Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಬಡಜನರ ಹಸಿವು ನೀಗಿಸುತ್ತಿರುವ ‘ಮಮತೆಯ...

ಬಡಜನರ ಹಸಿವು ನೀಗಿಸುತ್ತಿರುವ ‘ಮಮತೆಯ ಮಡಿಲು’

ಕುಂಟನಹಳ್ಳಿ ಮಲ್ಲೇಶಕುಂಟನಹಳ್ಳಿ ಮಲ್ಲೇಶ11 Dec 2023 1:05 PM IST
share
ಬಡಜನರ ಹಸಿವು ನೀಗಿಸುತ್ತಿರುವ ‘ಮಮತೆಯ ಮಡಿಲು’

ಮಂಡ್ಯ: ಪರಿಸರ ಗ್ರಾಮೀಣಾಭಿವೃದ್ಧಿ ಸಂಸ್ಥೆ ಕಟ್ಟಿಕೊಂಡು ಹತ್ತಾರು ಕಾರ್ಯಕ್ರಮಗಳ ಮೂಲಕ ಜನರಲ್ಲಿ ಪರಿಸರ ಪ್ರಜ್ಞೆ ಮೂಡಿಸುತ್ತಿರುವ ಮಂಡ್ಯ ಜಿಲ್ಲೆಯ ಮಂಗಲ ಎಂ.ಯೋಗೇಶ್ ಅವರು ಮಂಡ್ಯ ಜಿಲ್ಲಾಸ್ಪತ್ರೆ(ಮಿಮ್ಸ್) ಆವರಣದಲ್ಲಿ ಆರಂಭಿಸಿದ ‘ಮಮತೆಯ ಮಡಿಲು’ ಯೋಜನೆ ಯಶಸ್ವಿ ೫ನೇ ವರ್ಷದಲ್ಲಿ ಸಾಗುತ್ತಿದೆ.

ವಿದ್ಯಾರ್ಥಿ ದಿಸೆಯಲ್ಲೇ ಪ್ರಗತಿಪರ, ಸಾಮಾಜಿಕ ಹೋರಾಟ, ಕಾರ್ಯ ಕ್ರಮಗಳಲ್ಲಿ ತೊಡಗಿಕೊಂಡ ಯೋಗೇಶ್, ಪದವಿ ಪಡೆದಿದ್ದರೂ ಸರಕಾರಿ ಉದ್ಯೋಗದ ಕನಸು ಕಾಣಲಿಲ್ಲ. ಕೃಷಿಯಲ್ಲಿ ತೊಡಗಿಕೊಂಡರು.

ತನ್ನ ಪೋಷಕರು ನಡೆಸಿಕೊಂಡು ಬಂದ ಕೃಷಿಯನ್ನೇ ಅಪ್ಪಿಕೊಂಡ ಯೋಗೇಶ್, ತಾನು ವಿದ್ಯಾರ್ಥಿಯಾಗಿದ್ದಾಗ ತೊಡಗಿಸಿಕೊಂಡಿದ್ದ ಸಾಮಾಜಿಕ ಕಾರ್ಯಗಳನ್ನು ಮರೆಯಲಿಲ್ಲ. ಅದಕ್ಕಾಗಿ ‘ಪರಿಸರ ರೂರಲ್ ಡೆವಲಪ್ಮೆಂಟ್’ ಸಂಸ್ಥೆ ಕಟ್ಟಿಕೊಂಡು ಪರಿಸರ ಕಾರ್ಯಕ್ರಮಗಳನ್ನು ನಡೆಸಿದರು.

ಒಮ್ಮೆ ತನ್ನ ತಾಯಿಯನ್ನು ಸರಕಾರಿ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ಸೇರಿಸಿದ್ದಾಗ, ಆಸ್ಪತ್ರೆಯಲ್ಲಿ ದಾಖಲಾಗಿದ್ದ ರೋಗಿಗಳು ಮತ್ತವರ ಪೋಷಕರು ಊಟಕ್ಕೆ ಪರಿತಪಿಸುತ್ತಿದ್ದುದು ಮೃದು ಹೃದಯದ ಯೋಗೇಶ್ ಅವರನ್ನು ಕದಡಿತು. ಈ ಹಿನ್ನೆಲೆಯಲ್ಲಿ ತನ್ನ ಸ್ವಯಂಸೇವಾ ಸಂಸ್ಥೆ ಅಡಿಯಲ್ಲಿ ಅಸ್ತಿತ್ವಕ್ಕೆ ತಂದದ್ದೇ ‘ಮಮತೆಯ ಮಡಿಲು’.

ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಯಾವುದೇ ಖಾಸಗಿ ಆಸ್ಪತ್ರೆಗೂ ಮಿಗಿಲಾದ ವಿಭಾಗವೆಂದರೆ ಹೆರಿಗೆ ವಿಭಾಗ. ಸುಸಜ್ಜಿತ ಉಪಕರಣ, ತಜ್ಞ ಮತ್ತು ಸೇವಾಪರತೆಯ ವೈದ್ಯರು ಈ ವಿಭಾಗದ ಘನತೆಗೆ ಸಾಕ್ಷಿಯಾಗಿದ್ದಾರೆ. ಹಾಗಾಗಿ ಜಿಲ್ಲೆ ಮಾತ್ರವಲ್ಲದೆ ಪಕ್ಕದ ರಾಮನಗರ, ಮೈಸೂರು, ತುಮಕೂರು ಜಿಲ್ಲೆಗಳಿಂದಲೂ ಹೆರಿಗೆಗೆ ಇಲ್ಲಿ ದಾಖಲಾಗುತ್ತಾರೆ.

ಈ ವಿಭಾಗದಲ್ಲಿ ಹೆರಿಗೆಯಾದವರು ಮೂರು ನಾಲ್ಕುದಿನ, ವಾರಗಟ್ಟಲೇ ಇರಬೇಕು. ಅವರ ಜತೆಯಲ್ಲಿ ಪೋಷಕರೂ ಇರಬೇಕು. ಇಲ್ಲಿಗೆ ಬರುವವರು ಬಡವರು. ಇಂತಹವರು ವಾರಗಳ ಕಾಲ ಹೊಟೇಲ್ಗಳಲ್ಲಿ ಊಟ ತಿನ್ನುವುದು ದುಬಾರಿ. ಇಂತಹವರಿಗೆ ಅನುಕೂಲ ಕಲ್ಪಿಸಲು ಯೋಗೇಶ್ ‘ಮಮತೆಯ ಮಡಿಲು’ ಬ್ಯಾನರ್ ಅಡಿಯಲ್ಲಿ ಈ ವಾರ್ಡ್ ಮುಂಭಾಗ ಉಪಹಾರ, ಊಟ ಕೊಡುವ ವ್ಯವಸ್ಥೆ ಮಾಡಿದರು.

ಆರಂಭದಲ್ಲಿ ಬೆಳಗಿನ ವೇಳೆ ಮಾತ್ರ ತನ್ನ ಸ್ವಂತ ವೆಚ್ಚದಲ್ಲಿ ತಿಂಡಿ, ಗಂಜಿ ನೀಡಿದರು. ನಂತರ, ಹಲವರು ಇದಕ್ಕೆ ಕೈಜೋಡಿಸಿದರು. ಕ್ರಮೇಣ ಸಾರ್ವಜನಿಕರು ಇದಕ್ಕೆ ಕೈಜೋಡಿಸಿದರು. ತಮ್ಮ ಕೈಲಾದ ಸಹಾಯ ಮಾಡಿದರು. ಈಗ ಬೆಳಗ್ಗೆ, ಮಧ್ಯಾಹ್ನ, ಸಂಜೆ ಮೂರು ಹೊತ್ತು ಪ್ರತಿದಿನ ಸುಮಾರು ೬೦೦ ಮಂದಿಗೆ ಶುಚಿಯಾದ, ಪೌಷ್ಠಿಕಯುಕ್ತ ಆಹಾರವನ್ನು ಯೋಗೇಶ್ ಒದಗಿಸುತ್ತಿದ್ದಾರೆ.

ಪ್ರಚಾರದ ಮೊರೆ ಹೋಗದೆ ಯೋಗೇಶ್ ತನ್ನ ಕಾಯಕ ಮಾಡುತ್ತಿದ್ದಾರೆ. ಇವರ ಸೇವೆಯನ್ನು ಸಂಸದೆ ಸುಮಲತಾ ಅಂಬರೀಷ್ ಸೇರಿದಂತೆ ಶಾಸಕರು, ಜನಪ್ರತಿನಿಧಿಗಳೂ ಶ್ಲಾಘಿಸಿ ಬೆನ್ನುತಟ್ಟಿದ್ದಾರೆ. ಯೋಗೇಶ್ ಅವರ ಈ ಕಾಯಕಕ್ಕೆ ಮತ್ತಷ್ಟು ಕೈಗಳು ಜೋಡಿಸಬೇಕಾಗಿದೆ.

share
ಕುಂಟನಹಳ್ಳಿ ಮಲ್ಲೇಶ
ಕುಂಟನಹಳ್ಳಿ ಮಲ್ಲೇಶ
Next Story
X