Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಯಾದಗಿರಿ | ಸಮಾಜಕ್ಕೆ ಕಾಯಕನಿಷ್ಠೆ,...

ಯಾದಗಿರಿ | ಸಮಾಜಕ್ಕೆ ಕಾಯಕನಿಷ್ಠೆ, ತತ್ವಾದರ್ಶ ಹೇಳಿಕೊಟ್ಟವರು ಕಾಯಕ ಶರಣರು : ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್

ವಾರ್ತಾಭಾರತಿವಾರ್ತಾಭಾರತಿ10 Feb 2025 6:13 PM IST
share
Photo of Program

ಯಾದಗಿರಿ : ಕಾಯಕನಿಷ್ಠೆಯ ತತ್ವ ಆದರ್ಶವನ್ನು ಸಮಾಜಕ್ಕೆ ತಿಳಿಸಿಕೊಟ್ಟ ಕಾಯಕ ಶರಣರು, ಕಾಯಕದಲ್ಲಿಯೇ ಕೈಲಾಸವಿದೆ ಎಂದು ಸಮಾಜಕ್ಕೆ ತಿಳಿ ಹೇಳಿದರು ಎಂದು ನಗರ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಅವರು ಹೇಳಿದರು.

ನಗರದ ಕನ್ನಡ ಸಾಹಿತ್ಯ ಪರಿಷತ್ತು ಸಭಾಂಗಣದಲ್ಲಿ ಇಂದು ಏರ್ಪಡಿಸಿದ್ದ ಕಾಯಕ ಶರಣರ ಜಯಂತಿ ಕಾರ್ಯಕ್ರಮದಲ್ಲಿ ಕಾಯಕ ಶರಣರ ಭಾವಚಿತ್ರಕ್ಕೆ ಪೂಜೆಸಲ್ಲಿಸಿ, ಗೌರವ ಅರ್ಪಿಸಿ ಅವರು ಮಾತನಾಡಿದರು.

ಸತ್ಕರ್ಮದ ಕಾಯಕದಿಂದ ವ್ಯಕ್ತಿ ಬೆಳೆಯುತ್ತಾನೆ. ಜೀವನದಲ್ಲಿ ಸದಾ ಕಾಯಕನಿರತರಾಗಬೇಕೆಂಬುದು ಶರಣರ ಧ್ಯೇಯ ಹಾಗೂ ತತ್ವಾದರ್ಶವಾಗಿತ್ತು. ಮನಸ್ಸಿನಿಂದ ಮಾಡುವ ಕಾಯಕವೇ ದೊಡ್ಡದೆಂದು ನಂಬಿದವರು ಶರಣರು. ಮಾದಾರ ಚನ್ನಯ್ಯ, ಸಮಗಾರ ಹರಳಯ್ಯ, ಡೋಹರ ಕಕ್ಕಯ್ಯ, ಉರಿಲಿಂಗ ಪೆದ್ದಿ, ಮಾದಾರ ಧೂಳಯ್ಯರವರಂತಹ ಮುಂತಾದ ಮಹಾನ್ ಶರಣರು ತಮ್ಮ ಕಾಯಕದ ಆದರ್ಶದಿಂದ ಸಮಾಜದ ಸ್ವಾಸ್ಥ್ಯವನ್ನು ಕಾಪಾಡಿದರು ಎಂದು ಹೇಳಿದರು.

12ನೆಯ ಶತಮಾನದಲ್ಲಿಯೇ ಬಸವಾದಿ ಶರಣರು ದುಡಿಮೆಯ ಮಹತ್ವವನ್ನು ಸಮಾಜಕ್ಕೆ ಹೇಳಿಕೊಟ್ಟು ಸಮಾಜ ತಿದ್ದುವ ಕಾರ್ಯ ಮಾಡಿದರು. ಅಂತಹ ಕಾಯಕ ಶರಣರು ಇಂದಿಗೂ ನಮಗೆ ದಾರಿ ದೀಪವಾಗಿದ್ದಾರೆ ಎಂದು ಹೇಳಿದರು.

ಸಮಾರಂಭದಲ್ಲಿ ಉಪನ್ಯಾಸ ನೀಡಿದ, ಸರ್ಕಾರಿ ಪದವಿ ಕಾಲೇಜು ಉಪನ್ಯಾಸಕರಾದ ಶ್ರೀ ನರಸಪ್ಪ ಚಿತ್ತಾಪುರ ಅವರು, ಶರಣರು ತಾವು ಮಾಡುವ ಕಾಯಕನಿಷ್ಠೆ ಹಾಗೂ ತಮ್ಮ ವಚನಗಳಿಂದಲೇ ಇಂದಿಗೂ ಸ್ಮರಣೀಯರಾಗಿದ್ದಾರೆ. ಶರಣರು ನೀಡಿದ ಸಮಾನತೆಯ ಸಿದ್ಧಾಂತ ಇಂದಿಗೂ ಪ್ರಸ್ತುತವಾಗಿದೆ. ಶರಣರು ಎಲ್ಲರನ್ನೂ ಸಮಾನವಾಗಿ ಕಂಡರು. ಶರಣರು ಆರೋಗ್ಯಕರ ಸಮಾಜಕ್ಕಾಗಿ ಶ್ರಮಿಸಿದರು ಎಂದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರ ದೇವಿ ಮಠಪತಿ, ಕಾಯಕಶರಣರ ಜಯಂತೋತ್ಸವದ ಅಧ್ಯಕ್ಷರಾದ ನಾಗರಾಜ್ ಬೀರನೋರ್, ಮಲ್ಲು ದೊಡ್ಮನಿ ಬೆಳಗೆರೆ, ಭೀಮರಾಯ ಹೊಸಮನಿ, ಶಾಂತಪ್ಪ ಖಾನಳ್ಳಿ, ಸೈದಪ್ಪ ಕೊಲೂರ, ಕಾಶಪ್ಪ ಹೆಗ್ಗಣಗೇರಾ, ಮರೆಪ್ಪ ಶಿರವಾಳ ಮತ್ತು ತಂಡ ದಿಂದ ಸಂಗೀತ ಕಾರ್ಯಕ್ರಮ ನಡೆಸಿದರು.

ಸಮಾಜದ ಮುಖಂಡರಾದ ಮರೆಪ್ಪ ಚಟ್ಟೇರಕರ್, ಗೋಪಾಲ್, ವಿಜಯಕುಮಾರ್, ಭೀಮರಾಯ ಲಿಂಗೇರಿ, ತಿಪ್ಪಣ್ಣ ಹಳಿಗೇರಾ, ಮಲ್ಲಿಕಾರ್ಜುನ್ ಜಿನೆಕೆರೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X