Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಆತಂಕದಲ್ಲೇ ಜೀವನ ನಡೆಸುತ್ತಿರುವ ಬುಟ್ಟಿ...

ಆತಂಕದಲ್ಲೇ ಜೀವನ ನಡೆಸುತ್ತಿರುವ ಬುಟ್ಟಿ ಮಾರಾಟಗಾರರು

ಸಾರ್ವಜನಿಕರಿಗೆ ತೊಂದರೆ ಆರೋಪ: ವ್ಯಾಪಾರ ಮಾಡದಂತೆ ಸಕಲೇಶಪುರ ಪುರಸಭೆಯಿಂದ ಎಚ್ಚರಿಕೆ

ಮಲ್ನಾಡ್ ಮೆಹಬೂಬ್ಮಲ್ನಾಡ್ ಮೆಹಬೂಬ್20 Dec 2023 12:57 PM IST
share
ಆತಂಕದಲ್ಲೇ ಜೀವನ ನಡೆಸುತ್ತಿರುವ ಬುಟ್ಟಿ ಮಾರಾಟಗಾರರು

ಸಕಲೇಶಪುರ, ಡಿ,19: ಸುಮಾರು 25 ವರ್ಷಗಳಿಂದ ಪಟ್ಟಣದ ಹೇಮಾವತಿ ಸೇತುವೆ ಬಳಿ ಬುಟ್ಟಿ ಸಾಮಾಗ್ರಿ ಮಾರಾಟ ಮಾಡಿ ಜೀವನ ನಡೆಸುತ್ತಿರುವ ಜನರು ಪುರಸಭೆಯ ನಿರಂತರ ಕಿರುಕುಳದಿಂದ ಬೇಸತ್ತು ಹೋಗಿದ್ದಾರೆ.

ರಸ್ತೆ ಬದಿಯಲ್ಲಿ ಬಿದಿರಿನಿಂದ ತಯಾರಿಸಿರುವ ಕುಕ್ಕೆ, ಬುಟ್ಟಿ, ಮರ, ಏಣಿ ಹಾಗೂ ಇತರ ಸಾಮಾಗ್ರಿ ಮಾರಾಟ ಮಾಡಿ ಜೀವನ ಸಾಗಿಸುವ ಕುಟುಂಬಗಳಿಗೆ ಸಕಲೇಶಪುರ ಪುರಸಭೆಯ ಅಧಿಕಾರಿಗಳು ನಗರದ ಸೌಂದರ್ಯಕ್ಕೆ ಧಕ್ಕೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಹಾಗೂ ಜಿಲ್ಲಾಧಿಕಾರಿಯ ಆದೇಶವಿದೆ ಎಂದು ಕಿರುಕುಳ ನೀಡಿ ವ್ಯಾಪಾರ ಮಾಡದಂತೆ ತಡೆಯುತ್ತಿದ್ದಾರೆ ಬುಟ್ಟಿ ಮಾರಾಟಗಾರರ ಆರೋಪವಾಗಿದೆ.

ಪಟ್ಟಣದ ಹೆದ್ದಾರಿಯಲ್ಲಿರುವ ಮೋರ್ ಸೂಪರ್ ಮಾರ್ಕೇಟ್ ಎದುರಿನ ರಸ್ತೆ ಬದಿಯಲ್ಲಿ ಬುಟ್ಟಿ ಮಾರಾಟಗಾರರು ಮಳೆ- ಬಿಸಿಲಿನ ರಕ್ಷಣೆಗಾಗಿ ಹಾಕಿಕೊಂಡಿರುವ ತಾತ್ಕಾಲಿಕ ಪ್ಲಾಸ್ಟಿಕ್ ಹೊದಿಕೆಗಳನ್ನು ಬಲವಂತದಿಂದ ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಪರಿಶಿಷ್ಟ ಪಂಗಡಕ್ಕೆ ಸೇರಿದ 16ಕುಟುಂಬಗಳು ನಗರದ ಹೇಮಾವತಿ ಸೇತುವೆಯಿಂದ ಸುಮಾರು 300 ಮೀಟರ್ ಹಾಗೂ ಹೆದ್ದಾರಿಯಿಂದ 50 ಮೀಟರ್ ದೂರದಲ್ಲಿ ಗುಡಿಸಲು ನಿರ್ಮಿಸಿಕೊಂಡು ಸುಮಾರು 25 ವರ್ಷಗಳಿಂದ ಬಿದಿರಿನಿಂದ ತಯಾರಿಸಿರುವ ವಸ್ತುಗಳನ್ನು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು.

ಈ ಸ್ಥಳದ ಹಿಂಭಾಗದಲ್ಲಿ ಕಲ್ಯಾಣ ಮಂಟಪ ಪ್ರಾರಂಭವಾದ ನಂತರ ಇದರ ಸೌಂದರ್ಯಕ್ಕೆ ಧಕ್ಕೆ ಬರುತ್ತದೆ ಎಂದು ಅಂದಿನ ಪುರಸಭೆ ಸಿಬ್ಬಂದಿ ಮತ್ತು ಕೆಲವು ಸದ್ಯಸರು ಲಂಚ ಪಡೆದು 16 ಕುಟುಂಬಗಳ ಗುಡಿಸಿಲುಗಳನ್ನು ಕಿತ್ತುಹಾಕಲಾಯಿತು. ಇದನ್ನು ಪ್ರಶ್ನಿಸಿದ ಹೋರಾಟಗಾರರ ಮೇಲೆ ಕೇಸು ದಾಖಲು ಮಾಡಲಾಯಿತು ಎಂದು ಬುಟ್ಟಿ ಮಾರಾಟಗಾರರ ಆರೋಪವಾಗಿದೆ.

ಬಳಿಕ ಹಲವು ಕುಟುಂಬಗಳು ಬೀದಿ ಪಾಲಾಗಿ ಈಗ 5 ಕುಟುಂಬಗಳು ಮಾತ್ರ ಇಲ್ಲಿಯೇ ಉಳಿದುಕೊಂಡು ರಸ್ತೆ ಬದಿಯಲ್ಲಿ ಬುಟ್ಟಿ ಬಿದಿರು ಸಾಮಾಗ್ರಿ ಮಾರಾಟ ಮಾಡುತ್ತಾ ಜೀವನ ಸಾಗಿಸುತ್ತಿದ್ದಾರೆ. ಇತ್ತೀಚೆಗೆ ಪುರಸಭೆಗೆ ಮುಖ್ಯ ಅಧಿಕಾರಿಯಾಗಿ ಬಂದಿರುವ ರಮೇಶ ಎಂಬವರು ಇಲ್ಲಿ ವ್ಯಾಪಾರ ಮಾಡದಂತೆ ಎಚ್ಚರಿಸಿದ್ದಾರೆ. ಇದರಿಂದಾಗಿ ಇಲ್ಲಿ ವ್ಯಾಪಾರ ಮಾಡಿ ಜೀವನ ನಡೆಸುವ ನಾವುಗಳು ಆತಂಕದಿಂದಲೇ ವ್ಯಾಪಾರ ನಡೆಸುವಂತಾಗಿದೆ ಎಂದು ಬುಟ್ಟಿ ಮಾರಾಟ ಮಾಡುವ ಸ್ವಾಮಿ, ನಾಗಮ್ಮ, ನೇತ್ರಾ ಸೇರಿದಂತೆ ಮತ್ತಿತರರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಬುಟ್ಟಿ ಮಾರಾಟ ಮಾಡುವ ರೇಣುಕ ಎಂಬವರ ಪರಿಸ್ಥಿತಿ: ಬುಟ್ಟಿ ವ್ಯಾಪಾರಿ ರೇಣುಕ ಎಂಬವರಿಗೆ ಪತ್ನಿ ಹಾಗೂ ಎರಡು ಮಕ್ಕಳಿವೆ. ಓರ್ವ ಮಗ ಪಿಯುಸಿ ಹಾಗೂ ಇನ್ನೋರ್ವ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಈತ ವಿಶೇಷಚೇತನ ಈತನಿಗೆ ಶ್ರವಣ ಹಾಗು ವಾಕ್ ತೊಂದರೆ ಇದೆ. ದೈಹಿಕವಾಗಿಯೂ ಅಷ್ಟು ಶಕ್ತನಾಗಿಲ್ಲ. ದುಡಿದು ತಿನ್ನುವ ಗಟ್ಟಿಮನಸ್ಸು ಈತನದು. ಈತ ತನ್ನ ನೋವನ್ನು ಈತನ ಮೂಖ ಭಾಷೆಯಲ್ಲಿ ಹೇಳಿಕೊಳ್ಳುತ್ತಾನೆ. ಇದು ತಾಯಿ ಮನಸ್ಸಿನ ಎಲ್ಲರಿಗೂ ಅರ್ಥವಾಗುತ್ತದೆ ಆದರೆ ಕಠಿಣ ಮನಸ್ಸಿನ ಪುರಸಭೆ ಅಧಿಕಾರಿಗಳಿಗೆ ಅರ್ಥವಾಗಿಲ್ಲ.

ಅನಾರೋಗ್ಯಪೀಡಿತ ಪತಿಯನ್ನು ಆರೈಕೆ ಮಾಡಬೇಕು ಹಾಗೂ ಎರಡು ಮಕ್ಕಳನ್ನು ಸಾಕುವ ಜವಾಬ್ದಾರಿಯಿದ್ದು, ಈ ದುಬಾರಿ ಯುಗದಲ್ಲಿ ಜೀವನ ಸಾಗಿಸುವುದು ಎಷ್ಟು ಕಷ್ಟ ಎಂದು ಅಧಿಕಾರಿಗಳಿಗೆ ತಿಳಿಯುತ್ತ್ತಿಲ್ಲ

-ಶೈಲಾ, ಬುಟ್ಟಿ ವ್ಯಾಪಾರಿ

ಬಿದಿರು ಬುಟ್ಟಿ ಮಾರುವವರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ವಾಹಾನದ ಬಾಗಿಲು ತೆರೆಯಲು ಅಡಚಣೆ ಯಾಗುತ್ತದೆ. ಇವರು ಅಡುಗೆ ಮಾಡಲು ಸ್ಟವ್ ಇತರ ವಸ್ತುಗಳನ್ನು ಬಳಸುತ್ತಾರೆ. ಇದು ಅಪಾಯಕಾರಿಯಾಗಿದೆ ಎಂದು ಸಾರ್ವಜನಿಕರ ದೂರು ನೀಡಿದ್ದು, ಜಿಲ್ಲಾಧಿಕಾರಿಯ ಮೌಕಿಕ ಆದೇಶವಿದೆ. ಅದುದ್ದರಿಂದ ಸದರಿ ಜಾಗದಲ್ಲಿ ವ್ಯಾಪಾರ ನಡೆಸದಂತೆ ಸೂಚಿಸಲಾಗಿದೆ.

-ರಮೇಶ್, ಮುಖ್ಯಾಧಿಕಾರಿ, ಪುರಸಭೆ ಸಕಲೇಶಪುರ

share
ಮಲ್ನಾಡ್ ಮೆಹಬೂಬ್
ಮಲ್ನಾಡ್ ಮೆಹಬೂಬ್
Next Story
X