ಮುಂಗಾರು ಮಳೆಯ ಸಂದರ್ಭದಲ್ಲಿ ಸೂಕ್ತ ಮುಂಜಾಗ್ರತೆ ವಹಿಸಲು ವಿವಿಧ ಇಲಾಖೆಗಳಿಗೆ ಶಾಸಕ ಗುರ್ಮೆ ಸುರೇಶ್ ಸೂಚನೆ
ಕಾಪು, ಜೂ.10: ಕರಾವಳಿಗೆ ಈಗಾಗಲೇ ಮುಂಗಾರು ಪ್ರವೇಶ ಗೊಂಡಿದ್ದು, ಪ್ರಸಕ್ತ ಸಾಲಿನಲ್ಲಿ ಗಾಳಿ- ಮಳೆ ಅಧಿಕವಿರುವ ಬಗ್ಗೆ ಹವಾಮಾನ ಇಲಾಖೆ ವರದಿ ನೀಡಿದೆ. ಈ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳು ಎಚ್ಚರಿಕೆಯಿಂದಿದ್ದು ಸೂಕ್ತ ಮುಂಜಾ ಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಇಲಾಖೆಗಳಿಗೆ ಪತ್ರದ ಮೂಲಕ ಸೂಚನೆಗಳನ್ನು ನೀಡಿದ್ದಾರೆ.
ಗಾಳಿ-ಮಳೆಯ ಸಂದರ್ಭದಲ್ಲಿ ನಿರಂತರ ವಿದ್ಯುತ್ ಪೂರೈಕೆಯ ನಿಟ್ಟಿನಲ್ಲಿ, ವಿದ್ಯುತ್ ಅವಘಡ ಹಾಗೂ ಹಾನಿ ತಪ್ಪಿಸಲು ರಸ್ತೆ ಇಕ್ಕೆಲಗಳಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳು ಹಾಗೂ ಮರಗಳ ಗೆಲ್ಲುಗಳನ್ನು ತೆರವುಗೊಳಿಸುವುದು ಹಾಗೂ ಅಪಾಯಕಾರಿ ಹಳೆಯ ವಿದ್ಯುತ್ ಕಂಬಗಳನ್ನು ತೆರವುಗೊಳಿಸಬೇಕು. ಹಳೆಯ ವಿದ್ಯುತ್ ತಂತಿಗಳನ್ನು ತೆರವು ಗೊಳಿಸಿ ಹೊಸ ವಿದ್ಯುತ್ ತಂತಿಗಳನ್ನು ಅಳವಡಿಸಬೇಕು. ಸಾರ್ವಜನಿಕರಿಂದ ಇಲಾಖೆಗೆ ವಿದ್ಯುತ್ ವ್ಯತ್ಯಯ ಸಂಬಂಧಿ ದೂರುಗಳು ಬಂದಲ್ಲಿ ಶೀಘ್ರ ಸ್ಪಂದನೆ ನೀಡಿ ಕ್ರಮ ಕೈಗೊಳ್ಳುವ ಬಗ್ಗೆ ಮೆಸ್ಕಾಂ ಇಲಾಖಾಧಿಕಾರಿಗಳಿಗೆ ತಿಳಿಸಿದ್ದಾರೆ.
ಮಳೆ ನೀರು ಹರಿಯುವ ಚರಂಡಿಗಳಲ್ಲಿ ಹೂಳು ತುಂಬಿದ್ದು, ರಸ್ತೆಯ ಮೇಲೆ ನೀರು ಹರಿದು ಜನ-ವಾಹನ ಸಂಚಾರಕ್ಕೆ ಅನಾನುಕೂಲವಾಗಿರುತ್ತದೆ. ಆದ್ದರಿಂದ ಪುರಸಭಾ ವ್ಯಾಪ್ತಿಯ ಮುಖ್ಯ ರಸ್ತೆಗಳಲ್ಲಿ ಮಳೆ ನೀರು ಹರಿಯುವ ಚರಂಡಿಗಳಲ್ಲಿ ರುವ ಹೂಳುಗಳನ್ನು ತೆರವುಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡಲು ಕ್ರಮ ಕೈಗೊಳ್ಳಬೇಕು. ಅಲ್ಲದೇ ಪುರಸಭಾ ವ್ಯಾಪ್ತಿಯ ಕೆರೆ ಹಾಗೂ ಮದಗಗಳಲ್ಲಿ ನೀರು ತುಂಬಿ ಕೊಂಡಿದ್ದು, ಸೂಚನಾ ಫಲಕಗಳನ್ನು ಸಾರ್ವಜನಿಕರಿಗೆ ಪ್ರದರ್ಶಿಸುವಂತೆ ಇರಿಸಬೇಕು. ಹಾಗೂ ಆಳ ಗುಂಡಿಗಳನ್ನು ಮ್ಯಾನ್ಹೋಲ್ಗಳನ್ನು ಮುಚ್ಚಿ ಸಾರ್ವಜನಿಕರಿಗೆ ಅಪಾಯ ಕಾರಿ ದುರ್ಘಟನೆಗಳು ಆಗದಂತೆ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರಿಂದ ದೂರು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳು ವಂತೆ ಪುರಸಭೆಯ ಮುಖ್ಯಾಧಿಕಾರಿಗಳಿಗೆ ಪತ್ರದಲ್ಲಿ ಸೂಚಿಸಿದ್ದಾರೆ.
ಹಿಂದಿನ ವರ್ಷಗಳಲ್ಲಿ ರಸ್ತೆಯ ಇಕ್ಕೆಲಗಳಲ್ಲಿರುವ ಅಪಾಯಕಾರಿ ಮರಗಳಿಂದ ಸಾರ್ವಜನಿಕ ಆಸ್ತಿ-ಪಾಸ್ತಿ ಹಾಗೂ ಜೀವ ಹಾನಿ ಆಗಿದ್ದು, ಸದ್ರಿ ವರ್ಷಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸುವುದು ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ರಸ್ತೆಯ ಇಕ್ಕೆಲಗಳಲ್ಲಿರುವ ಅಪಾಯಕಾರಿ ಮರ ಹಾಗೂ ಗೆಲ್ಲುಗಳನ್ನು ತೆರವುಗೊಳಿಸುವಂತೆ ಹಾಗೂ ಸಾರ್ವಜನಿಕರಿಂದ ದೂರುಗಳು ಬಂದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ವಲಯ ಅರಣ್ಯಾಧಿಕಾರಿಗಳಿಗೆ ಪತ್ರ ಬರೆದು ತಿಳಿಸಿದ್ದಾರೆ.
ಮಳೆ ನೀರು ಹರಿಯುವ ಚರಂಡಿಗಳಲ್ಲಿ ಹೂಳು ತುಂಬಿದ್ದು, ರಸ್ತೆಯ ಮೇಲೆ ನೀರು ಹರಿದು ಜನ-ವಾಹನ ಸಂಚಾರಕ್ಕೆ ಅನಾನುಕೂಲವಾಗಿರುತ್ತದೆ. ಆದ್ದರಿಂದ ಲೋಕೋಪಯೋಗಿ ಇಲಾಳೆ ರಸ್ತೆಯ ಮೇಲೆ ಮಳೆ ನೀರು ಹರಿಯುವ ಪ್ರಮುಖ ಚರಂಡಿಗಳಲ್ಲಿರುವ ಹೂಳುಗಳನ್ನು ತೆರವುಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡಲು ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.
ಮಳೆ ನೀರು ಹರಿಯುವ ಚರಂಡಿಗಳಲ್ಲಿ ಹೂಳು ತುಂಬಿದ್ದು, ರಸ್ತೆಯ ಮೇಲೆ ನೀರು ಹರಿದು ಜನ-ವಾಹನ ಸಂಚಾರಕ್ಕೆ ಅನಾನುಕೂಲವಾಗಿರುತ್ತದೆ. ಆದ್ದರಿಂದ ರಾಷ್ಟ್ರೀಯ ಹೆದ್ದಾರಿ ರಸ್ತೆಯ ಮಳೆ ನೀರು ಹರಿಯುವ ಪ್ರಮುಖ ಚರಂಡಿಗಳಲ್ಲಿ ರುವ ಹೂಳುಗಳನ್ನು ತೆರವುಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡಲು ಇಲಾಖೆ ಸೂಕ್ತ ಕ್ರಮ ಕೈಗೊಳ್ಳ ಬೇಕು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಡಿವೈಡರ್ನ್ನು ಸಮರ್ಪಕವಾಗಿ ಅಳವಡಿಸಿ ಪ್ರತಿಫಲಕಗಳನ್ನು ಸಾರ್ವಜನಿಕರಿಗೆ ಹಾಗೂ ವಾಹನ ಸಂಚರಿಗಳಿಗೆ ತೋರುವಹಾಗೆ ಅಳವಡಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಪತ್ರದ ಮೂಲಕ ಸೂಚಿಸಿದ್ದಾರೆ.