Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ ರೈಲು ನಿಲ್ದಾಣದಲ್ಲಿ...

ಕುಂದಾಪುರ ರೈಲು ನಿಲ್ದಾಣದಲ್ಲಿ ಪ್ರಿಪೇಯ್ಡ್ ಆಟೋ ರಿಕ್ಷಾ ಸೇವೆಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ9 Oct 2023 8:56 PM IST
share
ಕುಂದಾಪುರ ರೈಲು ನಿಲ್ದಾಣದಲ್ಲಿ ಪ್ರಿಪೇಯ್ಡ್ ಆಟೋ ರಿಕ್ಷಾ ಸೇವೆಗೆ ಚಾಲನೆ

ಕುಂದಾಪುರ, ಅ.9: ಮೂಡ್ಲಕಟ್ಟೆಯಲ್ಲಿರುವ ಕುಂದಾಪುರ ರೈಲು ನಿಲ್ದಾಣದಲ್ಲಿ ರೈಲು ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿದ್ದ ಪ್ರಿಪೇಯ್ಡ್ ಆಟೋ ರಿಕ್ಷಾ ಸೇವೆಗೆ ಸೋಮವಾರ ಚಾಲನೆ ನೀಡಲಾಯಿತು.

ಕೌಂಟರನ್ನು ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ವಿವಿಧೆಡೆ ನಗರ ವ್ಯಾಪ್ತಿಯ ನಿಲ್ದಾಣಗಳಲ್ಲಿ ಇರುವ ಪ್ರಿಪೇಯ್ಡ್ ಸೇವೆಯನ್ನು ಕುಂದಾಪುರದಲ್ಲಿ ಅಳವಡಿಸಿರುವ ಮೂಲಕ ಪಾರದರ್ಶಕ ವ್ಯವಸ್ಥೆಗೆ ಚಾಲನೆ ನೀಡಲಾಗಿದೆ. ಇತ್ತೀಚೆಗೆ ರಿಕ್ಷಾ ಚಾಲಕರಿಗೆ ನೂರಾರು ಸಮಸ್ಯೆಗಳಿವೆ. ಅದರ ನಡುವೆಯೂ ಪ್ರಿಪೇಯ್ಡ್ ಕೌಂಟರ್ ವ್ಯವಸ್ಥೆಗೆ ಮುಂದಾಗಿರುವುದು ಪ್ರಯಾಣಿಕರಿಗೆ ತುಂಬಾ ಅನುಕೂಲವಾಗಲಿದೆ ಎಂದರು.

ಕೊಂಕಣ್ ರೈಲ್ವೆಯ ಹಿರಿಯ ಅಧಿಕಾರಿ ಡಿ.ಡಿ.ಮೀನಾ ಮಾತನಾಡಿ, ದೂರದ ಊರುಗಳಿಂದ ಬರುವ ರೈಲು ಪ್ರಯಾಣಿಕರಿಗೆ ಇದೊಂದು ವ್ಯವಸ್ಥಿತ ಸಂಚಾರ ವ್ಯವಸ್ಥೆಯಾಗಿದ್ದು, ಸಾರ್ವಜನಿಕರು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

ಕುಂದಾಪುರ ರೈಲು ಪ್ರಯಾಣಿಕರ ಸಮಿತಿಯ ಅಧ್ಯಕ್ಷ ಗಣೇಶ ಪುತ್ರನ್ ಮಾತನಾಡಿದರು. ಕೊಂಕಣ್ ರೈಲ್ವೆಯ ಅಧಿಕಾರಿ ಸತ್ಯನಾರಾಯಣ ಭಟ್, ಕೌಂಟರ್ನ ಉಸ್ತುವಾರಿ ವಹಿಸಿರುವ ಧರ್ಮಪ್ರಕಾಶ್, ರೈಲು ಹಿತರಕ್ಷಣಾ ಸಮಿತಿಯ ಗೌತಮ್ ಶೆಟ್ಟಿ, ಕೆಂಚನೂರು ಸೋಮಶೇಖರ್ ಶೆಟ್ಟಿ, ವಿವೇಕ್ ನಾಯಕ್, ಪ್ರವೀಣ್ ಕುಮಾರ್, ಉದಯ ಭಂಡಾರ್ಕಾರ್, ನಾಗರಾಜ ಆಚಾರ್ಯ, ಪದ್ಮನಾಭ ಶೆಣೈ, ಸಂತೋಷ್ ಮೂಡ್ಲಕಟ್ಟೆ, ಗ್ರಾ.ಪಂ. ಸದಸ್ಯ ಅಭಿಜಿತ್ ಕೊಠಾರಿ, ನಿವೃತ್ತ ಅಧಿಕಾರಿ ಚಿದಂಬರ ಉಡುಪ, ರಿಕ್ಷಾ ಚಾಲಕರು ಉಪಸ್ಥಿತರಿದ್ದರು.

ಆರ್.ಟಿ.ಒ ನಿಗದಿ ಪಡಿಸಿದ ಬಾಡಿಗೆ ದರ

ಮೂಡ್ಲಕಟ್ಟೆಯ ರೈಲು ನಿಲ್ದಾಣದಿಂದ ಕುಂದಾಪುರ ನಗರಕ್ಕೆ 5 ಕಿ.ಮೀ. ದೂರವಿದ್ದು, ಸೂಕ್ತ ಬಸ್ ವ್ಯವಸ್ಥೆಯಿಲ್ಲದೆ, ರಿಕ್ಷಾ ಅಥವಾ ಟ್ಯಾಕ್ಸಿ ಮೂಲಕ ದುಬಾರಿ ಬೆಲೆ ಕೊಟ್ಟು ತೆರಳಬೇಕಾಗಿತ್ತು. ಅದಕ್ಕಾಗಿ ಪ್ರಯಾಣಿಕರು ಹಾಗೂ ಕುಂದಾಪುರದ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿಯ ಬೇಡಿಕೆಯಂತೆ ಕೊಂಕಣ್ ರೈಲ್ವೆ ಕಾರ್ಪೋರೇಶನ್ ಲಿಮಿಟೆಡ್ ಮುಂದಾಳತ್ವ ದಲ್ಲಿ ಈ ಪ್ರಿಪೇಯ್ಡ್ ಆಟೋ ರಿಕ್ಷಾ ಕೌಂಟರನ್ನು ಆರಂಭಿಸಲಾಗಿದೆ.

ರೈಲು ನಿಲ್ದಾಣದ ಸಮೀಪ ಪ್ರಿಪೇಯ್ಡ್ ಕೌಂಟರ್ ತೆರೆಯಲಾಗಿದ್ದು, ಸದ್ಯ 45 ರಿಕ್ಷಾಗಳು ಇಲ್ಲಿವೆ. ಸಾರಿಗೆ ಪ್ರಾಧಿಕಾರ (ಆರ್.ಟಿ.ಒ) ನಿಗದಿ ಪಡಿಸಿದಂತೆ ಬಾಡಿಗೆಯನ್ನು ಮೊದಲೇ ಪಾವತಿಸಿ, ಟಿಕೆಟ್ ಪಡೆದುಕೊಳ್ಳಬೇಕು. ಒಂದು ರಿಕ್ಷಾದಲ್ಲಿ 3 ಪ್ರಯಾಣಿಕರು ಪ್ರಯಾಣಿಸಬಹುದು. 20ಕಿಲೋಗಿಂತ ಹೆಚ್ಚಿರುವ ಲಗೇಜ್‌ಗೆ ಹೆಚ್ಚುವರಿ ಶುಲ್ಕ ಪಾವತಿಸಬೇಕು. ಪ್ರಿಪೇಯ್ಡ್ ಆಟೋ ಪ್ರಯಾಣ ಪ್ರಯಾಣಿಕರಿಗೆ ಹಣ ಉಳಿತಾಯದ ಜೊತೆ, ಭದ್ರತೆಯೂ ಇರಲಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X