವಿ ಸೇರಿದಂತೆ ಹಲವರು ನನ್ನನ್ನು ಸಾಯಿಸುವ ಉದ್ದೇಶದಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಇದಕ್ಕೆ ಮಂಜು ಭಾರ್ಗವ ನೀಡಿದ ಕುಮ್ಮಕ್ಕೇ ಕಾರಣ ಎಂದು ತಿಳಿಸಿದ್ದಾರೆ.

ಈ ಸಂಬಂಧ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಜೀವನ್,ಶರತ್,ಹನುಮಂತರಾಜು, ರವಿ, ಮಂಜು ಭಾರ್ಗವ್ ಮತ್ತು ಮತ್ತೊಬ್ಬರ ವಿರುದ್ದ ಐಪಿಸಿ ಕಲಂ 114,341, 323, 307, 143, 147,148 ಮತ್ತು 149ರ ಅನ್ವಯ ಕೇಸ್ ದಾಖಲಿಸದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X