Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕೆ...

ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಉಡುಪಿ ಜಿಲ್ಲಾದಿಕಾರಿ ವಿದ್ಯಾಕುಮಾರಿ

ಉಡುಪಿಯಲ್ಲಿ ಜನಜಾಗೃತಿ ಜಾಥಾ, ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ2 Oct 2023 6:31 PM IST
share
ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಉಡುಪಿ ಜಿಲ್ಲಾದಿಕಾರಿ ವಿದ್ಯಾಕುಮಾರಿ

ಉಡುಪಿ: ಯುವಜನತೆ ದುಶ್ಚಟಗಳಿಗೆ ಬಲಿಯಾಗುವಲ್ಲಿ ಸಾಮಾಜಿಕ ಹಾಗೂ ವೈಯಕ್ತಿಕ ಕಾರಣಗಳಿರಬಹುದು. ಆದರೆ ಅದನ್ನು ಮೆಟ್ಟಿ ನಿಂತು ಅದರಿಂದ ಹೊರಬರುವುದು ಮುಖ್ಯವಾಗಿದೆ. ದುಶ್ಚಟ ಮುಕ್ತ ಸಮಾಜ ನಿರ್ಮಾಣದಲ್ಲಿ ಸಮಾಜದ ಎಲ್ಲರೂ ಕೈಜೋಡಿಸಬೇಕು ಎಂದು ಉಡುಪಿ ಜಿಲ್ಲಾದಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದ್ದಾರೆ.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್‌ಗಳ ಅಂಗಸಂಸ್ಥೆ ಜಿಲ್ಲಾ ಜನಜಾಗೃತಿ ವೇದಿಕೆ ಉಡುಪಿ ಹಾಗೂ ತಾಲೂಕು ಜನಜಾಗೃತಿ ವೇದಿಕೆ ಉಡುಪಿ, ಕಾಪು, ಬ್ರಹ್ಮಾವರ ಮತ್ತು ಪರ್ಯಾಯ ಶ್ರೀಕೃಷ್ಣಾಪುರ ಮಠಗಳ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಇಂದು ನಡೆದ ಜನಜಾಗೃತಿ ಜಾಥಾ ಮತ್ತು ಸಮಾವೇಶ ದಲ್ಲಿ ಈಶ್ರಮ್ ಕಾರ್ಡ್ ಹಾಗೂ ಪಿಎಂಜಿ ದಿಶಾ ಪ್ರಮಾಣ ಪತ್ರವನ್ನು ವಿತರಿಸಿ ಅವರು ಮಾತನಾಡುತಿದ್ದರು.

ಇಂದು ಹೆಚ್ಚು ಹೆಚ್ಚು ಯುವಜನರು ದುಶ್ಚಟಗಳಿಗೆ ದಾಸರಾಗುತ್ತಿರುವು ದನ್ನು ನೋಡುತಿದ್ದೇವೆ. ಇಂಥ ಸಮಯದಲ್ಲಿ ಅವರಿಗೆ ಸೂಕ್ತ ಸಲಹೆ ಹಾಗೂ ಕೌನ್ಸಿಲಿಂಗ್‌ನ ಅಗತ್ಯವಿದೆ. ಆದರೆ ನಾವಿಂದು ಅದನ್ನು ಮುಚ್ಚಿಟ್ಟುಕೊಳ್ಳಲು ಪ್ರಯತ್ನಿಸುತಿ ದ್ದೇವೆ. ಇದು ತಪ್ಪು. ಕೌನ್ಸಿಲಿಂಗ್‌ನಿಂದ ಮಾತ್ರ ಅವರನ್ನು ದುಶ್ಚಟಗಳಿಂದ ಹೊರತರಲು ಸಾಧ್ಯವಿದೆ. ಇದು ಸಮಾಜದ ಜವಾಬ್ದಾರಿ ಸಹ ಆಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ವ್ಯಸನ ಮುಕ್ತರಾದ ನವಜೀವನ ಸಮಿತಿಯ ಸದಸ್ಯರನ್ನು ಅಭಿನಂದಿಸಿ ಮಾತನಾಡಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವ್ಯಸನಮುಕ್ತ ವ್ಯಕ್ತಿಗಳಿಗೆ ಸಮಾಜ ಪ್ರೀತಿ, ವಿಶ್ವಾಸವನ್ನು ತೋರಿಸಬೇಕು.ಅವರು ಮತ್ತೆ ಮುಖ್ಯ ವಾಹಿನಿಗೆ ಬರುವಂತೆ ನೋಡಿಕೊಳ್ಳಬೇಕು. ಅವರಿಗೆ ಹೊಸ ಬದುಕು ಕಲ್ಪಿಸಬೇಕು ಎಂದರು.

ಪರ್ಯಾಯ ಕೃಷ್ಣಾಪುರ ಮಠದ ದಿವಾನರಾದ ವರದರಾಜ ಭಟ್ ಸಮಾವೇಶವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಉಡುಪಿ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಸತ್ಯಾನಂದ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ, ಅಖಿಲ ಕರ್ನಾಟಕ ಜನಜಾಗನತಿ ವೇದಿಕೆ ಮಾಜಿ ರಾಜ್ಯಾಧ್ಯಕ್ಷ ದೇವದಾಸ ಹೆಬ್ಬಾರ್, ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ನವೀನ್‌ಚಂದ್ರ ಶೆಟ್ಟಿ, ಸೂಕ್ಷ್ಮ ವಿಮಾ ವಿಭಾಗದ ಪ್ರಬಂಧಕ ದಿನೇಶ್ ಪ್ರಭು, ಬ್ರಹ್ಮಾವರ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ನಗರಸಭಾ ಸದಸ್ಯೆ ಮಾನಸಿ ಸಿ.ಪೈ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಉಡುಪಿ ತಾಲೂಕು ಅಧ್ಯಕ್ಷೆ ಶಮಿತಿ ಪಿ. ಶೆಟ್ಟಿ, ಮಾಜಿ ಅಧ್ಯಕ್ಷ ನವೀನ್ ಅಮೀನ್ ಉಪಸ್ಥಿತರಿದ್ದರು.

ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಜಿಲ್ಲಾ ನಿರ್ದೇಶಕ ಶಿವರಾಯ ಪ್ರಭು ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಜನಜಾಗೃತಿ ವೇದಿಕೆಯ ಪ್ರಾದೇಶಿಕ ಕಚೇರಿ ಯೋಜನಾಧಿಕಾರಿ ಗಣೇಶ್ ಕಾರ್ಯಕ್ರಮ ನಿರೂಪಿಸಿದರು.

ಇದಕ್ಕೆ ಮುನ್ನ ಜನಜಾಗೃತಿ ವೇದಿಕೆಯ ಮತ್ತು ನವಜೀವನ ಸಮಿತಿಯ ಸದಸ್ಯರಿಂದ ಜನಜಾಗೃತಿ ಜಾಥಾ ನಗರದ ಬೋರ್ಡ್ ಹೈಸ್ಕೂಲ್ ಆವರಣ ದಿಂದ ರಾಜಾಂಗಣದವರೆಗೆ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X