Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಬೆಳ್ತಂಗಡಿ: ತಾಲೂಕಿನಾದ್ಯಂತ ಕಾಡಾನೆ...

ಬೆಳ್ತಂಗಡಿ: ತಾಲೂಕಿನಾದ್ಯಂತ ಕಾಡಾನೆ ಹಾವಳಿ

ಅರಣ್ಯದ ಅಂಚಿನ ಕೃಷಿಕರಲ್ಲಿ ಆತಂಕ

ವಾರ್ತಾಭಾರತಿವಾರ್ತಾಭಾರತಿ13 Nov 2023 1:17 PM IST
share
ಬೆಳ್ತಂಗಡಿ: ತಾಲೂಕಿನಾದ್ಯಂತ ಕಾಡಾನೆ ಹಾವಳಿ

ಬೆಳ್ತಂಗಡಿ, ನ.12: ತಾಲೂಕಿನಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರಿದಿದೆ. ಪ್ರತಿದಿನ ಒಂದಲ್ಲ ಒಂದು ಗ್ರಾಮದಲ್ಲಿ ಕಾಡಾನೆಗಳು ಕೃಷಿಗೆ ಹಾನಿಯುಂಟು ಮಾಡುತ್ತಿದ್ದು, ಅರಣ್ಯದ ಅಂಚಿನಲ್ಲಿ ವಾಸಿಸುತ್ತಿರುವ ಕೃಷಿಕರಲ್ಲಿ ಆತಂಕ ಹೆಚ್ಚಾಗಿದೆ.

ಬೆಳ್ತಂಗಡಿ ತಾಲೂಕಿನ ಮುಂಡಾಜೆ, ಕಲ್ಮಂಜ, ಕಡಿರುದ್ಯಾವರ, ಮಿತ್ತಬಾಗಿಲು, ಧರ್ಮಸ್ಥಳ ಮಲವಂತಿಗೆ, ಇಂದಬೆಟ್ಟು, ನಾವೂರು, ನೆರಿಯ, ಚಾರ್ಮಾಡಿ, ಶಿಶಿಲ, ಶಿಬಾಜೆ, ಹತ್ಯಡ್ಕ, ಪಟ್ರಮೆ, ಕೊಕ್ಕಡ, ನಿಡ್ಲೆ, ತೋಟತ್ತಾಡಿ, ಚಿಬಿದ್ರೆ ಮೊದಲಾದ ಗ್ರಾಮಗಳಲ್ಲಿ ಕಾಡಾನೆಗಳ ಹಲವು ಹಿಂಡುಗಳು ತಿರುಗಾಟ ನಡೆಸಿ ಕೃಷಿಗೆ ಹಾನಿಯುಂಟು ಮಾಡುತ್ತಿದೆ.

ಸ್ಥಳೀಯರಿಂದ ಲಭಿಸುವ ಮಾಹಿತಿಗಳಂತೆ ಮಿತ್ತಬಾಗಿಲು ಪರಿಸರದಲ್ಲಿ ಮರಿಯಾನೆ ಸಹಿತ ಐದು ಆನೆಗಳಿರುವ ಒಂದು ಹಿಂಡು ಓಡಾಟ ನಡೆಸಿ ಕೃಷಿಗೆ ಹಾನಿಯುಂಟು ಮಾಡುತ್ತಿದೆ. ಧರ್ಮಸ್ಥಳ ಮುಂಡಾಜೆ ಪರಿಸರದಲ್ಲಿ ಮರಿಯಾನೆ ಸಹಿತ ಮೂರು ಆನೆಗಳ ಹಿಂಡು ಓಡಾಟ ನಡೆಸುತ್ತಿದ್ದು, ಕೃಷಿ ಹಾನಿ ಉಂಟು ಮಾಡುತ್ತಿವೆ ಇದರ ಜತೆ ಎರಡರಿಂದ ಮೂರು ಒಂಟಿ ಸಲಗಗಳು ತಾಲೂಕಿನಲ್ಲಿ ನಿರಂತರವಾಗಿ ಓಡಾಟ ನಡೆಸುತ್ತಿವೆ.

ಒಂದು ವಾರದ ಅವಧಿಯಲ್ಲಿ ನೇರ್ತನೆ, ಕಲ್ಮಂಜ ಭಾಗಗಳಲ್ಲಿ ಕೃಷಿಹಾನಿ ಮಾಡಿದ ಕಾಡಾನೆಗಳ ಹಿಂಡು ಇದೀಗ ತೋಟತ್ತಾಡಿ ಪರಿಸರದಲ್ಲಿ ಬೀಡು ಬಿಟ್ಟಿದೆ. ಒಂದು ಮರಿಯಾನೆ ಸಹಿತ ಮೂರು ಕಾಡಾನೆಗಳಿರುವ ಈ ಹಿಂಡು ಅಲ್ಲಲ್ಲಿ ಕೃಷಿಹಾನಿ ಮಾಡುತ್ತಾ ಮುಂದುವರಿಯುತ್ತಿದೆ.

ಕಳೆದ ಎರಡು ದಿನಗಳಿಂದ ಒಂಟಿ ಸಲಗವೊಂದು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಾಣಿಸಿಕೊಂಡಿದೆ. ಅದು ಮನ ಬಂದಂತೆ ಜನವಸತಿ ಪ್ರದೇಶಗಳ ನಡುವೆ ಓಡಾಡುತ್ತಿದ್ದು, ಜನರ ಆತಂಕ ಹೆಚ್ಚಾಗಲು ಕಾರಣವಾಗಿದೆ.

ತಾಲೂಕಿನಲ್ಲಿ ಆನೆ ದಾಳಿ ಕಳೆದ ಕೆಲ ವರ್ಷಗಳಿಂದ ನಿರಂತರವಾಗಿದ್ದು ಈ ವರ್ಷವಂತೂ ತೀರಾ ಹೆಚ್ಚಾಗಿದೆ. ಅರಣ್ಯ ಇಲಾಖೆ ಕೈಗೊಳ್ಳುವ ಮುನ್ನೆಚ್ಚರಿಕೆಗಳು, ಕಾರ್ಯಾಚರಣೆಗಳು ಸೀಮಿತ ಅವಧಿಗೆ ಮಾತ್ರ ಪರಿಣಾಮ ಬೀರುತ್ತವೆ. ಬಳಿಕ ಸಮಸ್ಯೆ ಯಥಾಪ್ರಕಾರ ಮುಂದುವರಿಯುತ್ತಿದೆ. ನಾಗರಹೊಳೆಯ ಆನೆಕಾವಾಡಿಗರ ತಂಡ ತಾಲೂಕಿನ ಹಲವು ಕಡೆಗಳಲ್ಲಿ ಆನೆಗಳನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆಯನ್ನು ನಡೆಸಿದೆ. ಮೆಣಸಿನ ಹೊಗೆ ಮೂಲಕ ಆನೆ ಬಾರದಂತೆ ತಡೆಯುವ ಕ್ರಮದ ಕುರಿತು ಪ್ರಾತ್ಯಕ್ಷಿಕೆಗಳು ನಡೆದಿವೆ. ಇಲಾಖೆಯ ಸಿಬ್ಬಂದಿ ಸಾಕಷ್ಟು ಗಸ್ತು ಕಾರ್ಯಾಚರಣೆ ಸ್ಥಳೀಯರ ಸಹಕಾರದಲ್ಲಿ ಆನೆಗಳನ್ನು ಕಾಡಿಗಟ್ಟುವ ಪ್ರಯತ್ನ ನಡೆಸಿದ್ದಾರೆ.

ಇಲಾಖೆಯಲ್ಲಿನ ಸಿಬ್ಬಂದಿ ಕೊರತೆ, ಪಟಾಕಿ ಕೊರತೆ, ಅಗತ್ಯ ವಾಹನ, ಶಸ್ತ್ರಗಳ ಕೊರತೆಯಿಂದಾಗಿ ಆನೆಗಳನ್ನು ಕಾಡಿಗಟ್ಟುವ ಕೆಲಸ ಕಬ್ಬಿಣದ ಕಡಲೆಯಾಗಿದೆ.

ಹಿರಿಯ ಅಧಿಕಾರಿಗಳು, ಜನಪ್ರತಿನಿಧಿಗಳು ಆನೆ ಹಾವಳಿ ತಡೆಗೆ ಸೂಕ್ತ ಕ್ರಮ ಕೈಗೊಳ್ಳುವ ಅಗತ್ಯ ಇದೆ ಎಂದು ಆನೆ ಹಾವಳಿ ಪ್ರದೇಶದ ನಾಗರಿಕರು ಒತ್ತಾಯಿಸಿದ್ದಾರೆ.

ಪ್ರಯೋಜನಕ್ಕೆ ಬಾರದ ಆನೆ ಕಂದಕ

ತೋಟತ್ತಾಡಿ ಗ್ರಾಮದ ಬಾರೆ ಎಂಬಲ್ಲಿ ಇಲಾಖೆ ವತಿಯಿಂದ ಆನೆ ಕಂದಕ ಕಾಮಗಾರಿ ಪ್ರಗತಿಯಲ್ಲಿದೆ. ಆನೆ ಕಂದಕ ಸಮೀಪವೇ ಕಾಡಾನೆ ಕೃಷಿಗೆ ಹಾನಿ ಉಂಟುಮಾಡಿದೆ. ಆನೆ ಕಂದಕ ನಿರ್ಮಾಣಗೊಂಡಿರುವ ಸ್ಥಳದಲ್ಲಿ ನೀರು ಹರಿದು ಹೋಗಲು ಬಿಟ್ಟಿರುವ ತೋಡಿನ ಮೂಲಕ ಕಾಡಾನೆಗಳು ಪ್ರವೇಶಿಸಿ ಅಲ್ಲಿಂದಲೇ ವಾಪಸಾಗಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಆನೆ ಕಂದಕ ನಿರ್ಮಿಸಿದರೂ ಕಾಡಾನೆಗಳ ಹಾವಳಿಯನ್ನು ತಡೆಯಲು ಸಾಧ್ಯವಾಗದಿರುವುದರಿಂದ ಇನ್ನೇನು ಮಾಡಬೇಕು ಎಂಬ ಚಿಂತೆ ಕೃಷಿಕರಲ್ಲಿ ಮೂಡಿದೆ. ಕಂದಕಗಳ ನಡುವೆ ನೀರು ಹರಿಯಲು ಬಿಡುವ ತೋಡುಗಳ ಜಾಗದಲ್ಲಿ ತಡೆಗೋಡೆಯನ್ನು ನಿರ್ಮಿಸಬೇಕು. ಅಗತ್ಯ ಕಡೆಗಳಲ್ಲಿ ತಡೆಗೋಡೆ ನಿರ್ಮಿಸಿದರೆ ಮಾತ್ರ ಕಂದಕಗಳು ಪರಿಣಾಮ ಬೀರಲು ಸಾಧ್ಯ. ಆದರೆ ಅದಕ್ಕೆ ಸೂಕ್ತ ಅನುದಾನವಿಲ್ಲ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡುತ್ತಿದ್ದಾರೆ.

ತೋಟತ್ತಾಡಿಯಲ್ಲಿ ವ್ಯಾಪಕ ಹಾನಿ

ಶನಿವಾರ ತಡರಾತ್ರಿ ತೋಟತ್ತಾಡಿ ಗ್ರಾಮದ ಬಾರೆ ಎಂಬಲ್ಲಿ ಮೋಹನ ಗೌಡ ಹಾಗೂ ಉಮೇಶಗೌಡ ಎಂಬವರ ತೋಟಗಳಿಗೆ ನುಗ್ಗಿದ ಕಾಡಾನೆಗಳು ೩೦ ತೆಂಗಿನ ಮರ, ಅಡಿಕೆ ಗಿಡಗಳನ್ನು ಧ್ವಂಸಗೈದಿವೆ.

ಇಲ್ಲಿನ ತೋಟಗಳಲ್ಲಿ ಕಾಡಾನೆ ಹಾವಳಿ ತಪ್ಪಿಸುವ ನಿಟ್ಟಿನಲ್ಲಿ ಬಾಳೆ ಗಿಡಗಳನ್ನು ಕಡಿದು ಹಾಕಲಾಗಿದೆ. ಕಡಿದು ಹಾಕಿರುವ ಬಾಳೆಗಳಲ್ಲಿ ಮೂಡಿರುವ ಚಿಗುರುಗಳನ್ನು ಆನೆಗಳು ತಿಂದು ಹಾಕಿವೆ. ಕಾಡಾನೆ ಬಾರದಂತೆ ನಿರ್ಮಿಸಿರುವ ಆನೆ ಕಂದಕದ ಕಾಮಗಾರಿ ನಡೆಯುತ್ತಿರುವಾಗಲೇ ಆನೆಗಳು ತೋಟಗಳಿಗೆ ನುಗ್ಗಿ ಕೃಷಿಗೆ ಹಾನಿಯುಂಟುಮಾಡಿದೆ. ಮಾಹಿತಿ ತಿಳಿದು ಬೆಳ್ತಂಗಡಿ ಅರಣ್ಯ ಇಲಾಖೆಯ ಆರ್‌ಎಫ್‌ಒ ಮೋಹನ್ ಕುಮಾರ್ ಬಿ.ಜಿ. ಅವರ ನಿರ್ದೇಶನದಂತೆ ಡಿಆರ್‌ಎಫ್‌ಒ ಭವಾನಿ ಶಂಕರ್, ಬೀಟ್ ಫಾರೆಸ್ಟ್ ಪಾಂಡುರಂಗ ಕಮತಿ, ಸಹಾಯಕರಾದ ಕಿಟ್ಟು, ವಿನಯ ಚಂದ್ರ, ಗೋಪಾಲ ಪೂಜಾರಿ ಹಾಗೂ ಸ್ಥಳೀಯರು ಪರಿಸರದ ಸುಮಾರು ಮೂರು ಕಿ.ಮೀ. ವ್ಯಾಪ್ತಿಯಲ್ಲಿ ಪರಿಶೀಲನೆ ನಡೆಸಿದ್ದು, ಕಾಡಾನೆಗಳು ಕಾಡಿನ ಒಳಭಾಗದತ್ತ ಹೋಗಿರುವ ಕುರುಹುಗಳು ಕಂಡುಬಂದಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X