Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಅನಾಥ ಮಕ್ಕಳ ಶಿಕ್ಷಣಕ್ಕೆ ಬೆಂಬಲವಾಗಿ...

ಅನಾಥ ಮಕ್ಕಳ ಶಿಕ್ಷಣಕ್ಕೆ ಬೆಂಬಲವಾಗಿ ನಿಂತ ರಾಷ್ಟ್ರಕವಿಯ ಮೊಮ್ಮಗಳು ಅನನ್ಯ

ದೋಣಿಯಲ್ಲಿ ಏಕಾಂಗಿಯಾಗಿ ಅಟ್ಲಾಂಟಿಕ್ ಸಾಗರ ದಾಟಿ ಅಭಿಯಾನ

ನಾ.ಅಶ್ವಥ್ ಕುಮಾರ್ನಾ.ಅಶ್ವಥ್ ಕುಮಾರ್17 Feb 2025 12:53 PM IST
share
ಅನಾಥ ಮಕ್ಕಳ ಶಿಕ್ಷಣಕ್ಕೆ ಬೆಂಬಲವಾಗಿ ನಿಂತ ರಾಷ್ಟ್ರಕವಿಯ ಮೊಮ್ಮಗಳು ಅನನ್ಯ

ಚಾಮರಾಜನಗರ: ಅನಾಥ ಮಕ್ಕಳ ಭವಿಷ್ಯಕ್ಕಾಗಿ ರಾಷ್ಟ್ರ ಕವಿಯೊಬ್ಬರ ಮೊಮ್ಮಗಳು ಆಫ್ರಿಕಾದ ಕ್ಯಾನರೆ ದ್ವೀಪದಿಂದ ಅಟ್ಲಾಂಟಿಕ ಸಾಗರವನ್ನು ದೋಣಿಯಲ್ಲಿ ಏಕಾಂಗಿಯಾಗಿ ದಾಟಿ ಹುಬ್ಬೇರಿಸುವಂತೆ ಮಾಡಿದ್ದಾರೆ.

ರಾಷ್ಟ್ರಕವಿ ದಿ.ಡಾ.ಜಿ.ಎಸ್.ಶಿವರುದ್ರಪ್ಪರವರ ಪುತ್ರ ಶಿವಪ್ರಸಾದ್ ಮತ್ತು ಡಾ.ಪೂರ್ಣಿಮಾ ಪುತ್ರಿ ಅನನ್ಯ ಪ್ರಸಾದ್ ಬೆಂಗಳೂರಿನಲ್ಲಿ ಜನಿಸಿದ್ದು, ಪ್ರಸ್ತುತ ಇಂಗ್ಲೆಂಡ್ನಲ್ಲಿ ನೆಲೆಸಿದ್ದಾರೆ. ಅವರು ಆಫ್ರಿಕಾದ ಕ್ಯಾನರೆ ದ್ವೀಪದಿಂದ ದೋಣಿಯಲ್ಲಿ 2024ರ ಡಿ.11ರಂದು ಯಾನ ಆರಂಭಿಸಿ 2025ರ ಜ.31ಕ್ಕೆ ಪೂರ್ಣಗೊಳಿಸಿದ್ದಾರೆ. ಒಟ್ಟು 52 ದಿನಗಳ ಕಾಲ ಸುಮಾರು 4,800 ಕಿ.ಮೀ. ದೂರ ಸಮುದ್ರಯಾನ ನಡೆಸಿದ್ದಾರೆ. ಕಠಿಣವಾದ ಈ ಸಮುದ್ರಯಾನವನ್ನು ದೀನಬಂಧು ಶಾಲೆಗಾಗಿ ನಡೆಸಿರುವುದು ಗಮನಾರ್ಹವಾಗಿದೆ.

ಅನಾಥ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವ ಗಡಿಜಿಲ್ಲೆಯ ಸಂಸ್ಥೆಗೆ ಬೆಂಬಲ ನೀಡುವ ಸಲುವಾಗಿ ರಾಷ್ಟ್ರಕವಿಯ ಮೊಮ್ಮಗಳು ಏಕಾಂಗಿಯಾಗಿ ಅಟ್ಲಾಂಟಿಕ್ ಸಾಗರವನ್ನು ದಾಟಿ ಸಾಧನೆ ಮಾಡಿದ್ದಾರೆ.

ತಂದೆ-ತಾಯಿ ಇಲ್ಲದ, ಶಿಕ್ಷಣಕ್ಕೆ ಪೂರಕವಾದ ವಾತಾವರಣವಿಲ್ಲದ ಮಕ್ಕಳಿಗೆ ಶಿಕ್ಷಣ, ವಸತಿ ನೀಡುತ್ತಿರುವ ಚಾಮರಾಜನಗರದಲ್ಲಿರುವ ದೀನಬಂಧು ಮತ್ತು ಇಂಗ್ಲೆಂಡ್ನ ಮಾನಸಿಕ ಆರೋಗ್ಯ ಪ್ರತಿಷ್ಠಾನಕ್ಕೆ ಬೆಂಬಲ ನೀಡುವ ಸಲುವಾಗಿ ಅನನ್ಯ ಪ್ರಸಾದ್ ಏಕಾಂಗಿಯಾಗಿ ಅಟ್ಲಾಂಟಿಕ್ ಸಾಗರ ದಾಟಿದ್ದಾರೆ.

ಚಾಮರಾಜನಗರ-ರಾಮಸಮುದ್ರದಲ್ಲಿ ತನ್ನ ದೊಡ್ಡಪ್ಪ ಜಿ.ಎಸ್. ಜಯದೇವ್ರವರು 1999ರಲ್ಲಿ ದೀನಬಂಧು ಹೆಸರಿನಲ್ಲಿ ಸಂಸ್ಥೆ ಆರಂಭಿಸಿದ್ದು, ಎಲ್ಕೆಜಿಯಿಂದ ಎಸೆಸೆಲ್ಸಿವರೆಗೂ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುತ್ತಿದ್ದಾರೆ.

ಅನಾಥ ಮಕ್ಕಳಿಗೆ ಶಿಕ್ಷಣ ಮತ್ತು ವಸತಿ ಸೌಲಭ್ಯವನ್ನು ಒದಗಿಸಲಾಗುತ್ತಿದೆ. ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪರವರ ಮಗ ಜಿ.ಎಸ್.ಜಯದೇವ್ ದೀನಬಂಧು ಸೇವಾ ಟ್ರಸ್ಟ್ನ ಸ್ಥಾಪಿಸಿ ಮುನ್ನಡೆಸುತ್ತಿದ್ದಾರೆ. ಇವರ ತಮ್ಮನ ಮಗಳಾದ ಅನನ್ಯಪ್ರಸಾದ್ ಸಮುದ್ರಯಾನದ ಮೂಲಕ ದೀನಬಂಧು ಶಿಕ್ಷಣ ಸಂಸ್ಥೆಗೆ ಬೆಂಬಲ ನೀಡಿದ್ದಾರೆ.

ಮೋಜಿಗಾಗಿ ಸಾಹಸ ಮಾಡುವ ಯುವ ಪೀಳಿಗೆಯ ನಡುವೆ , ಅನಾಥ ಮಕ್ಕಳ ಶಿಕ್ಷಣದ ಭವಿಷ್ಯಕ್ಕೆ ಬೆಂಬಲಕ್ಕಾಗಿ ರಾಷ್ಟ್ರ ಕವಿ ದಿ.ಡಾ.ಜಿ.ಎಸ್.ಶಿವರುದ್ರಪ್ಪರವರ ಮೊಮ್ಮಗಳು ಭಯಾನಕ ಸಾಗರದಲ್ಲಿ ಏಕಾಂಗಿಯಾಗಿ ಸಾಗರಯಾನ ಮಾಡಿ ಜಗ್ಗತ್ತೇ ತನ್ನತ್ತ ನೋಡುವಂತೆ ಮಾಡಿದ್ದಾರೆ.

ನನ್ನ ತಮ್ಮನ ಮಗಳು ಅನನ್ಯ ಸಾಗರಯಾನ ಮಾಡಲು ನಿರ್ಧರಿಸಿದಾಗ ನಮಗೆ ತುಂಬಾ ಆತಂಕವಿತ್ತು. ಕಠಿಣ ಸವಾಲುಗಳಲ್ಲಿ ಹೋಗಬೇಡ ಎಂದು ನಾವು ಹೇಳಿದ್ದೆವು. ಆದರೂ ಅನನ್ಯ ತನ್ನ ಹಠ ಬಿಡಲಿಲ್ಲ. ಆಗ ಎಲ್ಲರೂ ಅನಿವಾರ್ಯವಾಗಿ ಎಲ್ಲರೂ ಬೆಂಬಲ ನೀಡಲೇಬೇಕಾಯಿತು. ಸುಮಾರು 52 ದಿನಗಳ ಏಕಾಂಗಿಯಾಗಿ ಸಮುದ್ರಯಾನದಲ್ಲಿ ಹಲವು ಸವಾಲುಗಳು ಎದುರಾದರೂ ಹೆದರಲಿಲ್ಲ. ಹೆಣ್ಣುಮಕ್ಕಳು ಇದನ್ನು ಸಾಧಿಸಿ ತೋರಿಸಬೇಕೆಂದು ತೊಟ್ಟ ಪಣವನ್ನು ಪೂರ್ಣಗೊಳಿಸಿದಳು.

- ಪ್ರೊ.ಜಿ.ಎಸ್.ಜಯದೇವ್, ಅನನ್ಯ ದೊಡ್ಡಪ್ಪ

share
ನಾ.ಅಶ್ವಥ್ ಕುಮಾರ್
ನಾ.ಅಶ್ವಥ್ ಕುಮಾರ್
Next Story
X