Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಬಂಡೀಪುರದಲ್ಲಿ ಸಫಾರಿ ವೇಳೆ ಪ್ರವಾಸಿಗರ...

ಬಂಡೀಪುರದಲ್ಲಿ ಸಫಾರಿ ವೇಳೆ ಪ್ರವಾಸಿಗರ ಕ್ಯಾಮರಾಗೆ ಸೆರೆಸಿಕ್ಕ ಹುಲಿರಾಯ

ರಾಜ್ ಗೋಪಾಲ್ ಹಾಲಹಳ್ಳಿರಾಜ್ ಗೋಪಾಲ್ ಹಾಲಹಳ್ಳಿ17 Feb 2025 1:26 PM IST
share
ಬಂಡೀಪುರದಲ್ಲಿ ಸಫಾರಿ ವೇಳೆ ಪ್ರವಾಸಿಗರ ಕ್ಯಾಮರಾಗೆ ಸೆರೆಸಿಕ್ಕ ಹುಲಿರಾಯ

ಗುಂಡ್ಲುಪೇಟೆ: ತಾಲೂಕಿನಲ್ಲಿ ಕಳೆದ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದರಿಂದ ಈ ಬಾರಿ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದಲ್ಲಿ ಹಸಿರಿನ ಛಾಯೆ ಇನ್ನೂ ಉಳಿದುಕೊಂಡಿದ್ದು, ಪ್ರಾಣಿಗಳಿಗೆ ಮೇವಿನ ಕೊರತೆ ಕಂಡುಬಂದಿಲ್ಲ. ಇದರ ಪರಿಣಾಮ ಸಫಾರಿಗೆ ತೆರಳುವ ಪ್ರವಾಸಿಗರಿಗೆ ಹಾಗೂ ಕೇರಳ ತಮಿಳುನಾಡು ಸಂಪರ್ಕಿಸುವ ಅರಣ್ಯದೊಳಗೆ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಬಂಡೀಪುರದ ಕಾಡುಪ್ರಾಣಿಗಳ ದರ್ಶನ ಸಿಗುತ್ತಿವೆ.

ಕಾಡಿನೊಳಗೆ ಹಾಗೂ ರಸ್ತೆಯ ಬದಿ ಹುಲಿ, ಆನೆ, ಚಿರತೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವುದು ಪ್ರವಾಸಿಗರಲ್ಲಿ ಹೆಚ್ಚು ಸಂತಸ ಮೂಡಿಸುತ್ತಿದೆ. ಕಳೆದ ಎರಡು ವರ್ಷಗಳ ಹಿಂದೆ ಮಳೆ ವಾಡಿಕೆಗಿಂತ ಕಡಿಮೆಯಾಗಿದ್ದರಿಂದ ಕೆರೆಕಟ್ಟೆಗಳಲ್ಲಿನ ನೀರಿನ ಪ್ರಮಾಣ ಕುಸಿದಿತ್ತು. ಕಾಡು ಪೂರ್ಣವಾಗಿ ಒಣಗಿ ಪ್ರಾಣಿಗಳಿಗೆ ಕುಡಿಯುವ ನೀರಿನ ತೊಂದರೆ ಕಾಡಿತ್ತು.

ನೀರಿನ ದಾಹ ನೀಗಿಸಲು ಬಂಡೀಪುರ ಅರಣ್ಯ ಇಲಾಖೆ ಸೋಲಾರ್ ಪಂಪ್ಗಳನ್ನು ಬಳಸಿಕೊಂಡು ಕೆಲವು ಕೆರೆಗಳಿಗೆ ಅಲ್ಪಪ್ರಮಾಣದ ನೀರು ಒದಗಿಲಾಗಿತ್ತು. ಇದರಿಂದಾಗಿ ಪ್ರಾಣಿಗಳು ಹೆಚ್ಚಾಗಿ ದರ್ಶನ ನೀಡುತ್ತಿರಲಿಲ್ಲ. ಕಳೆದ ವರ್ಷದ ಜೂನ್ನಿಂದ ನವೆಂಬರ್ವರೆಗೆ ತಾಲೂಕಿನಲ್ಲಿ ಉತ್ತಮ ಮಳೆಯಾಗಿರುವುದರಿಂದ ಕಾಡಿನಲ್ಲಿರುವ ಕೆರೆಕಟ್ಟೆಗಳಲ್ಲಿ ನೀರು ಮತ್ತು ಮೇವು ಸಮೃದ್ಧವಾಗಿದೆ.

ಕಾಡು ಕೂಡ ಹಸಿರಾಗಿ ಕಂಗೊಳಿಸುತ್ತಿದ್ದು, ಪ್ರಾಣಿಗಳು ಅಲ್ಲಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿವೆ. ಕಾಡು ಒಣಗಿದರೆ ಹುಲಿ ಚಿರತೆಗಳು ಅಪರೂಪಕ್ಕೆ ಕಾಣ ಸಿಗುತ್ತವೆ. ಮಳೆಯಿಂದ ಪರಿಸರ ಹಸಿರಾದರೆ ಸಫಾರಿ ಹೋಗುವವರಿಗೆ ಪ್ರತಿನಿತ್ಯ ಸಫಾರಿ ವಲಯದಲ್ಲಿ ಹುಲಿ, ಚಿರತೆ ಸಹಿತ ವನ್ಯಜೀವಿಗಳು ಹೆಚ್ಚಾಗಿ ಕಾಣಸಿಗುತ್ತವೆ. ಹೆಚ್ಚು ನೀರಿರುವ ಕೆರೆಗಳ ಬಳಿ ಪ್ರಾಣಿಗಳು ವಿಶ್ರಾಂತಿ ತೆಗೆದು ಕೊಳ್ಳುತ್ತಿರುವ ದೃಶ್ಯಗಳು ಸಾಮಾನ್ಯ ವಾಗಿ ಕಾಣಸಿಗುತ್ತವೆ ಎಂದು ಸಫಾರಿಗೆ ಕರೆದೊಯ್ಯುವ ಗೈಡ್ಗಳು ತಿಳಿಸಿದ್ದಾರೆ.

ಸಫಾರಿಗೆ ಪ್ರಾಣಿಗಳನ್ನು ನೋಡಬೇಕು ಎಂದು ಬರುವವರ ಸಂಖ್ಯೆ ಹೆಚ್ಚಾಗಿದ್ದು ಮುಕ್ತ ವಲಯದ ಅರಣ್ಯ ಪ್ರದೇಶವಾದ್ದರಿಂದ ಪ್ರಾಣಿಗಳು ಕಾಣಿಸುತ್ತವೆ ಎಂಬ ಖಚಿತತೆ ಇರುವುದಿಲ್ಲ. ಕೆಲವೊಮ್ಮೆ ನಿರೀಕ್ಷೆಗಿಂತಲೂ ಹೆಚ್ಚು ಪ್ರಾಣಿಗಳು ಕಾಣಸಿಗುತ್ತವೆ. ಕೆಲವೊಮ್ಮೆ ಪ್ರಾಣಿಗಳ ದರ್ಶನವೇ ಆಗುವುದಿಲ್ಲ. ಕಾಡು ಹಸಿರಾಗಿದ್ದರೆ ಕೆರೆಗಳಲ್ಲಿ ನೀರು ಕುಡಿಯಲು ಪ್ರಾಣಿಗಳು ದಿನಕ್ಕೆ ಒಂದು ಬಾರಿಯಾದರೂ ಬರುತ್ತವೆ. ಹುಲಿ ಚಿರತೆಗಳ ದರ್ಶನವಾಗುತ್ತದೆ. ಆನೆಗಳ ಗುಂಪು ಕೂಡ ಹೆಚ್ಚು ಕಂಡು ಬರುತ್ತಿದೆ ಎಂದು ತಿಳಿಸಿದ್ದಾರೆ.

ಕೆರೆಗಳಲ್ಲಿ ಪ್ರಾಣಿಗಳಿಗೆ ನೀರು ಸಂಗ್ರಹ

ಇತ್ತೀಚೆಗೆ ಸಫಾರಿಗೆ ಬಂದ ಪ್ರವಾಸಿಗರಿಗೆ ಬೇಸರವಾಗಿಲ್ಲ, ಹೆಚ್ಚು ಪ್ರಾಣಿಗಳ ದರ್ಶನವಾಗಿದೆ. ಕಾಡಿನ ಭಾಗದಲ್ಲಿ ಉತ್ತಮ ಪ್ರಮಾಣದ ಮಳೆ ಬಿದ್ದಿರುವುದರಿಂದ ಕೆರೆಗಳಲ್ಲಿ ನೀರು ಸಂಗ್ರಹ ಇದೆ. ಕಾಡು ಹಸಿರಾಗಿರುವುದರಿಂದ ಹೆಚ್ಚು ಪ್ರಾಣಿಗಳು ಕಾಣುತ್ತಿದೆ. ಕುಡಿಯುವ ನೀರು ಮತ್ತು ಮೇವಿಗೆ ತೊಂದರೆಯಿಲ್ಲ ಎಂದು ಬಂಡೀಪುರ ಹುಲಿ ಯೋಜನೆ ನಿರ್ದೇಶಕ ಪ್ರಭಾಕರನ್ ತಿಳಿಸಿದ್ದಾರೆ.

share
ರಾಜ್ ಗೋಪಾಲ್ ಹಾಲಹಳ್ಳಿ
ರಾಜ್ ಗೋಪಾಲ್ ಹಾಲಹಳ್ಳಿ
Next Story
X