ಅ.19ರ ಸಾರ್ವಜನಿಕ ಅಹವಾಲು ಸಭೆ ರದ್ದು
ಉಡುಪಿ, ಅ.18: ಹೆಬ್ರಿ ತಾಲೂಕು ಕುಚ್ಚೂರು ಗ್ರಾಪಂ ವ್ಯಾಪ್ತಿಯ ಬೇಳಂಜೆ ಗ್ರಾಮದ ಹೆಬ್ರಿ-ಬೇಳಂಜೆ-ಅಲ್ಬಾಡಿ ರಾಜ್ಯ ರಸ್ತೆಯ ಎರಡು ಬದಿಯಲ್ಲಿರುವ ರಸ್ತೆ ಬದಿಗೆ ಬಾಗಿಕೊಂಡ ಒಟ್ಟು 83 ಅಪಾಯಕಾರಿ ಮರಗಳನ್ನು ತೆರವುಗೊಳಿಸುವ ಬಗ್ಗೆ ಅ.19ರಂದು ಅಪರಾಹ್ನ 3 ಗಂಟೆಗೆ ಹೆಬ್ರಿ ವಲಯ ಅರಣ್ಯಾಧಿಕಾರಿಗಳ ಕಚೇರಿಯಲ್ಲಿ ನಿಗದಿಪಡಿಸಲಾಗಿದ್ದ ಸಾರ್ವಜನಿಕ ಅಹವಾಲು ಸಭೆಯನ್ನು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿ ಯಲ್ಲಿರುವುದರಿಂದ ರದ್ದುಪಡಿಸಲಾಗಿದೆ. ಮುಂದಿನ ದಿನಾಂಕವನ್ನು ಶೀಘ್ರವೇ ಪ್ರಕಟನೆಯ ಮೂಲಕ ತಿಳಿಸಲಾಗುವುದು ಎಂದು ಮೂಡಬಿದ್ರೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Next Story