Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪ್ರಧಾನಿಯಾಗಿ ಮೋದಿ ಹೆಚ್ಚು ದಿನ...

ಪ್ರಧಾನಿಯಾಗಿ ಮೋದಿ ಹೆಚ್ಚು ದಿನ ಇರುವುದಿಲ್ಲ : ಪುನರುಚ್ಛರಿಸಿದ ಸುಬ್ರಮಣ್ಯನ್ ಸ್ವಾಮಿ

“ನಾಗಮಂಗಲ ಗಲಭೆ ಮುಸ್ಲಿಮರು ಮಾಡಿದ್ದಾರೆ ಎನ್ನುವುದಕ್ಕೆ ಪುರಾವೆ ಕೊಡಿ” ಎಂದ ಬಿಜೆಪಿ ನಾಯಕ

ವಾರ್ತಾಭಾರತಿವಾರ್ತಾಭಾರತಿ14 Sept 2024 11:02 PM IST
share
ಪ್ರಧಾನಿಯಾಗಿ ಮೋದಿ ಹೆಚ್ಚು ದಿನ ಇರುವುದಿಲ್ಲ : ಪುನರುಚ್ಛರಿಸಿದ ಸುಬ್ರಮಣ್ಯನ್ ಸ್ವಾಮಿ

ಮಂಗಳೂರು : “ಪ್ರಧಾನಿ ಮೋದಿ ಹೆಚ್ಚು ದಿನ ಪ್ರಧಾನಿ ಸ್ಥಾನದಲ್ಲಿ ಇರುವುದಿಲ್ಲ. ಬಿಜೆಪಿಯಲ್ಲಿ ಯಾರು ಬೇಕಾದರೂ ಪ್ರಧಾನಿಯಾಗಬಹುದು,” ಎಂದು ಬಿಜೆಪಿ ನಾಯಕ ಸುಬ್ರಮಣ್ಯನ್ ಸ್ವಾಮಿ ಹೇಳಿದ್ದಾರೆ.

ಶನಿವಾರ ಮಂಗಳೂರಿನಿಂದ ಶೃಂಗೇರಿಗೆ ಹೋಗುವ ದಾರಿಮಧ್ಯೆ ಕಾರ್ಕಳದ ಪತ್ತೊಂಜಿಕಟ್ಟೆ ಶ್ರೀ ದತ್ತಾತ್ರೇಯ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

“ಬಿಜೆಪಿಯಲ್ಲಿ ಯಾರು ಬೇಕಾದರೂ ಪ್ರಧಾನಿಯಾಗಬಹುದು. ಅವರ ಹೆಸರನ್ನು ನಾನೇನಾದರೂ ಈಗ ಹೇಳಿದರೆ ಎಲ್ಲರೂ ಅವರ ಹಿಂದೆ ಬೀಳುತ್ತಾರೆ. ಅವರ ವ್ಯಕ್ತಿತ್ವ ಹಾಳು ಮಾಡಬಹುದು. ಯಾವಾಗ ಪ್ರಧಾನಿ ಕುರ್ಚಿ ಖಾಲಿಯಾಗುತ್ತೋ ಆವಾಗ ಆ ಬಗ್ಗೆ ಚರ್ಚೆ ಮಾಡೋಣ. ಯಾರೂ ಆ ಸ್ಥಾನಕ್ಕೆ ಸೂಕ್ತ ಎಂಬುದನ್ನು ನೋಡೋಣ”, ಎಂದರು.

ವರದಿಗಾರೊಬ್ಬರು, ಸುಬ್ರಮಣ್ಯನ್ ಸ್ವಾಮಿ ಅವರ ಗಮನವನ್ನು ನಾಗಮಂಗಲ ಘಟನೆಯ ಬಗ್ಗೆ ಸೆಳೆದರು. “ಬಾಂಗ್ಲಾದೇಶದಲ್ಲಿ ನಡೆದಂತೆ ಇಲ್ಲಿಯೂ ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆಯುತ್ತಿದೆ. ಮಂಡ್ಯ ಜಿಲ್ಲೆಯಲ್ಲಿ ಗಣೇಶ ವಿಸರ್ಜನೆಯ ಸಂದರ್ಭ ಮುಸ್ಲಿಮ್ ಸಂಘಟನೆಗಳು ಹಿಂದೂಗಳ ಅಂಗಡಿಗಳ ಮೇಲೆ ದಾಳಿ ನಡೆಸಿದ್ದಾರೆ. ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ರೀತಿಯ ಘಟನೆಗಳು ಪುನರಾವರ್ತನೆಯಾಗುತ್ತಿದೆ” ಎಂದರು.

ಕೂಡಲೇ ಪ್ರತಿಕ್ರಿಯಿಸಿದ ಸುಬ್ರಮಣ್ಯನ್ ಸ್ವಾಮಿ, “ಕೃತ್ಯವನ್ನು ಮುಸ್ಲಿಮರು ಮಾಡಿದ್ದು ಎನ್ನುವುದಕ್ಕೆ ನಿಮ್ಮಲ್ಲಿ ಪುರಾವೆ ಇದೆಯೇ?” ಎಂದು ಮರು ಪ್ರಶ್ನೆ ಹಾಕಿದ್ದಾರೆ. ವರದಿಗಾರ “ಕಲ್ಲೆಸೆತವೂ ನಡೆದಿದೆ” ಎಂದು ಸಮಜಾಯಿಷಿ ಕೊಡಲು ಪ್ರಯತ್ನಿಸಿದ್ದಾರೆ. ಆಗ ಸುಬ್ರಮಣ್ಯಯನ್ ಸ್ವಾಮಿ, “ನಿಮಗೆ ಹೇಗೆ ಗೊತ್ತು?” ಎಂದು ಕೇಳಿದ್ದಾರೆ. ಮುಂದುವರೆದು,“ದೇವಸ್ಥಾನಕ್ಕೆ ದಾಳಿಯಾಗಿದೆ, ಸರಕಾರ ಕ್ರಮ ಕೈಗೊಳ್ಳುತ್ತಿಲ್ಲ ಎನ್ನುವುದಕ್ಕೆ ನಿಮ್ಮಲ್ಲಿ ಪುರಾವೆ ಇದೆಯೇ? ಪುರಾವೆ ಇದ್ದರೆ ನನಗೆ ಕೊಡಿ. ನಾನು ಸುಪ್ರೀಂ ಕೋರ್ಟ್ ಗೆ ಹೋಗುತ್ತೇನೆ. ಅದಕ್ಕೆ ಬೇಕಾದ ಆದೇಶ ತರುತ್ತೇನೆ. ಸಾಕ್ಷ್ಯಗಳ ಸಹಿತ ನನಗೆ ಮಾಹಿತಿ ಕೊಡಿ. ಸಾಕ್ಷಾಧಾರಗಳು ಸರಿಯಿದ್ದರೆ, ನಿಮಗೆ ಬೇಕಾದ ಆದೇಶ ನಾನು ತರುತ್ತೇನೆ. ನಾನು ಸಿಎಂ ಜೊತೆ ಮಾತನಾಡುತ್ತೇನೆ. ನೀವು ಇದನ್ನು ಸರಿಪಡಿಸಿ, ಇಲ್ಲದಿದ್ದರೆ ನಾನು ಸುಪ್ರೀಂ ಕೋರ್ಟ್ ಗೆ ಹೋಗುತ್ತೇನೆ ಎಂದು ಅವರಿಗೆ ಹೇಳುತ್ತೇನೆ. ಆದರೆ ಯಾರೂ ಈ ರೀತಿ ಮಾಡುವುದಿಲ್ಲ. ಆರೋಪ ಮಾಡಿ ಸುಮ್ಮನಾಗುತ್ತಾರೆ” ಎಂದು ಸುಬ್ರಮಣ್ಯನ್ ಸ್ವಾಮಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X