Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಆದಾಯ ಹೆಚ್ಚಳಗೊಂಡ ಕೇವಲ 26 ಬಿಪಿಎಲ್...

ಆದಾಯ ಹೆಚ್ಚಳಗೊಂಡ ಕೇವಲ 26 ಬಿಪಿಎಲ್ ಕಾರ್ಡ್‌ಗಳು ಅನರ್ಹ!

ಉಡುಪಿ ತಾಲೂಕು ಕೆಡಿಪಿ ಸಭೆಯಲ್ಲಿ ಆಹಾರ ನಿರೀಕ್ಷಕರಿಂದ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ12 Nov 2024 7:54 PM IST
share
ಆದಾಯ ಹೆಚ್ಚಳಗೊಂಡ ಕೇವಲ 26 ಬಿಪಿಎಲ್ ಕಾರ್ಡ್‌ಗಳು ಅನರ್ಹ!

ಉಡುಪಿ, ನ.12: ಉಡುಪಿಯಲ್ಲಿ ಯಾವುದೇ ಕುಟಂಬದ ಬಿಪಿಎಲ್ ಕಾರ್ಡ್‌ಗಳನ್ನು ರದ್ಧತಿ ಮಾಡಲಾಗಿಲ್ಲ. ತೆರಿಗೆ ಪಾವತಿದಾರರು ಮತ್ತು ಆದಾಯ ಹೆಚ್ಚಳವಾಗಿರುವ ಕೇವಲ 44 ಕುಟುಂಬಗಳ ಬಿಪಿಎಲ್ ಕಾರ್ಡ್‌ನ್ನು ಅನರ್ಹಗೊಳಿಸಿ ಎಪಿಎಲ್ ಕಾರ್ಡ್‌ಗಳಾಗಿ ಪರಿವರ್ತಿಸಲಾಗಿದೆ. ಈ ಪ್ರಕ್ರಿಯೆ ಯನ್ನು ಕುಟುಂಬಗಳ ಹೇಳಿಕೆ ಪಡೆದುಕೊಂಡೆ ಮಾಡಲಾಗಿದೆ ಎಂದು ಉಡುಪಿ ತಾಪಂ ಕಚೇರಿಯಲ್ಲಿ ಇಂದು ನಡೆದ ಉಡುಪಿ ತಾಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಉಡುಪಿಯ ಆಹಾರ ನಿರೀಕ್ಷರು ಮಾಹಿತಿ ನೀಡಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ವಿಷಯ ಪ್ರಸ್ತಾಪಿಸಿ, ಉಡುಪಿ ಜಿಲ್ಲೆಯಲ್ಲಿ 40ಸಾವಿರ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸಲಾಗಿದೆ ಎಂದು ಹೇಳಲಾಗುತ್ತಿದೆ. ಇದರಿಂದ ಬಡವರಿಗೆ ಸಮಸ್ಯೆ ಆಗುತ್ತದೆ. ಅವರನ್ನು ಎಲ್ಲ ಸೌಲಭ್ಯಗಳಿಂದ ವಂಚಿತರಾಗಲಿದ್ದಾರೆ ಎಂದರು.

ಇದಕ್ಕೆ ಸ್ಪಷ್ಟನೆ ನೀಡಿದ ಆಹಾರ ನಿರೀಕ್ಷಕರು, ಉಡುಪಿಯಲ್ಲಿನ ಆದಾಯ ಹೆಚ್ಚಳ ಮತ್ತು ತೆರಿಗೆ ಪಾವತಿದಾರ ಒಟ್ಟು 11238 ಕುಟುಂಬಗಳ ಬಿಪಿಎಲ್ ಕಾರ್ಡ್‌ಗಳ ವಿವರ ವನ್ನು ಪರಿಶೀಲನೆ ಮಾಡುವಂತೆ ಬೆಂಗಳೂರಿನ ಕಮಿಷನರ್ ಕಚೇರಿಯಿಂದ ಕಳುಹಿಸಿಕೊಡಲಾಗಿತ್ತು. ಅದರಂತೆ ತೆರಿಗೆ ಪಾವತಿದಾರ 508 ಕಾರ್ಡ್‌ಗಳ ಪೈಕಿ ಒಟ್ಟು 238 ಕಾರ್ಡ್‌ಗಳನ್ನು ಪರಿಶೀಲನೆ ಮಾಡಲಾಗಿದ್ದು, ಅದರಲ್ಲಿ 220 ಕುಟುಂಬಗಳು ಬಿಪಿಎಲ್ ಕಾರ್ಡ್‌ಗೆ ಅರ್ಹರಾಗಿದ್ದಾರೆ. 18 ಕಾರ್ಡ್‌ಗಳು ಅರ್ನಹಗೊಳಿಸಲಾಗಿದೆ. ಇನ್ನು 270 ಕಾರ್ಡ್‌ಗಳು ಪರಿಶೀಲನೆಗೆ ಬಾಕಿ ಇವೆ ಎಂದರು.

ಕುಟುಂಬದ ಆದಾಯ ಹೆಚ್ಚಳಗೊಂಡಿರುವ 10730 ಬಿಪಿಎಲ್ ಕಾರ್ಡ್‌ಗಳ ಪೈಕಿ ಒಟ್ಟು 9243 ಕಾರ್ಡ್‌ಗಳನ್ನು ಪರಿಶೀಲಿಸಲಾಗಿದೆ. ಇದರಲ್ಲಿ 9217 ಕಾರ್ಡ್‌ಗಳು ಬಿಪಿಎಲ್‌ಗೆ ಅರ್ಹವಾಗಿದೆ. ಕೇವಲ 26ಕಾರ್ಡ್‌ಗಳು ಮಾತ್ರ ಅನರ್ಹಗೊಂಡಿದೆ. ಇನ್ನು 1487 ಕಾರ್ಡ್‌ಗಳು ಪರಿಶೀಲನೆಗೆ ಬಾಕಿ ಇದೆ. ಅನರ್ಹಗೊಂಡ ಕಾರ್ಡುದಾರರ ಹೇಳಿಕೆಯನ್ನು ಪಡೆದುಕೊಂಡು ಅವರ ಹೇಳಿಕೆ ತೆಗೆದುಕೊಂಡು ಮಾಡಲಾಗಿದೆ. ಇಲ್ಲಿ ಯಾವುದೇ ಕುಟುಂಬಗಳ ಕಾರ್ಡ್ ರದ್ಧಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

‘ಅನರ್ಹ ಬಿಪಿಎಲ್ ಕಾರ್ಡ್ ಎಂದು ಗುರುತಿಸಿರುವ ಪಡಿತರ ಚೀಟಿಗಳ ಫಲಾನುಭವಿಗಳ ದಾಖಲೆಗಳ ನೈಜತೆ ಪರಿಶೀಲನೆ ಮಾಡಿ ನಂತರವೆ ಅವರ ಬಿಪಿಎಲ್ ಕಾರ್ಡ್ ರದ್ದತಿ ಬಗ್ಗೆ ಕ್ರಮ ಕೈಗೊಳ್ಳಬೇಕು. ಅಲ್ಲಿಯವರೆಗೆ ಆ ಫಲಾನುಭವಿಗಳಿಗೆ ಪಡಿತರ ವ್ಯವಸ್ಥೆಯನ್ನು ಮೊದಲಿನಂತೆ ಮುಂದುವರೆಸ ಬೇಕು’ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ತಿಳಿಸಿದರು.

ಉಡುಪಿ ತಾಲೂಕಿನ ಕೊಡವೂರು, ಹೆರ್ಗ, ಶಿವಳ್ಳಿ ಗ್ರಾಮಗಳಲ್ಲಿ ಹಕ್ಕುಪತ್ರ ನೀಡಲು ಬಾಕಿ ಇದ್ದು, ಅದರ ಎಲ್ಲ ಪ್ರಕ್ರಿಯೆಗಳನ್ನು ಒಂದು ವಾರದೊಳಗೆ ಪೂರ್ಣಗೊಳಿಸಿ ವಿತರಣೆಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಶಾಸಕ ಯಶ್‌ಪಾಲ್ ಸುವರ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಾಪು ಕ್ಷೇತ್ರದ 10 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈಗಾಗಲೇ 94 ಸಿ. ಹಾಗೂ 94 ಸಿ.ಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಕಡತಗಳನ್ನು ಶೀಘ್ರವೇ ವಿಲೆಗೊಳಿಸಬೇಕು. ಸಣ್ಣ ನೀರಾವರಿ ವ್ಯಾಪ್ತಿಗೆ ಬರುವ ಕಿಂಡಿ ಅಣೆಕಟ್ಟುಗಳಲ್ಲಿ ನೀರಿನ ಶೇಖರಣೆ ಯನ್ನು ಸಮರ್ಪಕವಾಗಿ ನಿರ್ವಹಿಸಿ ಅಂತರ್ಜಲ ಮಟ್ಟವನ್ನು ಹೆಚ್ಚಿಸಿ ಕುಡಿಯುವ ನೀರು ಹಾಗೂ ಕೃಷಿ ಕಾರ್ಯಗಳಿಗೆ ಅನುಕೂಲ ಮಾಡಬೇಕು ಎಂದು ಗುರ್ಮೆ ಸಭೆಯಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಉಡುಪಿ ಕ್ಷೇತ್ರದ 34 ಅರ್ಹ ಫಲಾನುಭವಿಗಳಿಗೆ ಉಚಿತ ಹೊಲಿಗೆ ಯಂತ್ರವನ್ನು ವಿತರಿಸಲಾಯಿತು. ಸಭೆಯಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ತಾಪಂ ಆಡಳಿತಾಧಿಕಾರಿ ರವೀಂದ್ರ, ತಾಪಂ ಕಾರ್ಯ ನಿರ್ವಹಣಾಧಿಕಾರಿ ವಿಜಯ, ಉಡುಪಿ ತಹಶೀಲ್ದಾರ್ ಗುರುರಾಜ ಪಿ.ಆರ್., ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಉಪಸ್ಥಿತರಿದ್ದರು.

ತಾಪಂ ಸಹಾಯಕ ನಿರ್ದೇಶಕಿ ಫರ್ಝಾನಾ ಸ್ವಾಗತಿಸಿದರು. ದಿನಕರ ಬೆಂಗ್ರೆ ಕಾರ್ಯಕ್ರಮ ನಿರೂಪಿಸಿದರು.

ನಾಳೆಯಿಂದಲೇ ರಸ್ತೆ ದುರಸ್ತಿ ಕಾಮಗಾರಿ

ಬೀಡಿನಗುಡ್ಡೆ, ಕುಕ್ಕಿಕ್ಕಟ್ಟೆ, ಅಲೆವೂರು, ಮೂಡುಬೆಳ್ಳೆ ಸಂಪೂರ್ಣ ಹಾಳಾಗಿದೆ. ಅದೇ ರೀತಿ ಶಿರ್ವ- ಕಟಪಾಡಿ ರಸ್ತೆಯೂ ವಾಹನ ಸಂಚಾರಕ್ಕೆ ಅಯೋಗ್ಯವಾಗಿದೆ. ಜನ ನಮಗೆ ಬೈಯುತ್ತಿದ್ದಾರೆ. ಆದುದರಿಂದ ಗುತ್ತಿಗೆದಾರ ರಿಗೆ ತಿಳಿಸಿ ನಾಳೆ ಯಿಂದಲೇ ಕಾಮಗಾರಿ ಪ್ರಾರಂಭಿಸಿ ಎಂದು ಶಾಸಕರು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಈಗಾಗಲೇ ಗುತ್ತಿಗೆದಾರರಿಗೆ ಸೂಚನೆ ನೀಡಿ, ಹೊಂಡಗುಂಡಿ ಬಿದ್ದಿರುವ ರಸ್ತೆ ಗಳನ್ನು ಕೂಡಲೇ ದುರಸ್ತಿ ಮಾಡುವಂತೆ ತಿಳಿಸಲಾಗಿದೆ. ಕೆಲವು ಕಾಮಗಾರಿಯನ್ನು ಪ್ರಾಕೃತಿಕ ವಿಕೋಪ ನಿಧಿಯಿಂದ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X