ಉಡುಪಿಯಲ್ಲಿ ಬಿಜೆಪಿಯಿಂದ ಪಾದಯಾತ್ರೆ- ಬಹಿರಂಗ ಸಭೆ
ಉಡುಪಿ: ಈ ಬಾರಿಯ ಚುನಾವಣೆ ದೇಶದ ಭವಿಷ್ಯ ಬರೆಯುವ ಚುನಾವಣೆ. ಯಾವುದೋ ಗ್ರಾಪಂ, ಜಿ.ಪಂಗೆ ನಡೆಯುವ ಚುನಾವಣೆಯಲ್ಲ. ಸಮರ್ಥ, ಸ್ವಾಭಿಮಾನ, ಸಮೃದ್ಧ ಹಾಗೂ ಶಕ್ತಿಶಾಲಿ ಭಾರತ ನಿರ್ಮಾಣಕ್ಕಾಗಿ ಬಿಜೆಪಿಗೆ ಮತಚಲಾಯಿ ಸಬೇಕು ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತದ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಲೋಕಸಭಾ ಚುನಾವಣಾ ಪ್ರಚಾರದ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬುಧವಾರ ಜೋಡುಕಟ್ಟೆಯಿಂದ ಸಿಟಿ ಬಸ್ ನಿಲ್ದಾಣದವರೆಗೆ ಹಮ್ಮಿಕೊಳ್ಳಲಾದ ಪಾದಯಾತ್ರೆ ಹಾಗೂ ನಗರದ ನರ್ಮ್ ಬಸ್ ನಿಲ್ದಾಣದ ಬಹಿರಂಗ ಸಭೆಯನ್ನುದ್ದೇಶಿಸಿ ಅವರು ಮಾತನಾಡುತಿದ್ದರು.
ಶಾಸಕ ಯಶಪಾಲ್ ಎ.ಸುವರ್ಣ ಮಾತನಾಡಿದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ನಿಕಟಪೂರ್ವ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಬಿಜೆಪಿ ಮಂಗಳೂರು ವಿಭಾಗೀಯ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್, ದಿನಕರ ಬಾಬು, ದಿನಕರ ಶೆಟ್ಟಿ ಹೆರ್ಗ, ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಉಪಸ್ಥಿತರಿದ್ದರು.