ಮಾಡಿನಿಂದ ಬಿದ್ದು ಉತ್ತರ ಪ್ರದೇಶದ ಕಾರ್ಮಿಕ ಮೃತ್ಯು
ಶಂಕರನಾರಾಯಣ, ಅ.18: ಹೆಬ್ರಿ ತಾಲೂಕು ಬೆಳ್ವೆ ಗ್ರಾಮದ ಬೆಳ್ವೆ ರಾಧಿಕಾ ಕ್ಯಾಶ್ಯೂ ಫ್ಯಾಕ್ಟರಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ವೇಳೆ ಶೀಟ್ ಮಾಡಿನಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಉತ್ತರ ಪ್ರದೇಶ ಮೂಲದ ಜಪ್ರುದ್ದಿನ್ ಎಂದು ಗುರುತಿಸಲಾಗಿದೆ. ಇವರು ಫ್ಯಾಕ್ಟರಿಯಲ್ಲಿ ಹಳೆಯ ಶೀಟ್ ಮಾಡಿನ ವೆಲ್ಡಿಂಗ್ ಕೆಲಸ ಮಾಡುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಇವರು ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಅ.17ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿ ದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story