Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಮಂಡ್ಯ ತಾಲೂಕು ವ್ಯಾಪ್ತಿಯ ವಿದ್ಯಾರ್ಥಿ...

ಮಂಡ್ಯ ತಾಲೂಕು ವ್ಯಾಪ್ತಿಯ ವಿದ್ಯಾರ್ಥಿ ನಿಲಯಗಳ ನಿರ್ವಹಣೆಯಲ್ಲಿ ಭಾರೀ ಅವ್ಯವಹಾರ : ವರದಿ

ಟಿವಿ, ಬೆಡ್ ಕವರ್ಸ್, ಸೊಳ್ಳೆ ಪರದೆ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೆ ದುಪ್ಪಟ್ಟು ವೆಚ್ಚ!

ಜಿ.ಮಹಾಂತೇಶ್ಜಿ.ಮಹಾಂತೇಶ್25 March 2025 2:14 PM IST
share
ಮಂಡ್ಯ ತಾಲೂಕು ವ್ಯಾಪ್ತಿಯ ವಿದ್ಯಾರ್ಥಿ ನಿಲಯಗಳ ನಿರ್ವಹಣೆಯಲ್ಲಿ ಭಾರೀ ಅವ್ಯವಹಾರ : ವರದಿ

ಬೆಂಗಳೂರು : ಮಂಡ್ಯ ತಾಲೂಕು ವ್ಯಾಪ್ತಿಯಲ್ಲಿರುವ ವಿದ್ಯಾರ್ಥಿ ನಿಲಯಗಳ ನಿರ್ವಹಣೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ. ಟಿವಿ, ಬೆಡ್ ಕವರ್, ಸೊಳ್ಳೆ ಪರದೆ ಸೇರಿದಂತೆ ಇನ್ನಿತರೆ ವಸ್ತುಗಳ ಖರೀದಿ ಹೆಸರಿನಲ್ಲಿ ಭಾರೀ ಪ್ರಮಾಣದಲ್ಲಿ ಹಣ ದುರುಪಯೋಗವಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಿಗೆ ವರದಿ ಸಲ್ಲಿಸಿರುವ ಬಗ್ಗೆ 'ದಿ ಫೈಲ್' ವರದಿ ಮಾಡಿದೆ.

ಅವ್ಯವಹಾರದ ಬಗ್ಗೆ ಡಾ ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಉಪ ವ್ಯವಸ್ಥಾಪಕಿ ಪ್ರತಿಭ ಎಸ್. ನೇತೃತ್ವದ ತಂಡವು ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಿಗೆ 2024ರ ಆಗಸ್ಟ್ 19ರಂದು ವರದಿ ಸಲ್ಲಿಸಿದೆ ಎಂದು ಹೇಳಲಾಗಿದೆ.

2020-21ನೇ ಸಾಲಿನಿಂದ 2023-24ನೇ ಸಾಲಿನವರೆಗೆ ಸರಕಾರವು ಮಂಡ್ಯ ತಾಲೂಕಿನ ವಿವಿಧ ವಿದ್ಯಾರ್ಥಿ ನಿಲಯಗಳಿಗೆ ಅನುದಾನ ಬಿಡುಗಡೆ ಮಾಡಿತ್ತು. ಈ ಅನುದಾನವನ್ನು ಮಿತವಾಗಿ ವೆಚ್ಚ ಮಾಡಿಲ್ಲ. ಬೇಡಿಕೆ ಇಲ್ಲದಿದ್ದರೂ ಅನಗತ್ಯವಾಗಿ ವಸ್ತುಗಳನ್ನು ಖರೀದಿ ಮಾಡಲಾಗಿದೆ. ಅಲ್ಲದೆ ಮಾರುಕಟ್ಟೆ ದರಕ್ಕಿಂತಲೂ ದುಪ್ಪಟ್ಟು ಬೆಲೆಯಲ್ಲಿ ಟಿವಿ, ಬೆಡ್ ಕವರ್ ಸೇರಿದಂತೆ ವಸ್ತುಗಳನ್ನು ಖರೀದಿಸಿರುವುದನ್ನು ತನಿಖಾ ತಂಡವು ಬಯಲು ಮಾಡಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಟಿವಿ ಖರೀದಿ, ಬೆಡ್ ಕವರ್ಸ್ ಖರೀದಿ, ಗ್ಯಾಸ್ ಸ್ಟೌವ್ ರಿಪೇರಿ, ಕಂಪ್ಯೂಟರ್ ರಿಪೇರಿ, ಬಾಗಿಲು ರಿಪೇರಿ, ಗ್ರೈಂಡರ್ ಮೋಟಾರ್ ರಿಪೇರಿ, ಫ್ಯಾನ್ ರೆಗ್ಯುಲೇಟರ್, ವಾಟರ್ ಫ್ಯೂರಿಫೈಯರ್, ಸೊಳ್ಳೆ ಪರದೆ, ಸೇರಿದಂತೆ ಇನ್ನಿತರೆ ವಸ್ತುಗಳ ಖರೀದಿಯಲ್ಲಿ ಅಕ್ರಮಗಳು ನಡೆದಿದೆ ಮಾತ್ರವಲ್ಲದೆ ಕೆಲವೊಂದು ವಸ್ತುಗಳ ರಿಪೇರಿಗೆ ಪದೇ ಪದೇ ವೆಚ್ಚ ಭರಿಸಿರುವುದು ಕಂಡು ಬಂದಿದೆ.

2021-22ನೇ ಸಾಲಿನಲ್ಲಿ ಕಿಯೋನಿಕ್ಸ್ ಸಂಸ್ಥೆಯಿಂದ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ದರದಲ್ಲಿ ಟಿ ವಿ ಖರೀದಿಸಲಾಗಿದೆ ಎಂದು ಹೇಳಲಾಗಿದೆ. ಕೊತ್ತತ್ತಿ, ಮಂಗಲ, ಕೆರೆಗೋಡು, ಮಂಡ್ಯ ಟೌನ್, ಶಿವಪುರ, ಬಸರಾಳುವಿನಲ್ಲಿರುವ 8 ವಿದ್ಯಾರ್ಥಿ ನಿಲಯಗಳಿಗೆ ತಲಾ 93,440ರೂ. ದರದಲ್ಲಿ ಒಟ್ಟು 7,47,520 ರೂ ವೆಚ್ಚದಲ್ಲಿ ಟಿವಿ ಖರೀದಿಸಲಾಗಿತ್ತು. ಆದರೆ ಇದೇ ಟಿವಿಗೆ ಆನ್ ಲೈನ್ನಲ್ಲಿ ತಲಾ 47,990 ರೂ. ಬೆಲೆಯಿದೆ. ಇದರ ಪ್ರಕಾರ, 8 ಟಿವಿಗಳಿಗೆ 3,83,920 ರೂ. ವೆಚ್ಚವಾಗಲಿದೆ. ಆದರೆ ಇಲಾಖೆಯು 3,63,600ರೂ. ಹೆಚ್ಚುವರಿ ವೆಚ್ಚ ಮಾಡಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕೊತ್ತತ್ತಿ ಸೇರಿದಂತೆ 14 ಸರಕಾರಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳಿಗೆ 2021-22ನೇ ಸಾಲಿನಲ್ಲಿ 2,76,236ರೂ. ದರದಲ್ಲಿ ಬೆಡ್ ಕವರ್ಸ್‌ಗಳನ್ನು ಸಿರಾ ಎಂಟರ್ ಪ್ರೈಸೆಸ್, ಎಸ್‌ಬಿಎಂಜೆಪಿ ಎಂಟರ್ ಪ್ರೈಸೆಸ್ನಿಂದ ಖರೀದಿಸಿತ್ತು. ಬೆಡ್ ಕವರ್ಸ್‌ಗಳಿಗೆ ವಿದ್ಯಾರ್ಥಿ ನಿಲಯಗಳ ವಾರ್ಡನ್‌ಗಳು ಯಾವುದೇ ಬೇಡಿಕೆ ಸಲ್ಲಿಸಿರಲಿಲ್ಲ. ಆದರೂ ನಿಯಮಬಾಹಿರವಾಗಿ ಎರಡೆರಡು ಬಾರಿ ಡಿಸಿ ಬಿಲ್ ಮುಖಾಂತರ ಬೆಡ್ ಕವರ್ಸ್‌ಗಳನ್ನು ಬೇರೆ ಬೇರೆ ಸಂಸ್ಥೆಗಳಿಂದ ಹೆಚ್ಚಿನ ಮೊತ್ತ ಪಾವತಿಸಿ ಖರೀದಿಸಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ವಿದ್ಯಾರ್ಥಿ ನಿಲಯಗಳಲ್ಲಿ ವಾಟರ್ ಫ್ಯೂರಿಫೈಯರ್‌ಗಳು ಇದ್ದರೂ ಅನಗತ್ಯವಾಗಿ ವಾಟರ್ ಫ್ಯೂರಿಫೈಯರ್‌ಗಳನ್ನು ಖರೀದಿಸಲಾಗಿದೆ. ಇದಕ್ಕೆ 4,43,370ರೂ. ವ್ಯಯಿಸಲಾಗಿದೆ. ಇದಲ್ಲದೆ ಅನಗತ್ಯವಾಗಿ ರಿಪೇರಿ ವೆಚ್ಚವನ್ನು ಭರಿಸಲಾಗಿದೆ ಎಂದು ಹೇಳಲಾಗಿದೆ.

2023-24ನೇ ಸಾಲಿನಲ್ಲಿ ಮಂಡ್ಯ ತಾಲೂಕುವೊಂದರಲ್ಲೇ ಡಿಸಿ ಬಿಲ್‌ಗಳ ಮೂಲಕ 86,05,365 ರೂ.ಗಳನ್ನು ಖಜಾನೆಯಿಂದ ವ್ಯಯಿಸಲಾಗಿದೆ. ಈ ಮೊತ್ತವನ್ನು ಬೇರೆ ಬೇರೆ ಸಂಸ್ಥೆಗಳಿಗೆ ಪಾವತಿಸಲಾಗಿದೆ. ಕಳೆದ ನಾಲ್ಕು ವರ್ಷಗಳಲ್ಲಿ 2,08,99,815 ರೂ.ಗಳನ್ನು ಡಿಸಿ ಬಿಲ್‌ಗಳ ಮೂಲಕ ಬೇರೆ ಬೇರೆ ಸಂಸ್ಥೆಗಳಿಗೆ ಪಾವತಿಸಲಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

2020-21ನೇ ಸಾಲಿನಲ್ಲಿ ಮಂಡ್ಯ ತಾಲೂಕು ವ್ಯಾಪ್ತಿಯಲ್ಲಿರುವ ವಿದ್ಯಾರ್ಥಿ ನಿಲಯಗಳಿಗೆ ನಿರ್ವಹಣೆ ಹೆಸರಿನಲ್ಲಿ ಡಿ ಸಿ ಬಿಲ್ ಮೂಲಕ ಖಜಾನೆಯಿಂದ ಹಣ ಪಾವತಿಸಿರುವುದು ಕೂಡ ತನಿಖೆಯಲ್ಲಿ ಬಯಲಾಗಿದೆ ಎಂದು 'ದಿ ಫೈಲ್' ವರದಿಯಲ್ಲಿ ಉಲ್ಲೇಖಿಸಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X