ಪಹಣಿಗಳಿಗೆ ಆಧಾರ್ ಸೀಡಿಂಗ್ ಕಡ್ಡಾಯ
ಉಡುಪಿ, ಜು.೩: ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಅಧಾರ್ ಕಾಯ್ದೆಯ ಕಲಂ ೪(೪) (ಬಿ)(೨)ರ ಅಡಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಲು ಸರಕಾರದಿಂದ ಅನುಮತಿ ನೀಡಲಾಗಿದೆ.
ರೈತರು ತಮ್ಮ ಜಮೀನಿನ ಪಹಣಿ ಹಾಗೂ ಆಧಾರ್ ದಾಖಲಾತಿ ಗಳೊಂದಿಗೆ ಸ್ವಯಂ ಪ್ರೇರಣೆಯಿಂದ ಇಲಾಖೆಯ ವೆಬ್ಸೈಟ್ - https://landrecords.karnataka.gov.in/Service4-ನಲ್ಲಿ ಲಾಗಿನ್ ಮಾಡಿ ಕೊಂಡು ಆಧಾರ್ನೊಂದಿಗೆ ಲಿಂಕ್ ಮಾಡಿಕೊಳ್ಳಬಹುದು. ಅಥವಾ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತಾಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಪಹಣಿಯೊಂದಿಗೆ ಆಧಾರ್ ಜೋಡಣೆಗೆ ಜುಲೈ ೩೧ ಕೊನೆಯ ದಿನವಾಗಿದೆ. ಸರಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಹಾಗೂ ಸರಕಾರಿ ಸೌಲಭ್ಯದಿಂದ ವಂಚಿತರಾಗಬಾರದೆಂಬ ನೆಲೆಯಲ್ಲಿ ೨೦೨೪ ರ ಜುಲೈ ಅಂತ್ಯದೊಳಗೆ ಕುಂದಾಪುರ ತಾಲೂಕಿನ ರೈತರು ಪಹಣಿಯೊಂದಿಗೆ ಆಧಾರ್ ಜೋಡಣೆ ಮಾಡಿಸಿಕೊಳ್ಳುವಂತೆ ಕುಂದಾಪುರ ತಹಶೀಲ್ದಾರರ ಕಚೇರಿ ಪ್ರಕಟಣೆ ತಿಳಿಸಿದೆ.