Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ: ನಾಲ್ಕೇ ತಿಂಗಳಲ್ಲಿ ಕಿತ್ತು...

ಕುಂದಾಪುರ: ನಾಲ್ಕೇ ತಿಂಗಳಲ್ಲಿ ಕಿತ್ತು ಹೋದ ದಲಿತ ಕಾಲನಿಯ ಕಾಂಕ್ರಿಟ್ ರಸ್ತೆ!

ಕಳಪೆ ಕಾಮಗಾರಿ ವಿರುದ್ಧ ಮೋವಾಡಿ ಗ್ರಾಮಸ್ಥರ ತೀವ್ರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ14 Aug 2024 4:07 PM IST
share
ಕುಂದಾಪುರ: ನಾಲ್ಕೇ ತಿಂಗಳಲ್ಲಿ ಕಿತ್ತು ಹೋದ ದಲಿತ ಕಾಲನಿಯ ಕಾಂಕ್ರಿಟ್ ರಸ್ತೆ!

ಕುಂದಾಪುರ, ಆ.13: ಸಮರ್ಪಕ ರಸ್ತೆ ನಿರ್ಮಿಸಿಕೊಡಿ ಎಂದು ಈ ದಲಿತ ಕಾಲನಿ ನಿವಾಸಿಗಳು ಪ್ರತೀ ಗ್ರಾಮ ಸಭೆಯಲ್ಲೂ ಬೇಡಿಕೆ ಇಡುತ್ತಲೇ ಬಂದಿದ್ದು ಇವರ ಬೇಡಿಕೆಗೆ ಸ್ಪಂದಿಸಿ ಸಮಾಜ ಕಲ್ಯಾಣ ಇಲಾಖೆಯಿಂದ ಈ ಕಾಲನಿ ಸಂಪರ್ಕಕ್ಕಾಗಿ ಅನುದಾನ ಬಿಡುಗಡೆಯಾಗಿ ಕಾಂಕ್ರಿಟ್ ರಸ್ತೆ ನಿರ್ಮಿಸಲಾಗಿತ್ತು. ಆದರೆ ರಸ್ತೆ ನಿರ್ಮಾಣಗೊಂಡ ನಾಲ್ಕೇ ತಿಂಗಳುಗಳಲ್ಲಿ ಕಾಂಕ್ರಿಟ್ ರಸ್ತೆಯ ಜಲ್ಲಿಕಲ್ಲುಗಳೆಲ್ಲಾ ಮೇಲೆದ್ದು ಹೊಂಡಗಳು ಕಾಣಿಸಿಕೊಂಡಿದೆ.

ಕುಂದಾಪುರ ತಾಲೂಕಿನ ತ್ರಾಸಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೋವಾಡಿ ಶಾಲಾ ಸಮೀಪದ ದಲಿತ ಕಾಲನಿ ರಸ್ತೆಗೆ ಕಳೆದ ಜನವರಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಸುಮಾರು 20 ಲಕ್ಷ ರೂ. ವೆಚ್ಚದಲ್ಲಿ ಉಡುಪಿ ನಿರ್ಮೀತಿ ಕೇಂದ್ರದಿಂದ 261 ಮೀಟರ್ ಉದ್ದದ ಕಾಂಕ್ರಿಟ್ ರಸ್ತೆ ನಿರ್ಮಾಣ ಮಾಡಲಾಗಿತ್ತು. ಈ ವರ್ಷ ಮಳೆಗಾಲದ ಆರಂಭದಲ್ಲೇ ರಸ್ತೆಯ ಎರಡು ಕಡೆಗಳಲ್ಲಿ ಜಲ್ಲಿಕಲ್ಲುಗಳು ಮೇಲೆದ್ದು ಬಂದಿದ್ದು, ವಾಹನಗಳು ಸಂಚರಿಸುವಾಗ ಜಲ್ಲಿಗಳು ಟಯರ್ ನಿಂದ ಸಿಡಿಯುವುದರಿಂದ ಪಾದಚಾರಿಗಳಿಗೆ, ಶಾಲಾ ಮಕ್ಕಳಿಗೆ, ವಯೋವೃದ್ಧರಿಗೆ ನಡೆದಾಡಲು ಸಮಸ್ಯೆಗಳಾಗುತ್ತಿದೆ. ಹೊಂಡ ಮಾತ್ರವಲ್ಲದೇ, ಒಂದರೆರಡು ಕಡೆಗಳಲ್ಲಿ ರಸ್ತೆ ಬಿರುಕು ಬಿಟ್ಟಿರುವುದು ಕಂಡುಬಂದಿದೆ.

ರಸ್ತೆ ಕಾಮಗಾರಿಯ ವಿರುದ್ದ ಆರಂಭದಿಂದಲೂ ಇಲ್ಲಿನ ನಿವಾಸಿಗಳು ಧ್ವನಿ ಎತ್ತಿದ್ದು, ಸಂಬಂಧಪಟ್ಟ ಗುತ್ತಿಗೆದಾರರನ್ನು ಪ್ರಶ್ನಿಸಿ ಕಳಪೆ ಕಾಮಗಾರಿ ನಡೆಸದೇ ವೈಜ್ಞಾನಿಕವಾಗಿ ರಸ್ತೆ ನಿರ್ಮಾಣ ಮಾಡಲು ಆಗ್ರಹಿಸಿದ್ದರು. ಅಲ್ಲದೇ ರಸ್ತೆ ಕಾಮಗಾರಿಗೆ ಸಹಕಾರವನ್ನು ಕೊಟ್ಟಿದ್ದಲ್ಲದೇ ದೈವಸ್ಥಾನದ ನೀರು ಕಾಂಕ್ರಿಟ್ ಗೆ ಕೊಡುವ ಮೂಲಕ ಗುತ್ತಿಗೆದಾರರೊಂದಿಗೆ ಇಲ್ಲಿನ ನಿವಾಸಿಗಳು ಕೈ ಜೋಡಿಸಿದ್ದರು. 261 ಮೀಟರ್ ಉದ್ದದ ರಸ್ತೆಯ ಕಲ್ಲುಕುಟ್ಟಿಗ ದೈವಸ್ಥಾನದ ಎದುರು ಎರಡು ಕಡೆಗಳಲ್ಲಿ ಜಲ್ಲಿ-ಕಲ್ಲುಗಳು ಎದ್ದು ಹೊಂಡಗಳು ಕಾಣಿಸಿಕೊಂಡಿವೆ. ಈ ರಸ್ತೆ ನಿರ್ಮಾಣಕ್ಕೂ ಮೊದಲು ತ್ರಾಸಿ ಗ್ರಾಪಂ ವತಿಯಿಂದ ಎರಡೂ ಕಡೆ ಚರಂಡಿ ನಿರ್ಮಾಣ ಮಾಡಲಾಗಿದೆ.

ರಸ್ತೆ ಮೇಲೆ ನೀರು ನಿಂತುಕೊಳ್ಳದೇ ಚರಂಡಿಯಲ್ಲಿ ನೀರು ಸರಾಗವಾಗಿ ಹರಿಯುವ ವ್ಯವಸ್ಥೆಯನ್ನೂ ಮಾಡಲಾಗಿದೆ. ಆದರೆ ರಸ್ತೆಯಲ್ಲಿ ಗುಂಡಿಗಳು ಏಕಾದವು ಎನ್ನುವುದೇ ಗ್ರಾಮಸ್ಥರ ಯಕ್ಷ ಪ್ರಶ್ನೆಯಾಗಿದೆ

'ರಸ್ತೆ ನಿರ್ಮಾಣದ ಆರಂಭದಿಂದಲೂ ಕಳಪೆ ಕಾಮಗಾರಿಯ ವಿರುದ್ದ ನಾವು ಧ್ವನಿ ಎತ್ತುತ್ತಲೇ ಬಂದಿದ್ದೇವೆ. ಬೇಕಾಬಿಟ್ಟಿಯಾಗಿ ವೆಟ್ಮಿಕ್ಸ್ ಅನ್ನು ಚೆಲ್ಲಿದ್ದಾರೆ. ಕಾಟಾಚಾರಕ್ಕೆ ಕಾಂಕ್ರಿಟ್ ಮಾಡಿ ಹೋಗಿದ್ದಾರೆ. ಕಾಂಕ್ರಿಟ್ ಕಿತ್ತು ಹೋದ ಬಗ್ಗೆ ಸ್ಥಳೀಯಾಡಳಿತದ ಗಮನಕ್ಕೆ ತಂದಿದ್ದೇವೆ. ಆದರೆ ಇದುವರೆಗೂ ನಮಗೆ ಯಾವುದೇ ಸ್ಪಂದನ ಸಿಕ್ಕಿಲ್ಲ. ಉಡುಪಿ ನಿರ್ಮೀತಿ ಕೇಂದ್ರ ಕಳಪೆ ಕಾಮಗಾರಿ ನಡೆಸಿ ದಲಿತರ ಹಣವನ್ನು ದುರುಪಯೋಗ ಮಾಡುವುದು ಸರಿಯಲ್ಲ. ಜಿಲ್ಲಾಡಳಿತ ಈ ಬಗ್ಗೆ ಸೂಕ್ತ ತನಿಖೆ ನಡೆಸಿ ನಿರ್ಮೀತ ಕೇಂದ್ರ ಹಾಗೂ ಗುತ್ತಿಗೆದಾರರ ವಿರುದ್ದ ಕ್ರಮ ಜರುಗಿಸಬೇಕು’

-ಚಿದಂಬರ, ಸ್ಥಳೀಯ ಗ್ರಾಮಸ್ಥರು

‘ಪ್ರಭಾರ ಯೋಜನಾ ನಿರ್ದೇಶಕನಾಗಿ ಇತ್ತೀಚೆಗಷ್ಟೇ ಅಧಿಕಾರ ವಹಿಸಿ ಕೊಂಡಿದ್ದೇನೆ. ತ್ರಾಸಿ ಗ್ರಾಪಂ ವ್ಯಾಪ್ತಿಯ ಮೋವಾಡಿ ದಲಿತ ಕಾಲನಿಯ ರಸ್ತೆ ಕಾಮಗಾರಿ ಕಳಪೆಯಾಗಿರುವ ಬಗ್ಗೆ ಮಾಹಿತಿ ಪಡೆದು ಸಂಬಂಧಪಟ್ಟ ಇಂಜಿನಿಯರ್ ಅನ್ನು ಸ್ಥಳಕ್ಕೆ ಕಳುಹಿಸಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’

-ದಿವಾಕರ್, ಪ್ರಭಾರ ಯೋಜನಾ ನಿರ್ದೇಶಕರು, ನಿರ್ಮೀತಿ ಕೇಂದ್ರ ಉಡುಪಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X