Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಒಂದು ದೇಶ-ಒಂದು ಚುನಾವಣೆ: ಆರ್ಥಿಕ...

ಒಂದು ದೇಶ-ಒಂದು ಚುನಾವಣೆ: ಆರ್ಥಿಕ ಸವಾಲುಗಳು

ಧಾಮಿನಿ ನಾಧ್ಧಾಮಿನಿ ನಾಧ್4 Sept 2023 12:38 PM IST
share
ಒಂದು ದೇಶ-ಒಂದು ಚುನಾವಣೆ: ಆರ್ಥಿಕ ಸವಾಲುಗಳು

ಸುಮಾರು 30 ಲಕ್ಷ ವಿದ್ಯುನ್ಮಾನ ಮತದಾನ ಯಂತ್ರಗಳು (ಇವಿಎಂ) ಮತ್ತು ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರೇಲ್ (ವಿವಿಪ್ಯಾಟ್) ಯಂತ್ರಗಳ ವ್ಯವಸ್ಥೆ ಹಾಗೂ ದೇಶಾದ್ಯಂತ ಕೇಂದ್ರೀಯ ಪಡೆಗಳ ನಿಯೋಜನೆ:ಏಕಕಾಲದಲ್ಲಿ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳನ್ನು ನಡೆಸುವುದರಲ್ಲಿ ಸವಾಲುಗಳು ಅಗಾಧವಾಗಿವೆ. ಆದರೆ ಹಲವಾರು ಮಾಜಿ ಮುಖ್ಯ ಚುನಾವಣಾ ಆಯುಕ್ತರು (ಸಿಇಸಿ) ಹೇಳುವಂತೆ ಇದು ದುಸ್ತರವೇನಲ್ಲ.

1967ರವರೆಗೂ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲಾಗುತ್ತಿತ್ತು. ಆದರೆ ನಂತರದ ವರ್ಷಗಳಲ್ಲಿ ವಿಧಾನಸಭೆಗಳು ಮತ್ತು ಲೋಕಸಭೆಗಳು ಅವಧಿಗೆ ಮೊದಲೇ ವಿಸರ್ಜನೆಗೊಳ್ಳುತ್ತಲೇ ಬಂದಿದ್ದರಿಂದ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವುದು ಸಾಧ್ಯವಾಗಲಿಲ್ಲ. ಪ್ರಸ್ತುತ ಆಂಧ್ರಪ್ರದೇಶ,ಅರುಣಾಚಲ ಪ್ರದೇಶ,ಒಡಿಶಾ ಮತ್ತು ಸಿಕ್ಕಿಂ ವಿಧಾನಸಭೆಗಳಿಗೆ ಲೋಕಸಭೆಯೊಂದಿಗೇ ಚುನಾವಣೆಗಳು ನಡೆಯಲಿವೆ.

2022ರಲ್ಲಿ ಆಗಿನ ಸಿಇಸಿ ಸುಶೀಲಚಂದ್ರ ಅವರು,ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸಲು ಚುನಾವಣಾ ಆಯೋಗವು ಸಂಪೂರ್ಣವಾಗಿ ಸಜ್ಜಾ

ಗಿದೆ ಎಂದು ಹೇಳಿದ್ದರು. ಹಾಲಿ ಸಿಇಸಿ ರಾಜೀವ ಕುಮಾರ್ ಅವರು ಈ ವಿಷಯದಲ್ಲಿ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

ಹೆಚ್ಚಿದ ವೆಚ್ಚಗಳು

ಈ ಎಲ್ಲ ವರ್ಷಗಳಲ್ಲಿ ಸರಕಾರ ಮತ್ತು ಸಂಸದೀಯ ಸಮಿತಿಗಳಿಗೆ ಸಲ್ಲಿಸಿರುವ ವರದಿಗಳಲ್ಲಿ ಚುನಾವಣಾ ಆಯೋಗವು ಏಕಕಾಲಿಕ ಚುನಾವಣೆ ನಡೆಸುವಲ್ಲಿ ಎದುರಾಗುವ ಸವಾಲುಗಳನ್ನು ಪಟ್ಟಿ ಮಾಡಿದೆ. ಚುನಾವಣಾ ಆಯೋಗವು 2015ರಲ್ಲಿ ಸಲ್ಲಿಸಿದ್ದ ತನ್ನ ವರದಿಯಲ್ಲಿ ಬೆಟ್ಟು ಮಾಡಿರುವ ‘ಹಲವಾರು ತೊಂದರೆಗಳನ್ನು ’ ಸಿಬ್ಬಂದಿ,ಸಾರ್ವಜನಿಕ ಕುಂದುಕೊರತೆಗಳು,ಕಾನೂನು ಮತ್ತು ನ್ಯಾಯ ಕುರಿತು ಸಂಸದೀಯ ಸ್ಥಾಯಿ ಸಮಿತಿಯು ಗಮನಿಸಿದೆ.

ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸಲು ಬೃಹತ್ ಪ್ರಮಾಣದಲ್ಲಿ ಇವಿಎಮ್‌ಗಳು ಮತ್ತು ವಿವಿಪ್ಯಾಟ್ ಯಂತ್ರಗಳ ಖರೀದಿ ಅಗತ್ಯವಾಗುತ್ತದೆ ಎನ್ನುವುದನ್ನು ಈ ಎಲ್ಲ ವರದಿಗಳು ಪ್ರಮುಖವಾಗಿ ಬಿಂಬಿಸಿವೆ.ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸಲು ಇವಿಎಮ್‌ಗಳು ಮತ್ತು ವಿವಿಪ್ಯಾಟ್ ಯಂತ್ರಗಳ ಖರೀದಿಗೆ ಒಟ್ಟು 9,284.15 ಕೋ.ರೂ.ಗಳು ಅಗತ್ಯವಾಗುತ್ತವೆ ಎಂದು ಚುನಾವಣಾ ಆಯೋಗವು ನಿರೀಕ್ಷಿಸಿದೆ. ಪ್ರತೀ 15 ವರ್ಷಗಳಿಗೊಮ್ಮೆ ಈ ಯಂತ್ರಗಳನ್ನು ಬದಲಿಸಬೇಕಿರುವುದು ಇನ್ನಷ್ಟು ವೆಚ್ಚವನ್ನುಂಟು ಮಾಡುತ್ತದೆ. ಅಲ್ಲದೆ ಈ ಯಂತ್ರಗಳನ್ನು ದಾಸ್ತಾನಿರಿಸಲು ಗೋದಾಮು ವೆಚ್ಚವೂ ಹೆಚ್ಚಾಗುತ್ತದೆ ಎಂದು ಸಮಿತಿ ವರದಿಯಲ್ಲಿ ಹೇಳಲಾಗಿದೆ.

ಸದ್ಯದ ಮಟ್ಟಿಗೆ ಚುನಾವಣಾ ಆಯೋಗವು ವಿಶ್ವದಲ್ಲಿ ಅತ್ಯಂತ ಅಗ್ಗದಲ್ಲಿ (ಒಂದು ಮತಕ್ಕೆ ಒಂದು ಡಾಲರ್ ವೆಚ್ಚ) ಚುನಾವಣೆಗಳನ್ನು ನಡೆಸುತ್ತಿದೆ. ಅಂದರೆ ಇವಿಎಮ್‌ಗಳನ್ನು ಹಲವಾರು ಚುನಾವಣೆಗಳಿಗೆ ಬಳಸಲಾಗುತ್ತಿದೆ. ಏಕಕಾಲದಲ್ಲಿ ಚುನಾವಣೆಗಳು ನಡೆದರೆ,ಇವುಗಳ ಜೀವಿತಾವಧಿ ಸುಮಾರು 15 ವರ್ಷಗಳಾಗಿರುವುದರಿಂದ ಮೂರು ಚುನಾವಣೆಗಳಲ್ಲಿ ಬಳಸಬಹುದು ಎಂದು ರಾವತ್ ಹೇಳಿದರು.

2021ರಲ್ಲಿ ಸಂಸತ್ತಿನಲ್ಲಿ ನೀಡಲಾಗಿದ್ದ ಉತ್ತರದಂತೆ 2014 ಮತ್ತು 2019ರ ನಡುವೆ ಚುನಾವಣೆಗಳನ್ನು ನಡೆಸಲು ಕೇಂದ್ರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಒಟ್ಟು 5,814.29 ಕೋ.ರೂ.ಗಳನ್ನು ಒದಗಿಸಿತ್ತು.

ಕೇಂದ್ರೀಯ ಪಡೆಗಳು,ಚುನಾವಣಾ ಸಿಬ್ಬಂದಿ

ಚುನಾವಣೆ ಪ್ರಕ್ರಿಯೆ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಯ್ದುಕೊಳ್ಳಲು ಕೇಂದ್ರೀಯ ಪಡೆಗಳ ಅಗತ್ಯ ಇನ್ನೊಂದು ಸವಾಲನ್ನೊಡ್ಡಬಹುದು. ಹೆಚ್ಚಿನ ರಾಜ್ಯಗಳು ಚುನಾವಣೆ ಸಂದರ್ಭಗಳಲ್ಲಿ ಕೇಂದ್ರೀಯ ಪಡೆಗಳನ್ನು ಕೋರುತ್ತವೆ ಎಂದು ಹೇಳಿದ ರಾವತ್,ಈ ಪಡೆಗಳ ಮತ್ತು ಚುನಾವಣಾ ಸಿಬ್ಬಂದಿಯ ಸಾಗಾಟ ಬಗೆಹರಿಸಬೇಕಾದ ಇನ್ನೊಂದು ಸಮಸ್ಯೆಯಾಗಿದೆ ಎಂದರು.

ಸವಾಲುಗಳನ್ನು ಎದುರಿಸುವುದು

ಏಕಕಾಲಿಕ ಚುನಾವಣೆಗಳನ್ನು ನಡೆಸುವ ಪರಿಕಲ್ಪನೆಯು ತನ್ನದೇ ಆದ ಸಾಧಕ-ಬಾಧಕಗಳನ್ನು ಹೊಂದಿದೆ. ಅದು ಸಮಯ,ವೆಚ್ಚ ಮತ್ತು ಆಡಳಿತಾತ್ಮಕ ಶ್ರಮವನ್ನು ಉಳಿಸುತ್ತದೆ. ಈ ಸವಾಲುಗಳನ್ನು ಎದುರಿಸುವುದು ದುಸ್ತರವೇನಲ್ಲ. 3-4 ತಿಂಗಳುಗಳ ಅವಧಿಯಲ್ಲಿ ಚುನಾವಣೆಗಳನ್ನು ನಡೆಸಿದರೆ ಅದು ಸಾಧ್ಯವಿದೆ ಎಂದು ಮಾಜಿ ಸಿಇಸಿ ಟಿ.ಎಸ್.ಕೃಷ್ಣಮೂರ್ತಿ ಹೇಳಿದರು.

(ಕೃಪೆ: indianexpress.com)

share
ಧಾಮಿನಿ ನಾಧ್
ಧಾಮಿನಿ ನಾಧ್
Next Story
X