Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿ ವೇತನ:...

ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿ ವೇತನ: 160 ಕೋ.ರೂ.ನಲ್ಲಿ ಕೇವಲ 2.29 ಕೋ.ರೂ. ಬಿಡುಗಡೆ

ಪರಿಶಿಷ್ಟರು, ಒಬಿಸಿ, ಅಲ್ಪಸಂಖ್ಯಾತರಿಗೆ ಬಿಡುಗಡೆಯಾಗದ ನಿರೀಕ್ಷಿತ ಅನುದಾನ

ಜಿ.ಮಹಾಂತೇಶ್ಜಿ.ಮಹಾಂತೇಶ್12 Dec 2023 8:45 AM IST
share
ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿ ವೇತನ: 160 ಕೋ.ರೂ.ನಲ್ಲಿ ಕೇವಲ 2.29 ಕೋ.ರೂ. ಬಿಡುಗಡೆ

ಬೆಂಗಳೂರು: ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಅನ್ನಭಾಗ್ಯ ಮತ್ತು ಶಕ್ತಿ ಯೋಜನೆ ಫಲಾನುಭವಿಗಳಿಗೆ ಅನುದಾನ ಬಿಡುಗಡೆ ಮಾಡಿ ಬೀಗುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರವು ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ, ವಿವಿಧ ಸಮುದಾಯಗಳ ಅಭಿವೃದ್ಧಿ, ರೈತರ ಮಕ್ಕಳಿಗೆ ಮತ್ತು ಪರಿಶಿಷ್ಟ ಜಾತಿ ಯ 1ರಿಂದ 8ನೇ ತರಗತಿ ಮಕ್ಕಳಿಗೆ ವಿದ್ಯಾರ್ಥಿ ವೇತನ ಸೇರಿದಂತೆ ಇನ್ನಿತರ ಇಲಾಖಾವಾರು ಫಲಾನುಭವಿ ಕಾರ್ಯಕ್ರಮಗಳಿಗೆ ಕಳೆದ 6 ತಿಂಗಳಲ್ಲಿ ನಿರೀಕ್ಷಿತ ಅನುದಾನ ಬಿಡುಗಡೆ ಮಾಡಿಲ್ಲ.

ಕಳೆದ 6 ತಿಂಗಳಲ್ಲಿ ನುಡಿದಂತೆ ನಡೆದಿದ್ದೇವೆ ಎಂದು ಕೋಟ್ಯಂತರ ರೂ. ಮೊತ್ತದ ಜಾಹೀರಾತು ನೀಡಿ ಸಂಭ್ರಮಿಸುತ್ತಿರುವ ಮಧ್ಯೆಯೇ ಅಹಿಂದ ವರ್ಗದ ಕಲ್ಯಾಣ ಯೋಜನೆಗಳಿಗೆ ಕಡಿಮೆ ಅನುದಾನವನ್ನು ಬಿಡುಗಡೆ ಮಾಡಿರುವುದು ಮುನ್ನೆಲೆಗೆ ಬಂದಿದೆ.

ನವೆಂಬರ್ 18ರಂದು ನಡೆದಿದ್ದ ಕೆಡಿಪಿ ಸಭೆಯಲ್ಲಿ ವಿವಿಧ ಇಲಾಖೆಗಳು ಮಂಡಿಸಿದ್ದ ಅಂಕಿ ಅಂಶಗಳು ‘The-file.in’ಗೆ ಲಭ್ಯವಾಗಿವೆ.

ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ರಾಜ್ಯ ಯೋಜನೆಯಡಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ (1ರಿಂದ 8ನೇ ತರಗತಿ) ಕ್ಕೆಂದು 114.63 ಕೋಟಿ ರೂ. ನೀಡಿದ್ದರೂ ಸಹ ಅಕ್ಟೋಬರ್ ಅಂತ್ಯದವರೆಗೆ ಕೇವಲ 0.39 ಕೋಟಿ ರೂ. ಮಾತ್ರ ಬಿಡುಗಡೆ ಮಾಡಿದೆ. ಆದರೆ ಇದರಲ್ಲಿಯೂ ನಯಾಪೈಸೆಯನ್ನೂ ವೆಚ್ಚ ಮಾಡಿಲ್ಲ.

ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಕೇಂದ್ರ ಪುರಸ್ಕೃತ ಯೋಜನೆ ಅಡುಗೆಯವರು, ಸಹಾಯಕರುಗಳಿಗೆ ಗೌರವ ಧನ, ಅಡುಗೆ ಮನೆ ನಿರ್ವಹಣೆ (ಪ್ರಧಾನ ಮಂತ್ರಿ ಪೋಷಣ ಶಕ್ತಿ)ಗೆಂದು 216.97 ಕೋಟಿ ರೂ. ನೀಡಿದ್ದರೂ ಅಕ್ಟೋಬರ್ ಅಂತ್ಯದವರೆಗೆ ಬಿಡಿಗಾಸನ್ನೂ ನೀಡಿಲ್ಲ ಎಂಬುದು ಅಂಕಿ ಅಂಶದಿಂದ ತಿಳಿದು ಬಂದಿದೆ. ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ವಿವಿಧ ಸಮುದಾಯಗಳ ಅಭಿವೃದ್ಧಿಗಾಗಿ 191 ಕೋಟಿ ರೂ.ಗಳನ್ನು ಆಯವ್ಯಯದಲ್ಲಿ ಒದಗಿಸಿದ್ದರೂ ಅಕ್ಟೋಬರ್ ಅಂತ್ಯದವರೆಗೆ ಬಿಡಿಗಾಸನ್ನೂ ಸರಕಾರವು ಬಿಚ್ಚಿಲ್ಲ.

ದೇ ರೀತಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗಾಗಿ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ 143.00 ಕೋಟಿ ರೂ. ನೀಡಿದ್ದರೂ ಸಹ ಅಕ್ಟೋಬರ್ ಅಂತ್ಯದವರೆಗೆ ಬಿಡಿಗಾಸನ್ನೂ ನೀಡಿಲ್ಲ. ಹೀಗಾಗಿ ವೆಚ್ಚವೂ ಶೂನ್ಯವಾಗಿದೆ.

ಆದರೆ ಗ್ಯಾರಂಟಿ ಯೋಜನೆಗಳಾದ ಗೃಹ ಜ್ಯೋತಿಗೆ ಒದಗಿಸಿದ್ದ 9,000 ಕೋಟಿ ರೂ. ಅನುದಾನದ ಪೈಕಿ 2,901.56 ಕೋಟಿ ರೂ. ಬಿಡುಗಡೆಯಾಗಿದೆ. ಈ ಪೈಕಿ 2,151.56 ಕೋಟಿ ರೂ. ಖರ್ಚಾಗಿದೆ. ಇದು ಒಟ್ಟು ಅನುದಾನಕ್ಕೆ ಶೇ.23.91ರಷ್ಟು ವೆಚ್ಚವಾದಂತಾಗಿದೆ. ಬಿಡುಗಡೆಗೆ 6,848.44 ಕೋಟಿ ರೂ. ಬಾಕಿ ಇರಿಸಿಕೊಂಡಿದೆ.

ಹಾಗೆಯೇ ಅನ್ನಭಾಗ್ಯ ಯೋಜನೆಯಡಿ 10,265 ಕೋಟಿ ರೂ. ಪೈಕಿ 3,423.33 ಕೋಟಿ ರೂ. ಬಿಡುಗಡೆಯಾಗಿದೆ. ಇದರಲ್ಲಿ 2,504.83 ಕೋಟಿ ರೂ. ಖರ್ಚಾಗಿದೆ. ಇದು ಒಟ್ಟು ಅನುದಾನಕ್ಕೆ ಶೇ.24.40ರಷ್ಟಿದೆ. ಬಿಡುಗಡೆಗೆ 7,760.17 ಕೋಟಿ ರೂ. ಬಾಕಿ ಇರಿಸಿಕೊಂಡಿದೆ.

ಗೃಹಲಕ್ಷ್ಮಿ ಯೋಜನೆಗೆ 17,500.00 ಕೋಟಿ ರೂ. ಅನುದಾನ ಒದಗಿಸಿದೆ. ಈ ಪೈಕಿ 5,700 ಕೋಟಿ ರೂ. ಬಿಡುಗಡೆ ಆಗಿದೆ. ಇದರಲ್ಲಿ 3,883.34 ಕೋಟಿ ರೂ. ಖರ್ಚಾಗಿದೆ. ಇದು ಒಟ್ಟು ಅನುದಾನಕ್ಕೆ ಶೇ.22.19ರಷ್ಟಿದೆ. ಬಿಡುಗಡೆಗೆ ಇನ್ನೂ 13,616.66 ಕೋಟಿ ರೂ. ಬಾಕಿ ಇರಿಸಿಕೊಂಡಿದೆ.

ಅದೇ ರೀತಿ ಶಕ್ತಿ ಯೋಜನೆಗೆ 2,800 ಕೋಟಿ ರೂ. ಅನುದಾನ ಒದಗಿಸಲಾಗಿತ್ತು. ಈ ಪೈಕಿ ಬಿಡುಗಡೆಯಾಗಿದ್ದ 1,080 ಕೋಟಿ ರೂ. ಖರ್ಚಾಗಿದೆ. ಇದು ಒಟ್ಟು ಅನುದಾನಕ್ಕೆ ಶೇ.38.58ರಷ್ಟಿದೆ. ಬಿಡುಗಡೆಗೆ 1,719.78 ಕೋಟಿ ರೂ. ಬಾಕಿ ಇರಿಸಿಕೊಂಡಿರುವುದು ಗೊತ್ತಾಗಿದೆ.

ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿ ವೇತನ ಮತ್ತು ಶುಲ್ಕ ಮರು ಪಾವತಿಗೆ ಆಯವ್ಯಯದಲ್ಲಿ ಒಟ್ಟು 160.00 ಕೋಟಿ ರೂ. ಒದಗಿಸಲಾಗಿತ್ತು. ಈ ಪೈಕಿ ಅಕ್ಟೋಬರ್ ಅಂತ್ಯದವರೆಗೆ ಕೇವಲ 2.29 ಕೋಟಿ ರೂ. ಬಿಡುಗಡೆ ಮಾಡಿದೆ. ಇದರಲ್ಲಿ 0.10 ಕೋಟಿ ರೂ. ವೆಚ್ಚವಾಗಿದೆ. ಬಿಡುಗಡೆಗೆ 159.90 ಕೋಟಿ ರೂ. ಬಾಕಿ ಇರುವುದು ಅಂಕಿ ಅಂಶದಿಂದ ತಿಳಿದು ಬಂದಿದೆ.

ವಿವಿಧ ಸಮುದಾಯಗಳ ಅಭಿವೃದ್ಧಿಗಾಗಿ 110.00 ಕೋಟಿ ರೂ.ಗಳನ್ನು ಆಯವ್ಯಯದಲ್ಲಿ ಒದಗಿಸಲಾಗಿತ್ತು. ಇದರಲ್ಲಿ ಬಿಡುಗಡೆಯಾಗಿದ್ದ 1.00 ಕೋಟಿ ರೂ. ಖರ್ಚಾಗಿದೆ.

ಕೇಂದ್ರ ಪುರಸ್ಕೃತ ಯೋಜನೆಯ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಕ್ಕೆ 2,445.80 ಕೋಟಿ ರೂ. ಪೈಕಿ 667.24 ಕೋಟಿ ರೂ. ಬಿಡುಗಡೆಯಾಗಿದೆ. ಅದರೆ 889.26 ಕೋಟಿ ರೂ. ವೆಚ್ಚವಾಗಿದೆ ಎಂದು ಆರೋಗ್ಯ ಇಲಾಖೆಯು ಅಂಕಿ ಅಂಶವನ್ನು ಮಂಡಿಸಿದೆ.

ಹೊಸ ಬೆಳೆ ವಿಮಾ ಯೋಜನೆಗೆ 600 ಕೋಟಿ ರೂ.ನಲ್ಲಿ ಬಿಡುಗಡೆಯಾಗಿರುವ 200 ಕೋಟಿ ರೂ.ಯೂ ಖರ್ಚಾಗಿದೆ. ಬಿಡುಗಡೆಗೆ 400 ಕೋಟಿ ರೂ. ಬಾಕಿ ಇದೆ. ಕೃಷಿ ಪರಿಕರಗಳು ಮತ್ತು ಗುಣಮಟ್ಟ ನಿಯಂತ್ರಣಕ್ಕೆ 502.83 ಕೋಟಿ ರೂ.ನಲ್ಲಿ 202.49 ಕೋಟಿ ರೂ. ಬಿಡುಗಡೆಯಾಗಿದೆ. ಈ ಪೈಕಿ 176.40 ಕೋಟಿ ರೂ. ಖರ್ಚಾಗಿದೆ. ಬಿಡುಗಡೆಗೆ 326.43 ಕೋಟಿ ರೂ. ಬಾಕಿ ಇರುವುದು ಗೊತ್ತಾಗಿದೆ.

ಕೇಂದ್ರ ಪುರಸ್ಕೃತ ಯೋಜನೆಯ ಜಲ್ ಜೀವನ್ ಮಿಷನ್ (ಗ್ರಾಮೀಣ ಕುಡಿಯುವ ನೀರಿನ ಯೋಜನೆ)ಗೆ 9,250.95 ಕೋಟಿ ರೂ.ನಲ್ಲಿ 1,900.00 ಕೋಟಿ ರೂ. ಬಿಡುಗಡೆಯಾಗಿದೆ. ಇದರಲ್ಲಿ 2,845.98 ಕೋಟಿ ರೂ. ಖರ್ಚಾಗಿದೆ. ಬಿಡುಗಡೆಗೆ 6,404.97 ಕೋಟಿ ರೂ. ಬಾಕಿ ಇದೆ.

ರಾಷ್ಟ್ರೀಯ ತೋಟಗಾರಿಕೆ ಅಭಿಯಾನಕ್ಕೆ 140.07 ಕೋಟಿ ರೂ. ಪೈಕಿ 43.20 ಕೋಟಿ ರೂ. ಬಿಡುಗಡೆಯಾಗಿದೆ. ಇದರಲ್ಲಿ 37.59 ಕೋಟಿ ರೂ. ಖರ್ಚಾಗಿದೆ. ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಗೆ 107.33 ಕೋಟಿ ರೂ. ನೀಡಿದ್ದರೂ ನಯಾ ಪೈಸೆ ಬಿಡುಗಡೆಯಾಗಿಲ್ಲ.

ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಗೆ 1,268.69 ಕೋಟಿ ರೂ. ಅನುದಾನದ ಪೈಕಿ 250.00 ಕೋಟಿ ರೂ. ಬಿಡುಗಡೆಯಾಗಿದೆ. ಇದರಲ್ಲಿ 306.79 ಕೋಟಿ ರೂ. ವೆಚ್ಚವಾಗಿದೆ ಎಂದು ತೋರಿಸಿದೆ. ಬಿಡುಗಡೆಗೆ 961.90 ಕೋಟಿ ರೂ. ಬಾಕಿ ಇದೆ. ನಗರ ಜೊತೆಗೆ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಯೋಜನೆಯಡಿ ರಾಜ್ಯದ ಕೊಡುಗೆಯಾಗಿ 559.17 ಕೋಟಿ ರೂ. ಅನುದಾನ ನಿಗದಿಪಡಿಸಲಾಗಿತ್ತು. ಆದರೆ ಈ ಪೈಕಿ ಶೂನ್ಯ ಬಿಡುಗಡೆಯಾಗಿದೆ. ಆದರೆ 142.54 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ತೋರಿಸಿರುವುದು ತಿಳಿದು ಬಂದಿದೆ.

ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ)ಗೆ 723.50 ಕೋಟಿ ರೂ. ಅನುದಾನದ ಪೈಕಿ ಬಿಡುಗಡೆ ಮಾಡಿದ್ದು ಕೇವಲ 3.16 ಕೋಟಿ ರೂ. ಮಾತ್ರ. ಆದರೆ 104.49 ಕೋಟಿ ರೂ. ವೆಚ್ಚವಾಗಿದೆ ಎಂದು ತೋರಿಸಲಾಗಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X