Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಗರ್ಭಿಣಿಯರ ಆರೋಗ್ಯದ ಗ್ಯಾರಂಟಿ ಡಾ....

ಗರ್ಭಿಣಿಯರ ಆರೋಗ್ಯದ ಗ್ಯಾರಂಟಿ ಡಾ. ನಿಸಾರ್ ಫಾತಿಮಾ

24 ವರ್ಷಗಳ ಸೇವೆಯಲ್ಲಿ 10 ಸಾವಿರಕ್ಕೂ ಹೆಚ್ಚು ಸಹಜ ಹೆರಿಗೆ

ಮಲ್ನಾಡ್ ಮೆಹಬೂಬ್ಮಲ್ನಾಡ್ ಮೆಹಬೂಬ್8 March 2025 11:28 AM IST
share
ಗರ್ಭಿಣಿಯರ ಆರೋಗ್ಯದ ಗ್ಯಾರಂಟಿ ಡಾ. ನಿಸಾರ್ ಫಾತಿಮಾ
ನಾನು ಮಹಿಳೆಯರ ಆರೋಗ್ಯ ಸೇವೆಗೆ ಸಂಪೂರ್ಣ ಸಮರ್ಪಿಸಿಕೊಂಡಿದ್ದೇನೆ. ಗ್ರಾಮೀಣ ಪ್ರದೇಶಗಳಲ್ಲಿ ಉತ್ತಮ ವೈದ್ಯಕೀಯ ಸೇವೆ ನೀಡಬೇಕು ಎಂಬುದೇ ನನ್ನ ಕನಸು. -ಡಾ. ನಿಸಾರ್ ಫಾತಿಮಾ

ಹಾಸನ ಜಿಲ್ಲೆಯ ಆಲೂರು ತಾಲೂಕಿನ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಡಾ. ನಿಸಾರ್ ಫಾತಿಮಾ ತಮ್ಮ ಅನನ್ಯ ಸೇವಾ ಮನೋಭಾವದಿಂದ ಜನಮನ ಗೆದ್ದಿದ್ದಾರೆ. 24 ವರ್ಷಗಳ ಸೇವೆಯಲ್ಲಿ 10 ಸಾವಿರಕ್ಕೂ ಹೆಚ್ಚು ಸಹಜ ಹೆರಿಗೆ ಮಾಡಿದ್ದಾರೆ.

ಎಂಬಿಬಿಎಸ್ ಮುಗಿಸಿದ ನಂತರ ಬೆಂಗಳೂರಿನ ಫಿಲೊಮಿನಾ ಆಸ್ಪತ್ರೆಯಲ್ಲಿ ಸೇವೆ ಪ್ರಾರಂಭಿಸಿ ಒಂದು ವರ್ಷ ಕೆಲಸ ಮಾಡಿದರು. 23 ವರ್ಷಗಳ ಕಾಲ ಆಲೂರು ತಾಲೂಕಿನ ಪಾಳ್ಯ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ಮೂಲದ ಡಾ.ಫಾತಿಮಾ, ಕಿರಿಯ ವೈದ್ಯೆಯಾಗಿ ಬಂದಾಗ ಆರೋಗ್ಯ ಕೇಂದ್ರದಲ್ಲಿ ಸರಿಯಾದ ನಾಮಫಲಕವೂ ಇರಲಿಲ್ಲ.

ನಿರಂತರವಾಗಿ ತಮ್ಮ ವೈದ್ಯಕೀಯ ಸೇವೆಯನ್ನು ಗ್ರಾಮೀಣ ಪ್ರದೇಶದ ಜನತೆಗೆ ಅರ್ಪಿಸುತ್ತಾ, ಸಾವಿರಾರು ಗರ್ಭಿಣಿಯರ ಸೇವೆ ಮಾಡುತ್ತಾ ‘ಮಾತೃ ಸೇವಾ ದಿವ್ಯ ತೇಜಸ್’ ಎಂದು ಗುರುತಿಸಿಕೊಂಡಿದ್ದಾರೆ.

ರಜೆ ಇಲ್ಲದ ಸೇವೆ

ವೈದ್ಯಕೀಯ ವೃತ್ತಿಯನ್ನು ಅವರು ಕೇವಲ ಉದ್ಯೋಗವನ್ನಾಗಿ ನೋಡುವುದಿಲ್ಲ. ಡಾ. ನಿಸಾರ್ ಫಾತಿಮಾ ಎಂದರೆ ಎಲ್ಲ ಗರ್ಭಿಣಿಯರ ಆರೋಗ್ಯದ ಭರವಸೆ. ಸರಕಾರಿ ರಜೆಗಳಲ್ಲೂ ಆಸ್ಪತ್ರೆಗೆ ಹಾಜರಾಗುವ ಅವರು, ಹಗಲು-ಇರುಳೆನ್ನದೆ ಸೇವೆಯಲ್ಲಿರುತ್ತಾರೆ.

ಹತ್ತು ಸಾವಿರ ಸಹಜ ಹೆರಿಗೆ ಸಾಧನೆ

ಇತ್ತೀಚೆಗೆ ಆಪರೇಷನ್ ಮೂಲಕ ಹೆರಿಗೆಗಳು ಹೆಚ್ಚಾಗಿವೆ ಎಂದು ಹೇಳಲಾಗುತ್ತದೆ. ಆದರೆ ಡಾ.ಫಾತಿಮಾ ಅವರಿಂದ 10 ಸಾವಿರಕ್ಕೂ ಹೆಚ್ಚು ಹೆರಿಗೆಗಳು ಸಹಜವಾಗಿ ನಡೆದಿವೆ. ಇದು ಅವರ ವೈದ್ಯಕೀಯ ಕೌಶಲ್ಯ ಹಾಗೂ ಶ್ರದ್ಧೆಯ ಪ್ರತೀಕವಾಗಿದೆ.

ಇವರ ವೈದ್ಯಕೀಯ ಸೇವೆಯ ಗುಣಮಟ್ಟ ಎಷ್ಟರ ಮಟ್ಟಿಗೆ ಖ್ಯಾತಿ ಪಡೆದಿದೆ ಎಂದರೆ, ಹಾಸನ ಜಿಲ್ಲೆ ಮಾತ್ರವಲ್ಲ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಂದಲೂ ಗರ್ಭಿಣಿಯರು ಇವರ ಬಳಿ ಚಿಕಿತ್ಸೆ ಪಡೆಯಲು ಬರುತ್ತಾರೆ. ಅನೇಕ ಮಹಿಳೆಯರು ಹಾಸನ ತಾಲೂಕಿನಲ್ಲಿರುವ ದೊಡ್ಡ ಆಸ್ಪತ್ರೆಗಳಿಗೆ ಹೋಗುವ ಬದಲು ಇವರ ಚಿಕ್ಕ ಆಸ್ಪತ್ರೆ ಮೇಲೆ ವಿಶ್ವಾಸ ಇಡುತ್ತಾರೆ.

ಬಂಜೆತನಕ್ಕೆ ಚಿಕಿತ್ಸೆ

ಕೇವಲ ಹೆರಿಗೆ ಮಾತ್ರವಲ್ಲ, ಬಂಜೆತನ (Infertility) ಚಿಕಿತ್ಸೆಗಾಗಿ ಡಾ. ಫಾತಿಮಾ ಬಳಿ ಬರುತ್ತಾರೆ. ಶೇ.95ರಷ್ಟು ಜನರು ಯಶಸ್ವಿಯಾಗಿ ಸಂತಾನ ಭಾಗ್ಯವನ್ನು ಪಡೆದಿದ್ದಾರೆ ಎಂಬುದು ಅವರ ಚಿಕಿತ್ಸಾ ನೈಪುಣ್ಯಕ್ಕೆ ಸಾಕ್ಷಿಯಾಗಿದೆ

ಇವರ ಪತಿ ಮೈಸೂರು ಮೂಲದ ಸೈಯದ್ ಮುದಸ್ಸಿರ್ ಕೂಡ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತುರ್ತು ಸಂದರ್ಭದಲ್ಲಿ ಪತಿಯೇ ವಾಹನ ಚಾಲಕರಾಗಿ ಪತ್ನಿಗೆ ಸಹಾಯ ಮಾಡುತ್ತಾರೆ.

ಅವರ ಸೇವಾವಧಿಯಲ್ಲಿ ಪಾಳ್ಯ ಆಸ್ಪತ್ರೆಗೆ ಎನ್‌ಕ್ಯೂಎ (National Quality Assurance (NQA) ರಾಷ್ಟ್ರೀಯ ಪ್ರಶಸ್ತಿ ಲಬಿಸಿದೆ. ಅವರು ನೂರಾರು ಪ್ರಮುಖ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಡಾ.ನಿಸಾರ್ ಫಾತಿಮಾ ಅವರಂತಹ ವೈದ್ಯರಿಂದ ಎಷ್ಟೋ ಬಡ ಕುಟುಂಬಗಳ ಮಹಿಳೆಯರು ಆರೋಗ್ಯಪೂರ್ಣ ತಾಯ್ತನ ಪಡೆಯುತ್ತಿದ್ದಾರೆ. ಅವರು ಕೇವಲ ವೈದ್ಯೆಯಾಗಿರದೆ, ಭರವಸೆಯ ಹೆಸರಾಗಿದ್ದಾರೆ.

ಎಂಬಿಬಿಎಸ್ ಮಾಡಿರುವ ಇವರು ಉನ್ನತ ವ್ಯಾಸಂಗ ಮಾಡಬೇಕು ಎಂಬ ಆಸೆ ಇದ್ದರೂ ಗ್ರಾಮೀಣ ಸೇವೆಯಲ್ಲಿ ತಮ್ಮನ್ನು ಹೆಚ್ಚು ತೊಡಗಿಸಿಕೊಂಡ ಹಿನ್ನೆಲೆಯಲ್ಲಿ ಹೈಯರ್ ಎಜುಕೇಶನ್ ಮಾಡಲು ಸಾಧ್ಯವಾಗಲಿಲ್ಲ ಎಂದು ಹೇಳಿಕೊಳ್ಳುತ್ತಾರೆ.

share
ಮಲ್ನಾಡ್ ಮೆಹಬೂಬ್
ಮಲ್ನಾಡ್ ಮೆಹಬೂಬ್
Next Story
X