ಮೀಲಾದುನ್ನಬಿ| ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ ವತಿಯಿಂದ ಹಣ್ಣು ಹಂಪಲು ವಿತರಣೆ
ಉಡುಪಿ : ಪ್ರವಾದಿ ಪೈಗಂಬರರ ಜನ್ಮದಿನಾಚರಣೆಯ ಅಂಗವಾಗಿ, ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ (DKSC) ದಅವಾ ವಿಂಗ್ ವತಿಯಿಂದ ಸರ್ಕಾರಿ ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಇಲ್ಲಿ ಬಡ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸುವ ಕಾರ್ಯಕ್ರಮ ಆಯೋಜಿಸಿತು.
ಸಂಘಟನೆಯ ವಿದ್ಯಾರ್ಥಿ ಘಟಕದ ವತಿಯಿಂದ ನಡೆಸಲಾದ ಈ ಕಾರ್ಯಕ್ರಮದಲ್ಲಿ, ಆಸ್ಪತ್ರೆಯಲ್ಲಿನ ಬಡ ರೋಗಿಗಳನ್ನು ಭೇಟಿಯಾಗಿ, ಪ್ರವಾದಿಯು ಸಾರಿದ ಮಾನವೀಯತೆ ಮತ್ತು ಸಾಮರಸ್ಯದ ಸಂದೇಶವನ್ನು ಹಣ್ಣು ಹಂಪಲುಗಳನ್ನು ವಿತರಿಸುವ ಮೂಲಕ ಪ್ರಸಾರ ಮಾಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಲ್ ಇಹ್ಸಾನ್ ದಅವಾ ಕಾಲೇಜು ಇದರ ಪ್ರಾಂಶುಪಾಲರಾದ ಸ್ವಾಬೀರ್ ಸಅದಿ ಅಲ್ ಅಸ್ನವಿ ಇವರು ವಹಿಸಿದ್ದರು. ಸಂಸ್ಥೆಯ ಅಸಿಸ್ಟೆಂಟ್ ಮ್ಯಾನೇಜರ್ ಸಿದ್ದೀಕ್ ಸಅದಿ ದುಆದ ಮೂಲಕ ಚಾಲನೆ ನೀಡಿದರು. ಸಂಸ್ಥೆಯ ಇತರ ಸಿಬ್ಬಂದಿ ವರ್ಗ ಮತ್ತು ಅಲ್ ಇಹ್ಸಾನ್ ಅಲುಮಿನಿ ಸದಸ್ಯರು ಉಪಸ್ಥಿತರಿದ್ದರು.
Next Story