Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಈದ್ಗ್ ಗೆ ಮುನ್ನ ಅಗತ್ಯವಿರುವ...

ಈದ್ಗ್ ಗೆ ಮುನ್ನ ಅಗತ್ಯವಿರುವ ಕುಟುಂಬಗಳಿಗೆ 1.2 ಲಕ್ಷ ಕೆಜಿ ಅಕ್ಕಿ ವಿತರಿಸಿದ ಭಟ್ಕಳ ಸಮುದಾಯ

ವಾರ್ತಾಭಾರತಿವಾರ್ತಾಭಾರತಿ18 April 2025 10:35 PM IST
share
ಈದ್ಗ್ ಗೆ ಮುನ್ನ ಅಗತ್ಯವಿರುವ ಕುಟುಂಬಗಳಿಗೆ 1.2 ಲಕ್ಷ ಕೆಜಿ ಅಕ್ಕಿ ವಿತರಿಸಿದ ಭಟ್ಕಳ ಸಮುದಾಯ

ಭಟ್ಕಳ: ಈದ್-ಉಲ್-ಫಿತ್ರ್ ಗೂ ಮುನ್ನ, ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬಗಳಿಗೆ ಭಟ್ಕಳ ಹಾಗೂ ಸುತ್ತಮುತ್ತಲಿನ ನಿವಾಸಿಗಳು 1.2 ಲಕ್ಷ ಕೆಜಿಗೂ ಹೆಚ್ಚು ಅಕ್ಕಿಯನ್ನು ವಿತರಿಸಿದರು.

ಕಳೆದ ನಾಲ್ಕು ದಶಕಗಳಿಂದ ಈ ಕಾರ್ಯಕ್ರಮದ ಉಸ್ತುವಾರಿಯನ್ನು ವಹಿಸಿರುವ ಕೇಂದ್ರ ಫಿತ್ರ್ ಸಮಿತಿಯ ವಾರ್ಷಿಕ ಫಿತ್ರ್ ಉಪಕ್ರಮದ ಭಾಗವಾಗಿ ಈ ವಿತರಣಾ ಕಾರ್ಯಕ್ರಮವನ್ನು ರೂಪಿಸಲಾಗಿತ್ತು.

2025ರಲ್ಲಿ ಈ ಅಭಿಯಾನವು ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ ಹಾಗೂ ಶಿರೂರು ಸೇರಿದಂತೆ ವಿವಿಧ ಪಟ್ಟಣಗಳು ಹಾಗೂ ಗ್ರಾಮಗಳ 1,859 ಕುಟುಂಬಗಳನ್ನು ಒಳಗೊಂಡಿದೆ. ಕೇಂದ್ರ ಫಿತ್ರ್ ಸಮಿತಿಯ ಸಂಚಾಲಕ ಮೌಲಾನಾ ಮುಹಮ್ಮದ್ ಇಲ್ಯಾಸ್ ಜಕಾತಿ ನದ್ವಿ ಪ್ರಕಾರ, ಈ ಪ್ರಕ್ರಿಯೆ ಯನ್ನು ದಕ್ಷವಾಗಿ ನಿರ್ವಹಿಸಲು 58 ವಿತರಣಾ ವಲಯಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಕಾರ್ಯಕ್ಕೆ ಕೊಲ್ಲಿ ರಾಷ್ಟ್ರಗಳಲ್ಲಿ ನೆಲೆಸಿರುವ ಭಟ್ಕಳ ಮೂಲದ ನಿವಾಸಿಗಳ ಕೊಡುಗೆಗಳೊಂದಿಗೆ ನೆರವು ಒದಗಿಸಲಾಗಿದ್ದು, ಅವರು ರಮಝಾನ್ ಸಂದರ್ಭದಲ್ಲಿ ನಿಯಮಿತವಾಗಿ ದೇಣಿಯನ್ನು ರವಾನಿಸುತ್ತಾ ಬರುತ್ತಿದ್ದಾರೆ.

ಬಹುತೇಕ ಕುಟುಂಬಗಳು ಸುಮಾರು 50 ಕೆಜಿ ಅಕ್ಕಿಯವರೆಗೆ ನೆರವು ಸ್ವೀಕರಿಸಿದ್ದರೆ, ದೊಡ್ಡ ಕುಟುಂಬ ಗಳು ಹಾಗೂ ಅಂಗವಿಕಲ ಸದಸ್ಯರನ್ನು ಹೊಂದಿರುವ ಕುಟುಂಬಗಳಿಗೆ 100 ಕೆಜಿಯವರೆಗೆ ಅಕ್ಕಿಯನ್ನು ವಿತರಿಸಲಾಗಿದೆ. ನಾಲ್ಕನೆ ವರ್ಷದ ಈ ವಿತರಣಾ ಕಾರ್ಯಕ್ರಮವು ಪ್ರತಿ ಕುಟುಂಬಕ್ಕೆ ಐದು ಕೆಜಿ ಬಾಸ್ಮತಿ ಅಕ್ಕಿಯ ಹಂಚಿಕೆಯನ್ನೂ ಒಳಗೊಂಡಿದೆ.

ಇತ್ತೀಚಿನ ವರ್ಷಗಳಲ್ಲಿ ಈ ಕಾರ್ಯಕ್ರಮದಡಿ ಸೇರ್ಪಡೆಗೊಂಡಿರುವ ಗೇರುಸೊಪ್ಪ, ಹೆರಂಗಡಿ ಹಾಗೂ ಸರಲ್ಗಿಯಂತಹ ಗ್ರಾಮಗಳನ್ನು ಒಳಗೊಂಡಿರುವ ಶರಾವತಿ ಪ್ರಾಂತ್ಯಕ್ಕೂ ಈ ಅಭಿಯಾನ ತಲುಪಿದೆ.

ಈ ವಿತರಣಾ ಕಾರ್ಯಕ್ರಮಕ್ಕೆ ಸ್ಥಳೀಯ ಸ್ವಯಂಸೇವಕರು, ಯುವಕರ ಸಂಘಟನೆಗಳು ಹಾಗೂ ಧಾರ್ಮಿಕ ಸಂಘಟನೆಗಳು ನೆರವು ನೀಡಿದ್ದು, ಈ ಕಾರ್ಯಕ್ರಮವು ಅನಿವಾರ್ಯ ಅಗತ್ಯಗಳನ್ನು ಪೂರೈ ಸುವ ಹಾಗೂ ಸಾಮುದಾಯಿಕ ನೆರವನ್ನು ಪ್ರೋತ್ಸಾಹಿಸುವ ಗುರಿಯನ್ನು ಹೊಂದಿದೆ.

ಈ ವಿತರಣಾ ಕಾರ್ಯಕ್ರಮದ ಬೆನ್ನಿಗೇ, ಕಾಸ್ಮೋಸ್ ಸ್ಪೋರ್ಟ್ಸ್ ಸೆಂಟರ್ ಆಯೋಜಿಸಿದ್ದ ಪರಾಮರ್ಶೆ ಸಭೆಯು ಮೊಹ್ಕಾಮ ಶರಯ್ಯ ಸಭಾಂಗಣದಲ್ಲಿ ನಡೆಯಿತು. ಈ ಸಭೆಯಲ್ಲಿ ಕೊಲ್ಲಿ ಮೂಲದ ಭಟ್ಕಳ ಜಮಾತ್ ಗಳು, ಸ್ಥಳೀಯ ಸರಕಾರೇತರ ಸಂಸ್ಥೆಗಳ ಪ್ರತಿನಿಧಿಗಳು, ವಿದ್ವಾಂಸರು ಹಾಗೂ ಧಾರ್ಮಿಕ ಮತ್ತು ಶೈಕ್ಷಣಿಕ ಸಂಸ್ಥೆಗಳ ಸದಸ್ಯರು ಭಾಗವಹಿಸಿದ್ದರು.

ಚರ್ಚೆಯ ವೇಳೆ ಸರಕು ಸಾಗಣೆ ಸುಧಾರಣೆ, ವಿತರಣಾ ವ್ಯವಸ್ಥೆಯ ವಿಸ್ತರಣೆ ಹಾಗೂ ಭವಿಷ್ಯದ ಅಭಿಯಾನಗಳಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದರ ಕುರಿತು ಗಮನ ಹರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X