Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಕಬಡಕೇರಿ ಅಂಗನವಾಡಿಗೆ ಹೈಟೆಕ್ ಸ್ಪರ್ಶ...

ಕಬಡಕೇರಿ ಅಂಗನವಾಡಿಗೆ ಹೈಟೆಕ್ ಸ್ಪರ್ಶ ನೀಡಿದ ಶಿಕ್ಷಕಿ ತಮ್ಸೀನಾ ಬಾನು

ಕೆ.ಎಂ. ಇಸ್ಮಾಯಿಲ್ ಕಂಡಕರೆಕೆ.ಎಂ. ಇಸ್ಮಾಯಿಲ್ ಕಂಡಕರೆ8 March 2025 1:27 PM IST
share
ಕಬಡಕೇರಿ ಅಂಗನವಾಡಿಗೆ ಹೈಟೆಕ್ ಸ್ಪರ್ಶ ನೀಡಿದ ಶಿಕ್ಷಕಿ ತಮ್ಸೀನಾ ಬಾನು
ಮೂರ್ನಾಡುವಿನಲ್ಲಿ ಶಿಕ್ಷಣ ಪೂರೈಸಿರುವ ತಮ್ಸೀನಾ ಬಾನು ಪ್ರೌಢಶಾಲಾ ವಿದ್ಯಾರ್ಥಿಯಾಗಿದ್ದ ಸಂದರ್ಭದಲ್ಲಿ ಎರಡು ಬಾರಿ ರಾಜ್ಯಮಟ್ಟದ ಗುಂಡು ಎಸೆತ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಗೆದ್ದಿದ್ದಾರೆ. ಅಲ್ಲದೆ ಅತ್ಯುತ್ತಮ ಥ್ರೋಬಾಲ್ ಕ್ರೀಡಾಪಟು ಕೂಡ ಆಗಿದ್ದಾರೆ. ಬಿಎಡ್ ಶಿಕ್ಷಣವನ್ನು ಪೂರೈಸಿ ಮೂರ್ನಾಡುವಿನ ಜ್ಞಾನ ಜ್ಯೋತಿ ಶಾಲೆಯಲ್ಲಿ ದೈಹಿಕ ಶಿಕ್ಷಕಿಯಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. 2019ರಿಂದ ಕಬಡಕೇರಿ ಅಂಗನವಾಡಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ನಡೆಯುವ ಪೋಷಣ್ ಅಭಿಯಾನ ಕಾರ್ಯಕ್ರಮದಲ್ಲಿಯೂ ತಮ್ಸೀನಾ ಬಾನು ಕಳೆದೆರಡು ವರ್ಷಗಳಿಂದ ಪ್ರಶಸ್ತಿ ಗೆಲ್ಲುತ್ತಿದ್ದಾರೆ.

ಸರಕಾರಿ ಅಂಗನವಾಡಿಗಳಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಬಹುತೇಕರಿಗೆ ತಾತ್ಸಾರ ಮನೋಭಾವ ಇದೆ. ಮತ್ತೊಂದೆಡೆ ಆಂಗ್ಲ ಮಾಧ್ಯಮದ ಶಿಕ್ಷಣದ ಹಾವಳಿಯಿಂದ ಅಂಗನವಾಡಿಗೆ ಬರುವ ಮಕ್ಕಳ ಸಂಖ್ಯೆಯೂ ಕ್ಷೀಣಿಸುತ್ತಿದೆ. ಆದರೆ, ಸರಕಾರಿ ಅಂಗನವಾಡಿಯನ್ನೂ ಯಾವುದೇ ಪ್ಲೇ ಸ್ಕೂಲ್‌ಗೆ ಕಡಿಮೆ ಇಲ್ಲದಂತೆ ಹೈಟೆಕ್ ಸ್ಪರ್ಶ ನೀಡಬಹುದು ಎಂಬುದಕ್ಕೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಹೊದ್ದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಬಡಕೇರಿ ಅಂಗನವಾಡಿಯ ಶಿಕ್ಷಕಿ ತಮ್ಸೀನಾ ಬಾನು ಸ್ಪಷ್ಟ ಉದಾಹರಣೆಯಾಗಿದ್ದಾರೆ.

ಜೀವನದಲ್ಲಿ ಸವಾಲುಗಳನ್ನು ಮೆಟ್ಟಿ ನಿಂತು ತಮ್ಸೀನಾ ಬಾನು ಕಬಡಕೇರಿ ಅಂಗನವಾಡಿಯನ್ನು ಇಡೀ ರಾಜ್ಯಕ್ಕೆ ಮಾದರಿಯಾಗುವಂತೆ ಮಾಡಿದ್ದಾರೆ. ಕಬಡಕೇರಿ ಅಂಗನವಾಡಿ ಸುಂದರ ಹೂತೋಟದ ನಡುವಿನ ಸುಸಜ್ಜಿತ ಕಟ್ಟಡದಲ್ಲಿ ಪುಟಾಣಿಗಳಿಗೆ ಶಿಕ್ಷಣ ನೀಡುತ್ತಿದೆ. ತಮ್ಸೀನಾ ಬಾನು ಅವರ ಕಾರ್ಯ ವೈಖರಿಯಿಂದ ಪುಟ್ಟ ಗ್ರಾಮ ಕಬಡಕೇರಿಯ ಅಂಗನವಾಡಿ ರಾಜ್ಯಮಟ್ಟದಲ್ಲಿ ಹೆಸರುವಾಸಿಯಾಗಿದೆ.

32 ವರ್ಷಗಳ ಹಳೆಯ ಕಟ್ಟಡಕ್ಕೆ ಮುಕ್ತಿ

2019ರಲ್ಲಿ ತಮ್ಸೀನಾ ಬಾನು ಶಿಕ್ಷಕಿಯಾಗಿ ಕಬಡಕೇರಿ ಅಂಗನವಾಡಿಗೆ ನೇಮಕಗೊಂಡ ಸಂದರ್ಭದಲ್ಲಿ 32 ವರ್ಷಗಳ ಹಳೆಯ ಕಟ್ಟಡದಲ್ಲಿ ಅಂಗನವಾಡಿ ಕಾರ್ಯ ನಿರ್ವಹಿಸುತ್ತಿತ್ತು. ಈ ಅಂಗನವಾಡಿಯ ಮಾಳಿಗೆ ಮಳೆಗಾಲದಲ್ಲಿ ಸೋರುತ್ತಿತ್ತು. ಇಲ್ಲಿ ಯಾವುದೇ ಕಾರ್ಯಕ್ರಮಗಳನ್ನು ಮಾಡಲು ಸಾಧ್ಯವಿಲ್ಲದೆ ಬಾಡಿಗೆ ಹಣ ನೀಡಿ ಖಾಸಗಿ ಕಟ್ಟಡದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ತಮ್ಸೀನಾ ಬಾನು ಅವರು ಮುತುವರ್ಜಿ ವಹಿಸಿ ಸಿಡಿಪಿ ಅವರ ಗಮನಕ್ಕೆ ತಂದು ಹೊಸ ಕಟ್ಟಡಕ್ಕೆ ಬೇಡಿಕೆ ಇಟ್ಟಿದ್ದು, ಕೇವಲ ಎಂಟು ತಿಂಗಳಲ್ಲಿ ಕಬಡಕೇರಿಯಲ್ಲಿ ಹೊಸ ಅಂಗನವಾಡಿ ಕಟ್ಟಡ ತಲೆ ಎತ್ತಿತ್ತು. ಇದಾದ ನಂತರದ ದಿನಗಳಲ್ಲಿ ತಮ್ಸೀನಾ ಬಾನು ಪ್ರತೀದಿನ ಸಂಜೆ ಗ್ರಾಮಸ್ಥರನ್ನು ಸೇರಿಸಿಕೊಂಡು ಅಂಗನವಾಡಿ ಆವರಣದಲ್ಲಿ ಕೈ ತೋಟವನ್ನು ನಿರ್ಮಿಸಿ ಮಾದರಿಯಾಗಿದ್ದಾರೆ.

ಅಂಗನವಾಡಿಯಲ್ಲಿ ಮಕ್ಕಳಿಗೆ ಆಟದ ಆಟಿಕೆ, ಇಂಗ್ಲಿಷ್ ಶಿಕ್ಷಣವನ್ನು ನೀಡುವುದರೊಂದಿಗೆ ಪ್ರಾಕ್ಟಿಕಲ್ ಶಿಕ್ಷಣಕ್ಕೆ ತಮ್ಸೀನಾ ಬಾನು ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ಮಕ್ಕಳಿಗೆ ಆಟವಾಡಲು ಮತ್ತು ಕಲಿಕೆಗೆ ಪೂರಕವಾಗಿ ಅಂಗನವಾಡಿಯ ಹೊರಾಂಗಣವನ್ನು ಕಬಡಕೇರಿ ಗ್ರಾಮಸ್ಥರ ಸಹಕಾರದೊಂದಿಗೆ ನಿರ್ಮಾಣ ಮಾಡಲಾಗಿದೆ.

‘ಹೊರ ಸಂಚಾರ’ ಕಾರ್ಯಕ್ರಮ

ಬಹುತೇಕ ಅಂಗನ ವಾಡಿಗೆ ಬರುವ ಮಕ್ಕಳು ನಾಲ್ಕು ಗೋಡೆಗಳ ಪ್ರಪಂಚದಲ್ಲಿ ದಿನ ಕಳೆಯುತ್ತಾರೆ. ಆದರೆ, ತಮ್ಸೀನಾ ಬಾನು ಅಂಗನವಾಡಿ ಮಕ್ಕಳಿಗೆ ‘ಹೊರ ಸಂಚಾರ’ ಕಾರ್ಯಕ್ರಮವನ್ನು ಆಯೋಜಿಸುವುದರ ಮೂಲಕ ಚಿಕ್ಕ ವಯಸ್ಸಿನಲ್ಲೇ ಮಕ್ಕಳಿಗೆ ಸಮಾಜದ ಅರಿವು ಮೂಡಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಅಂಗನವಾಡಿ ಮಕ್ಕಳನ್ನು ದೇವಸ್ಥಾನ, ಮಸೀದಿ, ಚರ್ಚ್, ಶಾಲೆ, ಆಸ್ಪತ್ರೆ, ಅನಾಥಾಶ್ರಮ, ಬ್ಯಾಂಕ್‌ಗಳಿಗೆ ಕರೆದುಕೊಂಡು ಹೊರಸಂಚಾರ ಕಾರ್ಯಕ್ರಮಗಳನ್ನು ಸತತವಾಗಿ ಆಯೋಜಿಸುತ್ತಿದ್ದಾರೆ.

ವಿಶೇಷವಾಗಿ ಅಂಗನವಾಡಿ ಮಕ್ಕಳನ್ನು ನಾಟಿ ಸಮಯದಲ್ಲಿ ಗದ್ದೆಗಳಿಗೆ ಕರೆದುಕೊಂಡು ಹೋಗಿ ಪ್ರತ್ಯಕ್ಷವಾಗಿ ನಾಟಿ ಮಾಡುವ ವಿಧಾನವನ್ನು ಪ್ರತೀ ವರ್ಷ ಹೇಳಿಕೊಡುತ್ತಿದ್ದಾರೆ. ಅದಲ್ಲದೆ ವಿದ್ಯಾರ್ಥಿಗಳನ್ನೂ ಗದ್ದೆಗಿಳಿಸಿ ಅವರಿಂದ ನಾಟಿ ಮಾಡಿಸು ವುದಲ್ಲದೆ, ಭತ್ತ ಕೊಯ್ಲು ಸಂದರ್ಭ ದಲ್ಲಿಯೂ ಮಕ್ಕಳಿಗೆ ಭತ್ತ ಕೊಯ್ಲು ಮಾಡುವ ವಿಧಾನವನ್ನು ಗದ್ದೆಗಳಿಗೆ ಕರೆದುಕೊಂಡು ಹೋಗಿ ತೋರಿಸಿ ಕೃಷಿಯ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸುತ್ತಾರೆ.

ರಾಷ್ಟ್ರೀಯ ಹಬ್ಬ ಮತ್ತು ಕೊಡಗಿನ ಸಾಂಪ್ರದಾಯಿಕ ಹಬ್ಬಗಳನ್ನು ಅಂಗನವಾಡಿಯಲ್ಲಿ ಆಚರಿಸುವ ಮೂಲಕ ಮಕ್ಕಳಲ್ಲಿ ಕೊಡಗಿನ ಸಂಸ್ಕೃತಿಯನ್ನು ಸಾರುವ ಕೆಲಸವನ್ನು ಮಾಡುತ್ತಿದ್ದಾರೆ.

ಜಿಲ್ಲಾಧಿಕಾರಿ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು ಕಬಡಕೇರಿ ಅಂಗನವಾಡಿಗೆ ಭೇಟಿ ನೀಡಿ ತಮ್ಸೀನಾ ಬಾನು ಅವರ ಕೆಲಸದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಾಜ್ಯಮಟ್ಟದ ಮಾದರಿ ಶಿಕ್ಷಕಿ ಪ್ರಶಸ್ತಿ

2023ರಲ್ಲಿ ಅಂತರ್‌ರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಸೀನಾ ಬಾನು ಅವರಿಗೆ ರಾಜ್ಯಮಟ್ಟದ ‘ಮಾದರಿ ಅಂಗನವಾಡಿ ಶಿಕ್ಷಕಿ’ ಪ್ರಶಸ್ತಿ ನೀಡಿ ಗೌರವಿಸಿದ್ದರು.

ಅಲ್ಲದೆ ಬಾಲ ವಿಕಾಸ ಸಮಿತಿ ವತಿಯಿಂದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ, ಗ್ರಾಮ ಪಂಚಾಯತ್ ಹಾಗೂ ಸಂಘ- ಸಂಸ್ಥೆಗಳೂ ತಮ್ಸೀನಾ ಬಾನು ಅವರನ್ನು ಸನ್ಮಾನಿಸಿ ಗೌರವಿಸಿದೆ.

ಮಕ್ಕಳಿಗೆ ಟೀ-ಶರ್ಟ್, ಐಡಿ ಕಾರ್ಡ್:

ಅಂಗನವಾಡಿಗೆ ಬರುವ ಮಕ್ಕಳಿಗೆ ಹೈಟೆಕ್ ಶಿಕ್ಷಣದೊಂದಿಗೆ ಆಂಗ್ಲ ಶಿಕ್ಷಣವನ್ನೂ ತಮ್ಸೀನಾ ಬಾನು ನೀಡುತ್ತಿದ್ದಾರೆ. ಕಬಡಕೇರಿ ಗ್ರಾಮಸ್ಥರು ಮತ್ತು ದಾನಿಗಳ ನೆರವಿಂದ ಅಂಗನವಾಡಿ ಮಕ್ಕಳಿಗೆ ಖಾಸಗಿ ಶಾಲೆಯ ಮಕ್ಕಳಿಗೆ ಕಡಿಮೆ ಇಲ್ಲದಂತೆ ಟೀ ಶರ್ಟ್, ಪ್ಯಾಂಟ್ ಸಮವಸ್ತ್ರ ಮತ್ತು ಐಡಿ ಕಾರ್ಡನ್ನೂ ನೀಡಲಾಗಿದೆ. ಕಾಫಿ ತೋಟದ ಲೈನ್ ಮನೆಗಳಲ್ಲಿ ವಾಸ ಮಾಡುತ್ತಿರುವ ಹೊರ ರಾಜ್ಯದ ಕಾರ್ಮಿಕರ ಮಕ್ಕಳನ್ನೂ ಅಂಗನವಾಡಿಗೆ ಕರೆತರುವಲ್ಲಿ ತಮ್ಸೀನಾ ಬಾನು ಯಶಸ್ಸು ಕಂಡಿದ್ದಾರೆ.

ಕಬಡಕೇರಿ ಗ್ರಾಮದ ಅಂಗನವಾಡಿ ಮಾದರಿ ಅಂಗನವಾಡಿಯಾಗಿ ಕಾರ್ಯ ನಿರ್ವಹಿಸಲು ಗ್ರಾಮಸ್ಥರು, ಅಧಿಕಾರಿಗಳು, ಗ್ರಾಪಂ ಸದಸ್ಯರು, ದಾನಿಗಳು, ಬಾಲ ವಿಕಾಸ ಸಮಿತಿಯವರು ದೊಡ್ಡ ಮಟ್ಟದಲ್ಲಿ ಸಹಕಾರ ನೀಡುತ್ತಿದ್ದಾರೆ. ಸಿಡಿಪಿ ಆಗಿದ್ದ ಅರುಂಧತಿ ಅವರ ಸಹಕಾರದಿಂದ ಆರ್‌ಐಡಿಎಫ್ ಯೋಜನೆಯಡಿ 16 ಲಕ್ಷ ರೂ. ವೆಚ್ಚದಲ್ಲಿ ಕಬಡಕೇರಿಯಲ್ಲಿ ಹೊಸ ಅಂಗನವಾಡಿ ಕಟ್ಟಡವನ್ನು ನಿರ್ಮಿಸಲಾಯಿತು. ಅಂಗನವಾಡಿಗೆ ದಾನಿಗಳ ಸಹಕಾರದಿಂದ ಹೈಟೆಕ್ ಸ್ಪರ್ಶ ನೀಡಲಾಗಿದೆ. ಮಕ್ಕಳಿಗೆ ಅಂಗನವಾಡಿಯಲ್ಲಿ ಪ್ರಾಕ್ಟಿಕಲ್ ತರಗತಿ ನೀಡುತ್ತಿದ್ದೇವೆ. ಪ್ರಧಾನ ಮಂತ್ರಿ ಪೋಷಣ್ ಅಭಿಯಾನ್ ಕಾರ್ಯಕ್ರಮವನ್ನು ವಿಶೇಷವಾಗಿ ಆಯೋಜಿಸುತ್ತಿದ್ದೇವೆ. ಅದಲ್ಲದೆ ಪೌಷ್ಟಿಕ ಆಹಾರ ಶಿಬಿರವನ್ನೂ ಆಯೋಜಿಸುತ್ತಿದ್ದೇವೆ.

-ತಮ್ಸೀನಾ ಬಾನು

share
ಕೆ.ಎಂ. ಇಸ್ಮಾಯಿಲ್ ಕಂಡಕರೆ
ಕೆ.ಎಂ. ಇಸ್ಮಾಯಿಲ್ ಕಂಡಕರೆ
Next Story
X