ಮಂಗಳೂರು ವಿವಿ ಪವರ್ಲಿಪ್ಟಿಂಗ್ ಚಾಂಪಿಯನ್ಷಿಪ್: ಆಳ್ವಾಸ್ ಕಾಲೇಜಿಗೆ ಸತತ 20ನೇ ಬಾರಿ ಸಮಗ್ರ ಪ್ರಶಸ್ತಿ
ಉಡುಪಿ, ಮೇ15: ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಲಯನ್ಸ್ ಅಮೃತ್ ಉಡುಪಿ ಜಂಟಿಯಾಗಿ ಆಯೋಜಿಸಿದ ಮಂಗಳೂರು ವಿವಿ ಅಂತರ ಕಾಲೇಜು ಪುರುಷರ ಹಾಗೂ ಮಹಿಳೆಯರ ಪವರ್ಲಿಪ್ಟಿಂಗ್ ಚಾಂಪಿಯನ್ ಷಿಪ್ನಲ್ಲಿ ಮೂಡಬಿದರೆಯ ಆಳ್ವಾಸ್ ಕಾಲೇಜು ಸತತ 20ನೇ ಬಾರಿ ಸಮಗ್ರ ಚಾಂಪಿಯನ್ ಪಟ್ಟವನ್ನು ಆಲಂಕರಿಸಿದೆ.
ಪುರುಷರ ವಿಭಾಗದ ತಂಡ ಸ್ಪರ್ಧೆಯಲ್ಲಿ ಆಳ್ವಾಸ್ ಪ್ರಥಮ, ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜು ದ್ವಿತೀಯ ಹಾಗೂ ಅತಿಥೇಯ ತೆಂಕನಿಡಿಯೂರು ಕಾಲೇಜು ತೃತೀಯ ಸ್ಥಾನ ಗಳಿಸಿದರೆ, ತೆಂಕನಿಡಿಯೂರು ಕಾಲೇಜಿನ ಶರತ್ ಕೆ. ಕುಮಾರ್ ಬಲಾಡ್ಯ ಪುರುಷ ಪ್ರಶಸ್ತಿ ಪಡೆದರು.
ಮಹಿಳೆಯರ ವಿಭಾಗದಲ್ಲಿ ಆಳ್ವಾಸ್ ಕಾಏಜು ಪ್ರಥಮ, ಎಸ್.ಡಿ.ಎಂ ಉಜಿರೆ ದ್ವಿತೀಯ ಹಾಗೂ ಉಡುಪಿಯ ಡಾ. ಜಿ. ಶಂಕರ್ ಸರಕಾರಿ ಮಹಿಳಾ ಕಾಲೇಜು ಮತ್ತು ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜು ತೃತೀಯ ಸ್ಥಾನ ಹಂಚಿಕೊಂಡವು. ಅಜ್ಜರಕಾಡು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಕಾಲೇಜಿನ ಐಶ್ವರ್ಯ ಬಲಾಡ್ಯ ಮಹಿಳೆ ಪ್ರಶಸಿಗೆ ಭಾಜನರಾದರು.
ಮಂಗಳೂರು ವಿವಿ ವ್ಯಾಪ್ತಿಯ 23 ಕಾಲೇಜುಗಳಿಂದ ಪವರ್ಲಿಫ್ಟರ್ಗಳು ಭಾಗವಹಿಸಿದ ಈ ಟೂರ್ನಿಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಾಂಶುಪಾಲರಾದ ಪ್ರೊ.ಸುರೇಶ್ ರೈ ಕೆ, ಪಂದ್ಯಾಕೂಟದ ಅಬ್ಸರ್ವರ್ ಹಾಗೂ ಅಂತಾರಾಷ್ಟ್ರೀಯ ತೀರ್ಪುಗಾರರಾದ ಡಾ. ಹರಿದಾಸ್ ಕೂಳೂರು, ಉಡುಪಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ರಾಮಚಂದ್ರ ಪಾಟ್ಕರ್, ಪ್ರಭಾ, ಆಳ್ವಾಸ್ ತರಬೇತುದಾರ ಪ್ರಮೋದ್ ಉಪಸ್ಥಿತರಿದ್ದು ಪ್ರಶಸ್ತಿ ಪ್ರದಾನ ಮಾಡಿದರು.
ಆತಿಥೇಯ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರೂ ಹಾಗೂ ಜಿಲ್ಲಾ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾದ ಡಾ.ರೋಶನ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಉದ್ಘಾಟನೆ: ಚಾಂಪಿಯನ್ಷಿಪ್ನ್ನು ಉಡುಪಿಯ ಸಾಫಲ್ಯ ಟ್ರಸ್ಟ್ನ ಅಧ್ಯಕ್ಷರಾದ ನಿರೂಪಮಾ ಪ್ರಸಾದ್ ಶೆಟ್ಟಿ ಉದ್ಘಾಟಿಸಿ ದರು.ಮುಖ್ಯ ಅತಿಥಿ ಲಯನ್ಸ್ಅಮೃತ್ಉಡುಪಿ ಅಧ್ಯಕ್ಷೆ ಭಾರತಿ ಹರೀಶ್ ಶುಭ ಹಾರೈಸಿದರು. ಮಂಗಳೂರು ವಿವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಜೆರಾಲ್ಟ್ ಸಂತೋಷ್ ಪಿಂಟೋ ಅಧ್ಯಕ್ಷತೆ ವಹಿಸಿದ್ದರು.
ಕಾಲೇಜಿನ ಪ್ರಾಂಶುಪಾಲ ಪ್ರೊ.ಸುರೇಶ್ರೈ ಕೆ. ಅತಿಥಿಗಳನ್ನು ಸ್ವಾಗತಿಸಿ ದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ರೋಶನ್ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.