Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಶಿರೂರು ದುರಂತ ಸ್ಥಳದ ಸಮೀಪ ಮತ್ತೆ ಗುಡ್ಡ...

ಶಿರೂರು ದುರಂತ ಸ್ಥಳದ ಸಮೀಪ ಮತ್ತೆ ಗುಡ್ಡ ಅಗೆತ

ಪೂರ್ಣಗೊಳ್ಳದ ಚತುಷ್ಪಥ ಕಾಮಗಾರಿ ► ಮಣ್ಣು ಕುಸಿಯುವ ಭೀತಿಯಲ್ಲಿ ಸ್ಥಳೀಯರು

ನಾಗರಾಜ ಮಂಜಗುಣಿನಾಗರಾಜ ಮಂಜಗುಣಿ16 Feb 2025 3:25 PM IST
share
ಶಿರೂರು ದುರಂತ ಸ್ಥಳದ ಸಮೀಪ ಮತ್ತೆ ಗುಡ್ಡ ಅಗೆತ

ಅಂಕೋಲಾ : ದೇಶವನ್ನೇ ಬೆಚ್ಚಿ ಬೀಳಿಸಿದ್ದ ಶಿರೂರು ಗುಡ್ಡ ಕುಸಿತ ದುರಂತದ ಕಹಿ ನೆನಪು ಮಾಸುವ ಮುನ್ನವೇ ಈಗ ಮತ್ತೆ ದುರಂತ ನಡೆದ ಸಮೀಪದಲ್ಲಿ ರಸ್ತೆ ನಿರ್ಮಾಣಕ್ಕಾಗಿ ಹಿಟಾಚಿ ಮೂಲಕ ಗುಡ್ಡ ಕತ್ತರಿಸುವ ಕಾರ್ಯ ಮುಂದುವರಿದಿದೆ. ಇದರಿಂದಾಗಿ ಮಳೆಗಾಲದಲ್ಲಿ ಗುಡ್ಡ ಕುಸಿಯುವ ಭೀತಿ ಸ್ಥಳೀಯರಲ್ಲಿ ಉಂಟಾಗಿದೆ.

2024ರ ಜು.16ರಂದು ಶಿರೂರಿನಲ್ಲಿ ಗುಡ್ಡ ಕುಸಿತದಲ್ಲಿ ಒಟ್ಟು 11 ಜನ ನಾಪತ್ತೆಯಾಗಿದ್ದು, ಕಾರ್ಯಾಚರಣೆ ಬಳಿಕ 9 ಮಂದಿಯ ಮೃತದೇಹಗಳು ಪತ್ತೆಯಾಗಿತ್ತು. ಅದರಲ್ಲೂ, ದುರಂತದಲ್ಲಿ ನಾಪತ್ತೆಯಾಗಿದ್ದ ಕೇರಳದ ಟ್ರಕ್ ಹಾಗೂ ಅದರ ಚಾಲಕ ಅರ್ಜುನ್ ಹುಡುಕಾಟಕ್ಕೆ ಸಾಕಷ್ಟು ಕಾರ್ಯಾಚರಣೆಯನ್ನೇ ಮಾಡಬೇಕಾಯಿತು. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಭಾರತೀಯ ನೌಕಾಸೇನೆ, ಭೂ ಸೇನೆ, ಮುಳುಗು ತಜ್ಞರು ಸೇರಿ ಒಟ್ಟು ನೂರಕ್ಕೂ ಅಧಿಕ ಜನ ನಿರಂತರ ಶೋಧ ಕಾರ್ಯ ನಡೆಸಿದ್ದು, 71 ದಿನಗಳ ನಂತರ ಟ್ರಕ್ ಸಹಿತ ಅರ್ಜುನ್ ಮೃತದೇಹದ ಅವಶೇಷ ಪತ್ತೆಯಾಗಿತ್ತು. ಈ ಘಟನೆ ದೇಶವನ್ನೇ ತಲ್ಲಣಗೊಳಿಸಿತ್ತು.

ಆದರೆ, ಈಗ ಮತ್ತೆ ಚತುಷ್ಪಥ ಹೆದ್ದಾರಿಗಾಗಿ ದುರಂತ ನಡೆದ ಸ್ಥಳದ ಸಮೀಪ ಗುಡ್ಡ ಕೊರೆತ ಕಾರ್ಯ ಮುಂದುವರಿದಿರುವುದು ಸ್ಥಳೀಯರು ಸೇರಿದಂತೆ ಪ್ರಯಾಣಿಕರಲ್ಲಿಯೂ ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.

ಚತುಷ್ಪಥ ಹೆದ್ದಾರಿ ಕಾಮಗಾರಿ ಆರಂಭಗೊಂಡು ದಶಕಗಳೇ ಕಳೆದರೂ ಇದುವರೆಗೂ ಪೂರ್ಣಗೊಂಡಿಲ್ಲ. ಜನರು ಕೂಡ ಪರ್ಯಾಯ ಮಾರ್ಗ ಕಾಣದೆ ಈ ರಸ್ತೆಯ ಮೂಲಕವೇ ಸಂಚರಿಸಬೇಕಾಗಿದೆ. ಅರ್ಧಂಬರ್ಧ ಕಾಮಗಾರಿಯಿಂದಾಗಿ ಈಗಲೂ ಅಪಘಾತ, ಅವಘಡಗಳು ನಡೆಯುತ್ತಲೇ ಇವೆ. ಅಲ್ಲದೆ, ಸಾಕಷ್ಟು ಅಪಾಯಕಾರಿ ತಿರುವುಗಳಿದ್ದರೂ ಹಿರಿಯ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಗಮನ ಹರಿಸದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

ಶಿರೂರು ಗುಡ್ಡ ಕುಸಿತ ಘಟನೆಯಲ್ಲಿ ನದಿಗೆ ಬಿದ್ದ ಗುಡ್ಡದ ಮಣ್ಣು ಹಾಗೇ ಉಳಿದು ಕೊಂಡಿದೆ. ಅದನ್ನು ಕೂಡ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ತೆರವುಗೊಳಿಸಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸುತ್ತಿದ್ದು, ಇದನ್ನು ಮಳೆಗಾಲದಲ್ಲಿಯೂ ತೆರವುಗೊಳಿಸದಿದ್ದರೆ ಬೆಳಸೆ, ಅಗ್ರಗೋಣ, ಸಗಡಗೇರಿ, ವಾಸರಕುದ್ರಿಗೆ, ಅಗಸೂರು, ಸುಂಕಸಾಳ, ಡೋಂಗ್ರಿ ಗ್ರಾಪಂ ವ್ಯಾಪ್ತಿ ಪ್ರದೇಶದ ಜನರಿಗೆ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಶಿರೂರಿನಲ್ಲಿ ಸಂಭವಿಸಿದ ದುರಂತದಲ್ಲಿ ಗುಡ್ಡ ಕುಸಿತದ ಮಣ್ಣು ಗಂಗಾವಳಿ ನದಿಯನ್ನು ಆವರಿಸಿಕೊಂಡಿದ್ದು, ಇದುವರೆಗೂ ಅದನ್ನು ತೆರವುಗೊಳಿಸದೇ ಇರುವುದು ಆಘಾತಕಾರಿ ಸಂಗತಿ. ಇದರ ಜೊತೆಗೆ ಈಗ ಮತ್ತೆ ಶಿರೂರಿನಲ್ಲಿ ಗುಡ್ಡದ ಮಣ್ಣನ್ನು ಅಗೆದು ರಸ್ತೆ ನಿರ್ಮಾಣಕ್ಕೆ ಮುಂದಾಗಿರುವುದು ನಿಜಕ್ಕೂ ಆತಂಕಕಾರಿಯಾಗಿದೆ. ಇನ್ನು ಮುಂದೆ ಇಲ್ಲಿ ಯಾವುದೇ ಅನಾಹುತಗಳು ನಡೆದರೂ ಅದಕ್ಕೆ ಸಂಬಂಧಿಸಿದ ಇಲಾಖೆ, ಗುತ್ತಿಗೆ ಕಂಪೆನಿ ಜವಾಬ್ದಾರಿಯಾಗಲಿವೆ.

-ರಮೇಶ ಗೌಡ, ಶಿರೂರು

ಶಿರೂರಿನಲ್ಲಿ ನಡೆದ ಗುಡ್ಡ ಕುಸಿತದಲ್ಲಿ 11 ಮಂದಿ ಮೃತಪಟ್ಟಿದ್ದರು. ಹೀಗಾಗಿ ಇಲ್ಲಿ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದು ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಐಆರ್‌ಬಿ ಕಂಪೆನಿಯವರಿಗೆ ಸಭೆ ನಡೆಸಿ ಎಚ್ಚರಿಕೆ ನೀಡಲಾಗಿದೆ. ಶಿರೂರಿನಲ್ಲಿ ಅಪಾಯವಾಗದಂತೆ ತಡೆಗಟ್ಟಬೇಕಾದದ್ದು ಇಲಾಖೆ ಮತ್ತು ಗುತ್ತಿಗೆ ಕಂಪೆನಿಯ ಜವಾಬ್ದಾರಿಯಾಗಿದೆ.

-ಲಕ್ಷ್ಮೀಪ್ರಿಯಾ ಕೆ., ಉತ್ತರ ಕನ್ನಡ ಜಿಲ್ಲಾಧಿಕಾರಿ

share
ನಾಗರಾಜ ಮಂಜಗುಣಿ
ನಾಗರಾಜ ಮಂಜಗುಣಿ
Next Story
X