Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲಾಸ್ಪತ್ರೆ| 48.36 ಕೋಟಿ ರೂ....

ಉಡುಪಿ ಜಿಲ್ಲಾಸ್ಪತ್ರೆ| 48.36 ಕೋಟಿ ರೂ. ಹೆಚ್ಚುವರಿ ಮೊತ್ತಕ್ಕೆ ಪ್ರಸ್ತಾವನೆ: ಸಚಿವ ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ18 March 2025 9:39 PM IST
share
ಉಡುಪಿ ಜಿಲ್ಲಾಸ್ಪತ್ರೆ| 48.36 ಕೋಟಿ ರೂ. ಹೆಚ್ಚುವರಿ ಮೊತ್ತಕ್ಕೆ ಪ್ರಸ್ತಾವನೆ: ಸಚಿವ ದಿನೇಶ್ ಗುಂಡೂರಾವ್

ಉಡುಪಿ, ಮಾ.18: ಉಡುಪಿ ಅಜ್ಜರಕಾಡಿನಲ್ಲಿ ನಿರ್ಮಾಣ ಹಂತದಲ್ಲಿ ರುವ ನೂತನ ಜಿಲ್ಲಾಸ್ಪತ್ರೆ ಕಟ್ಟಡ ಕಾಮಗಾರಿಗೆ ಹೆಚ್ಚುವರಿಯಾಗಿ 48.36 ಕೋಟಿ ರೂ.ಅನುದಾನದ ಅವಶ್ಯಕತೆ ಇದ್ದು, ಇದಕ್ಕಾಗಿ ಸಲ್ಲಿಸಿದ ಪ್ರಸ್ತಾವನೆ ಸ್ವೀಕೃತಿಗೊಂಡ ನಂತರ ನಿಯಮಾನುಸಾರ ಪರಿಶೀಲಿಸಿ ಜಿಲ್ಲಾ ಆಸ್ಪತ್ರೆಯ ಕಾಮಗಾರಿಯನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯ ನೂತನ ಜಿಲ್ಲಾಸ್ಪತ್ರೆಯ ಕಟ್ಟಡ ಕಾಮಗಾರಿ ಸ್ಥಗಿತ ಗೊಂಡಿರುವ ಬಗ್ಗೆ ರಾಜ್ಯ ವಿಧಾನ ಸಭೆಯಲ್ಲಿ ಇಂದು ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರು ನಿಯಮ-73ರಡಿಯಲ್ಲಿ ಕೇಳಿದ ಪ್ರಶ್ನೆಗೆ ಸಚಿವರು ನೀಡಿದ ಲಿಖಿತ ಉತ್ತರದಲ್ಲಿ ಈ ವಿಷಯವನ್ನು ತಿಳಿಸಿದ್ದಾರೆ.

ಜಿಲ್ಲಾಸ್ಪತ್ರೆ ಕಟ್ಟಡ ಕಾಮಗಾರಿ ಸ್ಥಗಿತಗೊಂಡಿರುವುದರಿಂದ ರೋಗಿಗಳಿಗೆ ಜಿಲ್ಲಾಸ್ಪತ್ರೆಯ ಸೇವೆ ಲಭ್ಯತೆ ವಿಳಂಬವಾಗುತಿದ್ದು, ಬಹಳ ತೊಂದರೆ ಯಾಗುತ್ತಿದೆ ಎಂದು ಶಾಸಕರು, ಸಚಿವರ ಗಮನ ಸೆಳೆದಿದ್ದರು.

ಉಡುಪಿ ಜಿಲ್ಲಾಸ್ಪತ್ರೆಯನ್ನು 250 ಹಾಸಿಗೆಗಳ ಸಾಮರ್ಥ್ಯಕ್ಕೆ ಮೇಲ್ದರ್ಜೆಗೇರಿಸಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು 115 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು 2020ರ ನವೆಂಬರ್ 13ರಂದು ಆಡಳಿತಾತ್ಮಕ ಅನುಮೋದನೆ ನೀಡಲಾಗಿತ್ತು ಎಂದು ದಿನೇಶ್ ಗುಂಡೂರಾವ್ ಉತ್ತರದಲ್ಲಿ ತಿಳಿಸಿದ್ದರು.

ಕಾಮಗಾರಿಯನ್ನು ಟೆಂಡರ್ ಆಹ್ವಾನಿಸಿ ಹೈದರಾಬಾದ್‌ನ ಮೆ.ಶ್ರೀ ಸಿದ್ದಾರ್ಥ ಇನ್ಫಾಟೆಕ್ ಆ್ಯಂಡ್ ಸರ್ವಿಸಸ್ ಪ್ರೈ.ಲಿ.ಗೆ ಟೆಂಡರ್‌ನ್ನು ಪ್ರೀಮಿಯಂ ಶೇ.12.50ಯೊಂದಿಗೆ ಗುತ್ತಿಗೆ ಮೊತ್ತ 110.25 ಕೋಟಿ ರೂ. ಹಾಗೂ ಶೇ.12 ಜಿಎಸ್‌ಟಿ (13.23ಕೋಟಿ) ಸೇರಿ ಒಟ್ಟು 123.47 ಕೋಟಿ ರೂ.ಗಳಿಗೆ 2021ರ ಸೆ.8ರಂದು ಕಾಮಗಾರಿಗೆ ಕಾರ್ಯಾದೇಶ ನೀಡಲಾಗಿತ್ತು. ಈಗಾಗಲೇ ಶೇ.90ರಷ್ಟು ಕಾಮಗಾರಿ ಮುಗಿದಿದೆ ಎಂದು ಉತ್ತರದಲ್ಲಿ ಹೇಳಲಾಗಿದೆ.

ಮಂಜೂರಾದ ಅಂದಾಜು ಪಟ್ಟಿಯಲ್ಲಿ ಟೆಂಡರ್ ಪ್ರೀಮಿಯಂ ಹಾಗೂ ಬೆಲೆ ಏರಿಕೆಗಳಿಗೆ ಮೊತ್ತವನ್ನು ಇಡದೇ ಇರುವುದರಿಂದ ಶೇ.12.50 ಟೆಂಡರ್ ಪ್ರೀಮಿಯಂ (12.25 ಕೋಟಿ), ಬೆಲೆ ಏರಿಕೆ ಅಂಶದಿಂದ 17.53 ಕೋಟಿ ಹಾಗೂ ಶೇ.12ರಿಂದ 18 ಜಿಎಸ್‌ಟಿ ಹೆಚ್ಚಳ ರೂ.6.96 ಕೋಟಿ ರೂ. ಒಟ್ಟು ಸೇರಿ 36.74 ಕೋಟಿ ರೂ.ಹೆಚ್ಚಾಗುತ್ತಿದೆ. ಮೂಲ ವಿನ್ಯಾಸದಲ್ಲಿ ಮಾಡಿದ ಮಾರ್ಪಾಡಿನಿಂದ 1.26ಕೋಟಿ ರೂ., ಕಟ್ಟಡ ಪೂರ್ಣಗೊಳಿಸಿ ಹೆಚ್ಚುವರಿ ಕೆಲಸ ನಿರ್ವಹಣೆಗೆ 6.50 ಕೋಟಿ ರೂ.ಅಗತ್ಯವಿದ್ದು, ಒಟ್ಟಾರೆ ಕಾಮಗಾರಿ ಯನ್ನು ಪೂರ್ಣಗೊಳಿಸಲು ಪರಿಷ್ಕೃತ ಯೋಜನಾ ಮೊತ್ತ 159.50 ಕೋಟಿ ರೂ.ಗಳಾಗಿದೆ. ಇದರಿಂದ ಹೆಚ್ಚುವರಿಯಾಗಿ 44.50 ಕೋಟಿ ರೂ.ಅನುದಾನದ ಅಗತ್ಯವಿದೆ. ಇದು ಮೂಲ ಅಂದಾಜು ಮೊತ್ತಕ್ಕೆ ಹೋಲಿಸಿದಾಗ ಶೇ.38.70 ರಷ್ಟು ಅಧಿಕವಾಗಿದೆ ಎಂದು ಗುಂಡೂರಾವ್ ತಿಳಿಸಿದ್ದಾರೆ.

ಉಡುಪಿ ಜಿಲ್ಲಾಸ್ಪತ್ರೆಯ ಪರಿಷ್ಕೃತ ಅಂದಾಜು ಪಟ್ಟಿ ಇಲಾಖೆಯ ತಾಂತ್ರಿಕ ಸಲಹಾ ಸಮಿತಿ ಮುಂದೆ ಪರಿಶೀಲನೆಯಲ್ಲಿದ್ದು, ಸರಕಾರದಲ್ಲಿ ಪ್ರಸ್ತಾವನೆ ಸ್ವೀಕೃತಗೊಂಡ ನಂತರ ನಿಯಮಾನುಸಾರ ಜಿಲ್ಲಾಸ್ಪತ್ರೆಯ ಕಾಮಗಾರಿ ಪೂರ್ಣಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್, ಶಾಸಕ ಯಶಪಾಲ್ ಸುವರ್ಣರಿಗೆ ನೀಡಿದ ಉತ್ತರದಲ್ಲಿ ಭರವಸೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X