Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮುಂಬೈಯಲ್ಲಿ ಪ್ಲಾಟ್‌ಫಾರಂ ವಿಸ್ತರಣಾ...

ಮುಂಬೈಯಲ್ಲಿ ಪ್ಲಾಟ್‌ಫಾರಂ ವಿಸ್ತರಣಾ ಕಾಮಗಾರಿ: ಮಂಗಳೂರು ಜಂಕ್ಷನ್ - ಮುಂಬೈ ರೈಲು ಥಾಣೆವರೆಗೆ

ವಾರ್ತಾಭಾರತಿವಾರ್ತಾಭಾರತಿ3 Sept 2024 7:20 PM IST
share
ಮುಂಬೈಯಲ್ಲಿ ಪ್ಲಾಟ್‌ಫಾರಂ ವಿಸ್ತರಣಾ ಕಾಮಗಾರಿ: ಮಂಗಳೂರು ಜಂಕ್ಷನ್ - ಮುಂಬೈ ರೈಲು ಥಾಣೆವರೆಗೆ

ಉಡುಪಿ, ಸೆ.3: ಮುಂಬೈಯ ಸಿಎಸ್‌ಎಂಟಿ ರೈಲ್ವೇ ನಿಲ್ದಾಣದಲ್ಲಿ ಫ್ಲಾಟ್‌ಫಾರಂ ನಂ.10,11,12,13ರ ವಿಸ್ತರಣಾ ಕಾಮಗಾರಿ ಸೆ.30ರವೆಗೆ ನಡೆಯಲಿರುವುದರಿಂದ ಹಲವು ದೂರ ಸಂಚಾರದ ರೈಲುಗಳ ಪ್ರಯಾಣ ವನ್ನು ಥಾಣೆ ಹಾಗೂ ದಾದರ್ ನಿಲ್ದಾಣಗಳಲ್ಲಿ ನಿಲ್ಲಿಸಲು ಕೇಂದ್ರ ರೈಲ್ವೆ ನಿರ್ಧರಿಸಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.

ಅದರಂತೆ ರೈಲು ನಂ.12134 ಮಂಗಳೂರು ಜಂಕ್ಷನ್- ಮುಂಬೈ ಸಿಎಸ್‌ಎಂಟಿ ಎಕ್ಸ್‌ಪ್ರೆಸ್ ರೈಲಿನ ಸಂಚಾರ ಸೆ.30ರವರೆಗೆ ಥಾಣೆ ನಿಲ್ದಾಣದಲ್ಲೇ ಕೊನೆಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮಡಗಾಂವ್-ವೆಲಂಕಣಿ ರೈಲು: ಸೆಪ್ಟಂಬರ್ ತಿಂಗಳಲ್ಲಿ ನಡೆಯುವ ವೆಲಂಕಣಿ ವಾರ್ಷಿಕ ಹಬ್ಬದ ಪ್ರಯುಕ್ತ ಮಡಗಾಂವ್ ಹಾಗೂ ವೆಲಂಕಣಿ ನಡುವೆ ವಿಶೇಷ ರೈಲನ್ನು ಓಡಿಸಲು ನಿರ್ಧರಿಸಲಾಗಿದೆ.

ರೈಲು ನಂ.01007 ಮಡಗಾಂವ್ ಜಂಕ್ಷನ್ ವೆಲಂಕಣಿ ವಿಶೇಷ ರೈಲು ಸೆ.6ರಂದು ಅಪರಾಹ್ನ 12:30ಕ್ಕೆ ಮಡಂಗಾವ್‌ ನಿಂದ ಹೊರಡಲಿದ್ದು, ಮರುದಿನ ಅಪರಾಹ್ನ 12:25ಕ್ಕೆ ವೆಲಂಕಣಿ ತಲುಪಲಿದೆ. ಅದೇ ರೀತಿ ರೈಲು ನಂ.01008 ವೆಲಂಕಣಿ-ಮಡಗಾಂವ್ ಜಂಕ್ಷನ್ ರೈಲು ಶನಿವಾರ ಮಧ್ಯರಾತ್ರಿ 11:55ಕ್ಕೆ ವೆಲಂಕಣಿಯಿಂದ ಹೊರಡಲಿದ್ದು, ಮರುದಿನ ರಾತ್ರಿ 11:00ಗಂಟೆಗೆ ಮಡಗಾಂವ್ ತಲುಪಲಿದೆ.

2ಟಯರ್ ಎಸಿ 2ಕೋಚ್, 3ಟಯರ್ ಎಸಿ 6 ಕೋಚ್, 7 ಸ್ಲೀಪರ್ ಕೋಚ್ ಸೇರಿದಂತೆ ಒಟ್ಟು 19 ಕೋಚ್‌ಗಳನ್ನು ಹೊಂದಿರುವ ಈ ರೈಲಿಗೆ ಕಾರವಾರ, ಕುಮಟ, ಹೊನ್ನಾವರ, ಮುರ್ಡೇಶ್ವರ, ಭಟ್ಕಳ, ಮೂಕಾಂಬಿಕಾ ರೋಡ್ ಬೈಂದೂರು, ಕುಂದಾಪುರ, ಉಡುಪಿ, ಸುರತ್ಕಲ್, ಮಂಗಳೂರು ಜಂಕ್ಷನ್, ಕಾಸರಗೋಡು, ಪಯ್ಯನೂರು, ಕಣ್ಣೂರು, ತಲ್ಲಚೇರಿ, ಕೋಝಿಕೋಡ್, ತಿರೂರು, ಶೋರನೂರು ಜಂಕ್ಷನ್, ಪಾಲಕ್ಕಾಡ್, ಕೊಯಮತ್ತೂರು, ತಿರುಪ್ಪುರ, ಈರೋಡ್, ಕರೂರು ಜಂಕ್ಷನ್, ತಿರುಚಿರಪಳ್ಳಿ ಜಂಕ್ಷನ್, ತಂಜಾವೂರು ಜಂಕ್ಷನ್, ತಿರುವಾಯೂರು ಜಂಕ್ಷನ್ ಹಾಗೂ ನಾಗಪಟ್ಟಣಂ ನಿಲ್ದಾಣಗಳಲ್ಲಿ ನಿಲುಗಡೆ ಇರುತ್ತದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.

ವಿಶೇಷ ರೈಲು ಸಂಚಾರ: ಚಳಿಗಾಲ ಹಾಗೂ ದೀಪಾವಳಿ ಸಂದರ್ಭದಲ್ಲಿ ಕೊಂಕಣ ರೈಲು ಮಾರ್ಗದಲ್ಲಿ ವಿಶೇಷ ರೈಲು ಗಳನ್ನು ಓಡಿಸಲಾಗುತ್ತಿದೆ. ಲೋಕಮಾನ್ಯ ತಿಲಕ್ ಮುಂಬಯಿ- ಕೊಚ್ಚುವೇಲಿ- ಲೋಕಮಾನ್ಯ ತಿಲಕ್ ನಡುವೆ ವಿಶೇಷ ಸಾಪ್ತಾಹಿಕ ರೈಲು ಸಂಚರಿಸಲಿದೆ. ಈ ರೈಲು ಅ.24, ಅ.31, ನ.7 ಹಾಗೂ ನ.14ರ ಗುರುವಾರದಂದು ಸಂಜೆ 4ಗಂಟೆಗೆ ಮುಂಬಯಿ ಲೋಕಮಾನ್ಯ ತಿಲಕ್‌ನಿಂದ ಹೊರಡಲಿದ್ದು, ಮರುದಿನ ರಾತ್ರಿ 8:45ಕ್ಕೆ ಕೊಚ್ಚುವೇಲಿ ತಲುಪಲಿದೆ.

ಮರುಪ್ರಯಾಣದಲ್ಲಿ ಈ ರೈಲು ಅ.26, ನ.2, ನ.9 ಹಾಗೂ ನ.16ರ ಶನಿವಾರ ಸಂಜೆ 4:20ಕ್ಕೆ ಕೊಚ್ಚುವೇಲಿಯಿಂದ ಹೊರಡಲಿದ್ದು ಮರುದಿನ ರಾತ್ರಿ 9:50ಕ್ಕೆ ಮುಂಬಯಿ ತಲುಪಲಿದೆ. 21 ಕೋಚ್‌ಗಳನ್ನು ಹೊಂದಿರುವ ಈ ರೈಲಿಗೆ ರಾಜ್ಯ ಕರಾವಳಿಯ ಕಾರವಾರ, ಕುಮಟಾ, ಕುಂದಾಪುರ, ಉಡುಪಿ, ಮಂಗಳೂರು ಜಂಕ್ಷನ್ ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X