ಬೈಂದೂರು: ನೆರೆ ಪೀಡಿತ ಪ್ರದೇಶಗಳಿಗೆ ಶಾಸಕ ಗಂಟಿಹೊಳೆ ಭೇಟಿ
ಬೈಂದೂರು: ತಾಲೂಕಿನ ಹಲವೆಡೆ ಮಳೆಯ ಅಬ್ಬರ ಜೋರಾಗಿದ್ದ ಪರಿಣಾಮವಾಗಿ ಕೆಲವೆಡೆ ಅಪಾರ ಹಾನಿ ಸಂಭವಿಸಿದ್ದು, ಹಾನಿಗೊಳಗಾದ ಪ್ರದೇಶಗಳಿಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಳೆದ ಮೂರ್ನಾಲ್ಕು ದಿನಗಳಿಂದ ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸೌಪರ್ಣಿಕಾ ನದಿ ನೀರಿನ ಮಟ್ಟ ಹೆಚ್ಚಾಗಿದೆ. ನದಿಯ ಅಕ್ಕ ಪಕ್ಕ ಪ್ರದೇಶಗಳಾದ ನಾವುಂದ, ಸಾಲ್ಬುಡ, ಬಡಾಕೆರೆ, ನಾಡ, ಕಡ್ಕೆ, ಮರವಂತೆ, ಪಡುಕೋಣೆ, ಪ್ರದೇಶಗಳಿಗೆ ಭೇಟಿ ನೀಡಿ ನೆರೆಯಿಂದ ಆಗುವ ಸಮಸ್ಯೆಗಳ ಬಗ್ಗೆ ಸ್ಥಳೀಯ ಹಾಗೂ ಪಂಚಾ ಯತ್ ಪ್ರತಿನಿಧಿಯೊಂದಿಗೆ ಚರ್ಚಿಸಿದರು. ಜಾನುವಾರುಗಳಿಗೆ ಶಾಶ್ವತ ಕೊಟ್ಟಿಗೆ ನಿರ್ಮಾಣ ಹಾಗೂ ಗದ್ದೆ ಪ್ರದೇಶದಲ್ಲಿರುವ ತೋಡುಗಳ ಹೂಳೆತ್ತುವ ಕಾರ್ಯ ನದಿ ದಂಡೆ ನಿರ್ಮಾಣಕ್ಕೆ ವಿಶೇಷ ಅನುದಾನ ಬಗ್ಗೆ ಗಮನಹರಿಸುವುದಾಗಿ ತಿಳಿಸಿದರು.
Next Story